Homeಮುಖಪುಟಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

- Advertisement -
- Advertisement -

ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ನಂತರದ ಮತ್ತು ಸೇವಾ ಗುಣಮಟ್ಟದ ಕುರಿತು ನಡೆಯುತ್ತಿರುವ ವಾಕ್ಸಮರದದ ನಡುವೆಯೇ, ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸೋಮವಾರ ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರ ಉದ್ಯೋಗದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ಆದರೆ, ಅವರು ಕೆಲ ಷರತ್ತುಗಳನ್ನೂ ಇಟ್ಟುದ್ದಾರೆ.

ಈ ತಿಂಗಳ ಆರಂಭದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕುನಾಲ್ ಕಮ್ರಾ, “ಓಲಾದೊಂದಿಗೆ ಕೆಲಸ ಮಾಡುವ ಅಗರ್ವಾಲ್ ಅವರ ಪ್ರಸ್ತಾಪವನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಯಾವುದೇ ಆಯ್ಕೆಯಿಲ್ಲ” ಎಂದು ಹೇಳಿದ್ದಾರೆ. “ಸಾವಿರಾರು ಬಾರಿ ಟ್ಯಾಗ್ ಮಾಡಿದ ನಂತರ ನಾನು ಓಲಾ ಉದ್ಯೋಗಿ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಅಕ್ಟೋಬರ್ 6 ರಂದು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವಾ ಕೇಂದ್ರದ ಪರಿಸ್ಥಿತಿ ಕುರಿತು ಧ್ವನಿ ಎತ್ತಿದ ಬಳಿಕ, ಓಲಾ ಸಿಇಓ ಕುನಾಲ್ ಕಮ್ರಾ ಅವರನ್ನು ಬಂದು ಸಹಾಯ ಮಾಡುವಂತೆ ಆಹ್ವಾನಿಸಿದ್ದರು.

ಓಲಾ ಸೇವಾ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯ ಇವಿ ಸ್ಕೂಟರ್‌ಗಳನ್ನು ನಿಲ್ಲಿಸಿರುವುದನ್ನು ತೋರಿಸುವ ಚಿತ್ರವನ್ನು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದಾಗ ವಾಗ್ವಾದ ಪ್ರಾರಂಭವಾಯಿತು.

“ಭಾರತೀಯ ಗ್ರಾಹಕರು ಧ್ವನಿ ಹೊಂದಿದ್ದಾರೆಯೇ? ಅವರು ಇದಕ್ಕೆ ಅರ್ಹರೇ? ದ್ವಿಚಕ್ರ ವಾಹನಗಳು ಅನೇಕ ದೈನಂದಿನ ಕೂಲಿ ಕಾರ್ಮಿಕರ ಜೀವನಾಡಿ” ಎಂದು ಹಾಸ್ಯನಟ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಭವಿಶ್ ಅಗರ್ವಾಲ್, ಇದು ಪೇಯ್ಡ್‌ ಟ್ವೀಟ್ ಎಂದು ಹೇಳಿದ್ದಾರೆ.

“ನೀವು ತುಂಬಾ ಕಾಳಜಿ ವಹಿಸುತ್ತಿರುವುದರಿಂದ, ಬನ್ನಿ ಮತ್ತು ನಮಗೆ ಸಹಾಯ ಮಾಡಿ! ಈ ಪಾವತಿಸಿದ (ಪೇಯ್ಡ್‌) ಟ್ವೀಟ್‌ಗಾಗಿ ಅಥವಾ ನಿಮ್ಮ ವಿಫಲ ಹಾಸ್ಯ ವೃತ್ತಿಯಿಂದ ನೀವು ಗಳಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ನಾನು ಪಾವತಿಸುತ್ತೇನೆ. ನಾವು ಸೇವಾ ನೆಟ್‌ವರ್ಕ್ ಅನ್ನು ವೇಗವಾಗಿ ವಿಸ್ತರಿಸುತ್ತಿದ್ದೇವೆ ಮತ್ತು ಬ್ಯಾಕ್‌ಲಾಗ್‌ಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು” ಎಂದು ಅವರು ಬರೆದಿದ್ದಾರೆ.

ಈಗ, ಓಲಾ ವಿವಿಧ “ಆಕ್ಷನ್ ಪಾಯಿಂಟ್‌ಗಳಿಗೆ” ಬದ್ಧರಾಗುವ ಮೂಲಕ “ಈ ಸಹಯೋಗವನ್ನು ಮುಚ್ಚಬಹುದು” ಎಂದು ಕಮ್ರಾ ಹೇಳಿದರು.

“ಓಲಾ ಎಲೆಕ್ಟ್ರಿಕ್ ತಮ್ಮ ಸೇವಾ ಬಿಕ್ಕಟ್ಟನ್ನು ಪರಿಹರಿಸಲು ತಮ್ಮ ಬದ್ಧತೆಯಲ್ಲಿ ದೃಢವಾಗಿ ನಿಲ್ಲಬೇಕು. ಅಧಿಕೃತ ಸೇವಾ ಕೇಂದ್ರಗಳಲ್ಲಿ ಸೇವಾ ವಿನಂತಿಯಿಂದ ಏಳು ವ್ಯವಹಾರ ದಿನಗಳಲ್ಲಿ ಎಲ್ಲ ಸ್ಕೂಟರ್ ರಿಪೇರಿಗಳನ್ನು ಪೂರ್ಣಗೊಳಿಸಲು ಓಲಾ ಬದ್ಧವಾಗಿರಬೇಕು” ಎಂದು ಅವರು ಒತ್ತಾಯಿಸಿದರು.

ಏಳು ದಿನಗಳ ನಂತರದ ರಿಪೇರಿಗಾಗಿ, “ಗ್ರಾಹಕರು ಮೊದಲು ತಾತ್ಕಾಲಿಕ ಬದಲಿ ಸ್ಕೂಟರ್ ಅಥವಾ ರಿಪೇರಿ ಪೂರ್ಣಗೊಳ್ಳುವವರೆಗೆ ದೈನಂದಿನ ಸಾರಿಗೆ ಮರುಪಾವತಿ ₹500 ಅನ್ನು ಪಡೆಯುತ್ತಾರೆ” ಎಂದು ಅವರು ಹೇಳಿದರು.

“ಹೆಚ್ಚುವರಿಯಾಗಿ, ಗ್ರಾಹಕರು ವಿಳಂಬವಾದ ದಿನಕ್ಕೆ ₹500 ಗಳಿಸುತ್ತಾರೆ (₹ 50,000 ವರೆಗೆ)” ಎಂದು ಕುನಾಲ್ ಕಮ್ರಾ ಹೇಳಿದರು.

ಪ್ರತಿ ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಎರಡು ವಿಮೆಗಳೊಂದಿಗೆ ಮಾರಾಟ ಮಾಡಬೇಕು. ಒಂದು ವಾಹನಕ್ಕೆ ಮತ್ತು ಇನ್ನೊಂದು ಸೇವೆಗಳಿಗೆ. ಸೇವಾ ವಿಮೆಯು ಗ್ರಾಹಕರಿಗೆ ಉಚಿತವಾಗಿರಬೇಕು ಎಂದು ಕಮ್ರಾ ಷರತ್ತು ಮುಂದಿಟ್ಟಿದ್ದಾರೆ. ಅಗರ್ವಾಲ್ ಅವರು ಕಮ್ರಾ ಬೇಡಿಕೆಗಳಿಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

ಓಲಾ ವಿಚಾರವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವ ಕುನಾಲ್ ಕಮ್ರಾ, “ಮಹಾರಾಷ್ಟ್ರದ ಸರ್ವಿಸ್ ಸೆಂಟರ್‌ನಲ್ಲಿ ಎಲ್ಲ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೆಟ್ಟ ಸ್ಥಿತಿಯಲ್ಲಿ ಇವೆ. ಅವುಗಳನ್ನು ನೋಡಿಕೊಳ್ಳಲು ಯಾವುದೇ ಅರ್ಹ ಇಂಜಿನಿಯರ್‌ಗಳು ಅಥವಾ ತಂತ್ರಜ್ಞರು ಆನ್-ಸೈಟ್‌ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ. “ಭಾರತೀಯ ಗ್ರಾಹಕರ ಕಷ್ಟಗಳನ್ನು ನೋಡಿ” ಎಂದು ವಿನಂತಿಸಿದರು.

“ಸಚಿವ ನಿತಿನ್ ಗಡ್ಕರಿ ದಯವಿಟ್ಟು ಭಾರತೀಯ ಗ್ರಾಹಕರ ಕಷ್ಟವನ್ನು ನೋಡಿ, ಅವರ ಧ್ವನಿ ಕೇಳುತ್ತಿಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಅವರು ಪ್ರಾಥಮಿಕವಾಗಿ ಓಲಾ ಜವಾಬ್ದಾರಿಯಾಗಿರುವ ಸಮಸ್ಯೆಯನ್ನು ಪರಿಹರಿಸಲು ಕೆಟ್ಟ ಸಾಲಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಸರ್ಕಾರಿ ಸಂಸ್ಥೆಗಳು ಯಾವಾಗ ಮಧ್ಯಪ್ರವೇಶಿಸುತ್ತವೆ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಓಲಾ ಎಲೆಕ್ಟ್ರಿಕ್‌ನ ಮುಖ್ಯ ಹಣಕಾಸು ಅಧಿಕಾರಿ ಹರೀಶ್ ಅಭಿಚಂದನಿ ಅವರು, “ಓಲಾ ಎಲೆಕ್ಟ್ರಿಕ್‌ನ ಸಮಗ್ರ ಪರಿಹಾರ ಕಾರ್ಯವಿಧಾನದ ಪ್ರಕಾರ, ಗ್ರಾಹಕರ ಸಂಪೂರ್ಣ ತೃಪ್ತಿಗಾಗಿ ಶೇ.99 ರಷ್ಟು ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ; ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...