Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...