Homeಮುಖಪುಟಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

- Advertisement -
- Advertisement -

ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ನಂತರದ ಮತ್ತು ಸೇವಾ ಗುಣಮಟ್ಟದ ಕುರಿತು ನಡೆಯುತ್ತಿರುವ ವಾಕ್ಸಮರದದ ನಡುವೆಯೇ, ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸೋಮವಾರ ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರ ಉದ್ಯೋಗದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ಆದರೆ, ಅವರು ಕೆಲ ಷರತ್ತುಗಳನ್ನೂ ಇಟ್ಟುದ್ದಾರೆ.

ಈ ತಿಂಗಳ ಆರಂಭದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕುನಾಲ್ ಕಮ್ರಾ, “ಓಲಾದೊಂದಿಗೆ ಕೆಲಸ ಮಾಡುವ ಅಗರ್ವಾಲ್ ಅವರ ಪ್ರಸ್ತಾಪವನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಯಾವುದೇ ಆಯ್ಕೆಯಿಲ್ಲ” ಎಂದು ಹೇಳಿದ್ದಾರೆ. “ಸಾವಿರಾರು ಬಾರಿ ಟ್ಯಾಗ್ ಮಾಡಿದ ನಂತರ ನಾನು ಓಲಾ ಉದ್ಯೋಗಿ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಅಕ್ಟೋಬರ್ 6 ರಂದು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವಾ ಕೇಂದ್ರದ ಪರಿಸ್ಥಿತಿ ಕುರಿತು ಧ್ವನಿ ಎತ್ತಿದ ಬಳಿಕ, ಓಲಾ ಸಿಇಓ ಕುನಾಲ್ ಕಮ್ರಾ ಅವರನ್ನು ಬಂದು ಸಹಾಯ ಮಾಡುವಂತೆ ಆಹ್ವಾನಿಸಿದ್ದರು.

ಓಲಾ ಸೇವಾ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯ ಇವಿ ಸ್ಕೂಟರ್‌ಗಳನ್ನು ನಿಲ್ಲಿಸಿರುವುದನ್ನು ತೋರಿಸುವ ಚಿತ್ರವನ್ನು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದಾಗ ವಾಗ್ವಾದ ಪ್ರಾರಂಭವಾಯಿತು.

“ಭಾರತೀಯ ಗ್ರಾಹಕರು ಧ್ವನಿ ಹೊಂದಿದ್ದಾರೆಯೇ? ಅವರು ಇದಕ್ಕೆ ಅರ್ಹರೇ? ದ್ವಿಚಕ್ರ ವಾಹನಗಳು ಅನೇಕ ದೈನಂದಿನ ಕೂಲಿ ಕಾರ್ಮಿಕರ ಜೀವನಾಡಿ” ಎಂದು ಹಾಸ್ಯನಟ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಭವಿಶ್ ಅಗರ್ವಾಲ್, ಇದು ಪೇಯ್ಡ್‌ ಟ್ವೀಟ್ ಎಂದು ಹೇಳಿದ್ದಾರೆ.

“ನೀವು ತುಂಬಾ ಕಾಳಜಿ ವಹಿಸುತ್ತಿರುವುದರಿಂದ, ಬನ್ನಿ ಮತ್ತು ನಮಗೆ ಸಹಾಯ ಮಾಡಿ! ಈ ಪಾವತಿಸಿದ (ಪೇಯ್ಡ್‌) ಟ್ವೀಟ್‌ಗಾಗಿ ಅಥವಾ ನಿಮ್ಮ ವಿಫಲ ಹಾಸ್ಯ ವೃತ್ತಿಯಿಂದ ನೀವು ಗಳಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ನಾನು ಪಾವತಿಸುತ್ತೇನೆ. ನಾವು ಸೇವಾ ನೆಟ್‌ವರ್ಕ್ ಅನ್ನು ವೇಗವಾಗಿ ವಿಸ್ತರಿಸುತ್ತಿದ್ದೇವೆ ಮತ್ತು ಬ್ಯಾಕ್‌ಲಾಗ್‌ಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು” ಎಂದು ಅವರು ಬರೆದಿದ್ದಾರೆ.

ಈಗ, ಓಲಾ ವಿವಿಧ “ಆಕ್ಷನ್ ಪಾಯಿಂಟ್‌ಗಳಿಗೆ” ಬದ್ಧರಾಗುವ ಮೂಲಕ “ಈ ಸಹಯೋಗವನ್ನು ಮುಚ್ಚಬಹುದು” ಎಂದು ಕಮ್ರಾ ಹೇಳಿದರು.

“ಓಲಾ ಎಲೆಕ್ಟ್ರಿಕ್ ತಮ್ಮ ಸೇವಾ ಬಿಕ್ಕಟ್ಟನ್ನು ಪರಿಹರಿಸಲು ತಮ್ಮ ಬದ್ಧತೆಯಲ್ಲಿ ದೃಢವಾಗಿ ನಿಲ್ಲಬೇಕು. ಅಧಿಕೃತ ಸೇವಾ ಕೇಂದ್ರಗಳಲ್ಲಿ ಸೇವಾ ವಿನಂತಿಯಿಂದ ಏಳು ವ್ಯವಹಾರ ದಿನಗಳಲ್ಲಿ ಎಲ್ಲ ಸ್ಕೂಟರ್ ರಿಪೇರಿಗಳನ್ನು ಪೂರ್ಣಗೊಳಿಸಲು ಓಲಾ ಬದ್ಧವಾಗಿರಬೇಕು” ಎಂದು ಅವರು ಒತ್ತಾಯಿಸಿದರು.

ಏಳು ದಿನಗಳ ನಂತರದ ರಿಪೇರಿಗಾಗಿ, “ಗ್ರಾಹಕರು ಮೊದಲು ತಾತ್ಕಾಲಿಕ ಬದಲಿ ಸ್ಕೂಟರ್ ಅಥವಾ ರಿಪೇರಿ ಪೂರ್ಣಗೊಳ್ಳುವವರೆಗೆ ದೈನಂದಿನ ಸಾರಿಗೆ ಮರುಪಾವತಿ ₹500 ಅನ್ನು ಪಡೆಯುತ್ತಾರೆ” ಎಂದು ಅವರು ಹೇಳಿದರು.

“ಹೆಚ್ಚುವರಿಯಾಗಿ, ಗ್ರಾಹಕರು ವಿಳಂಬವಾದ ದಿನಕ್ಕೆ ₹500 ಗಳಿಸುತ್ತಾರೆ (₹ 50,000 ವರೆಗೆ)” ಎಂದು ಕುನಾಲ್ ಕಮ್ರಾ ಹೇಳಿದರು.

ಪ್ರತಿ ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಎರಡು ವಿಮೆಗಳೊಂದಿಗೆ ಮಾರಾಟ ಮಾಡಬೇಕು. ಒಂದು ವಾಹನಕ್ಕೆ ಮತ್ತು ಇನ್ನೊಂದು ಸೇವೆಗಳಿಗೆ. ಸೇವಾ ವಿಮೆಯು ಗ್ರಾಹಕರಿಗೆ ಉಚಿತವಾಗಿರಬೇಕು ಎಂದು ಕಮ್ರಾ ಷರತ್ತು ಮುಂದಿಟ್ಟಿದ್ದಾರೆ. ಅಗರ್ವಾಲ್ ಅವರು ಕಮ್ರಾ ಬೇಡಿಕೆಗಳಿಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

ಓಲಾ ವಿಚಾರವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವ ಕುನಾಲ್ ಕಮ್ರಾ, “ಮಹಾರಾಷ್ಟ್ರದ ಸರ್ವಿಸ್ ಸೆಂಟರ್‌ನಲ್ಲಿ ಎಲ್ಲ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೆಟ್ಟ ಸ್ಥಿತಿಯಲ್ಲಿ ಇವೆ. ಅವುಗಳನ್ನು ನೋಡಿಕೊಳ್ಳಲು ಯಾವುದೇ ಅರ್ಹ ಇಂಜಿನಿಯರ್‌ಗಳು ಅಥವಾ ತಂತ್ರಜ್ಞರು ಆನ್-ಸೈಟ್‌ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ. “ಭಾರತೀಯ ಗ್ರಾಹಕರ ಕಷ್ಟಗಳನ್ನು ನೋಡಿ” ಎಂದು ವಿನಂತಿಸಿದರು.

“ಸಚಿವ ನಿತಿನ್ ಗಡ್ಕರಿ ದಯವಿಟ್ಟು ಭಾರತೀಯ ಗ್ರಾಹಕರ ಕಷ್ಟವನ್ನು ನೋಡಿ, ಅವರ ಧ್ವನಿ ಕೇಳುತ್ತಿಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಅವರು ಪ್ರಾಥಮಿಕವಾಗಿ ಓಲಾ ಜವಾಬ್ದಾರಿಯಾಗಿರುವ ಸಮಸ್ಯೆಯನ್ನು ಪರಿಹರಿಸಲು ಕೆಟ್ಟ ಸಾಲಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಸರ್ಕಾರಿ ಸಂಸ್ಥೆಗಳು ಯಾವಾಗ ಮಧ್ಯಪ್ರವೇಶಿಸುತ್ತವೆ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಓಲಾ ಎಲೆಕ್ಟ್ರಿಕ್‌ನ ಮುಖ್ಯ ಹಣಕಾಸು ಅಧಿಕಾರಿ ಹರೀಶ್ ಅಭಿಚಂದನಿ ಅವರು, “ಓಲಾ ಎಲೆಕ್ಟ್ರಿಕ್‌ನ ಸಮಗ್ರ ಪರಿಹಾರ ಕಾರ್ಯವಿಧಾನದ ಪ್ರಕಾರ, ಗ್ರಾಹಕರ ಸಂಪೂರ್ಣ ತೃಪ್ತಿಗಾಗಿ ಶೇ.99 ರಷ್ಟು ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ; ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...