Homeಮುಖಪುಟಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

- Advertisement -
- Advertisement -

ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ನಂತರದ ಮತ್ತು ಸೇವಾ ಗುಣಮಟ್ಟದ ಕುರಿತು ನಡೆಯುತ್ತಿರುವ ವಾಕ್ಸಮರದದ ನಡುವೆಯೇ, ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸೋಮವಾರ ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರ ಉದ್ಯೋಗದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ಆದರೆ, ಅವರು ಕೆಲ ಷರತ್ತುಗಳನ್ನೂ ಇಟ್ಟುದ್ದಾರೆ.

ಈ ತಿಂಗಳ ಆರಂಭದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕುನಾಲ್ ಕಮ್ರಾ, “ಓಲಾದೊಂದಿಗೆ ಕೆಲಸ ಮಾಡುವ ಅಗರ್ವಾಲ್ ಅವರ ಪ್ರಸ್ತಾಪವನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಯಾವುದೇ ಆಯ್ಕೆಯಿಲ್ಲ” ಎಂದು ಹೇಳಿದ್ದಾರೆ. “ಸಾವಿರಾರು ಬಾರಿ ಟ್ಯಾಗ್ ಮಾಡಿದ ನಂತರ ನಾನು ಓಲಾ ಉದ್ಯೋಗಿ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಅಕ್ಟೋಬರ್ 6 ರಂದು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವಾ ಕೇಂದ್ರದ ಪರಿಸ್ಥಿತಿ ಕುರಿತು ಧ್ವನಿ ಎತ್ತಿದ ಬಳಿಕ, ಓಲಾ ಸಿಇಓ ಕುನಾಲ್ ಕಮ್ರಾ ಅವರನ್ನು ಬಂದು ಸಹಾಯ ಮಾಡುವಂತೆ ಆಹ್ವಾನಿಸಿದ್ದರು.

ಓಲಾ ಸೇವಾ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯ ಇವಿ ಸ್ಕೂಟರ್‌ಗಳನ್ನು ನಿಲ್ಲಿಸಿರುವುದನ್ನು ತೋರಿಸುವ ಚಿತ್ರವನ್ನು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದಾಗ ವಾಗ್ವಾದ ಪ್ರಾರಂಭವಾಯಿತು.

“ಭಾರತೀಯ ಗ್ರಾಹಕರು ಧ್ವನಿ ಹೊಂದಿದ್ದಾರೆಯೇ? ಅವರು ಇದಕ್ಕೆ ಅರ್ಹರೇ? ದ್ವಿಚಕ್ರ ವಾಹನಗಳು ಅನೇಕ ದೈನಂದಿನ ಕೂಲಿ ಕಾರ್ಮಿಕರ ಜೀವನಾಡಿ” ಎಂದು ಹಾಸ್ಯನಟ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಭವಿಶ್ ಅಗರ್ವಾಲ್, ಇದು ಪೇಯ್ಡ್‌ ಟ್ವೀಟ್ ಎಂದು ಹೇಳಿದ್ದಾರೆ.

“ನೀವು ತುಂಬಾ ಕಾಳಜಿ ವಹಿಸುತ್ತಿರುವುದರಿಂದ, ಬನ್ನಿ ಮತ್ತು ನಮಗೆ ಸಹಾಯ ಮಾಡಿ! ಈ ಪಾವತಿಸಿದ (ಪೇಯ್ಡ್‌) ಟ್ವೀಟ್‌ಗಾಗಿ ಅಥವಾ ನಿಮ್ಮ ವಿಫಲ ಹಾಸ್ಯ ವೃತ್ತಿಯಿಂದ ನೀವು ಗಳಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ನಾನು ಪಾವತಿಸುತ್ತೇನೆ. ನಾವು ಸೇವಾ ನೆಟ್‌ವರ್ಕ್ ಅನ್ನು ವೇಗವಾಗಿ ವಿಸ್ತರಿಸುತ್ತಿದ್ದೇವೆ ಮತ್ತು ಬ್ಯಾಕ್‌ಲಾಗ್‌ಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು” ಎಂದು ಅವರು ಬರೆದಿದ್ದಾರೆ.

ಈಗ, ಓಲಾ ವಿವಿಧ “ಆಕ್ಷನ್ ಪಾಯಿಂಟ್‌ಗಳಿಗೆ” ಬದ್ಧರಾಗುವ ಮೂಲಕ “ಈ ಸಹಯೋಗವನ್ನು ಮುಚ್ಚಬಹುದು” ಎಂದು ಕಮ್ರಾ ಹೇಳಿದರು.

“ಓಲಾ ಎಲೆಕ್ಟ್ರಿಕ್ ತಮ್ಮ ಸೇವಾ ಬಿಕ್ಕಟ್ಟನ್ನು ಪರಿಹರಿಸಲು ತಮ್ಮ ಬದ್ಧತೆಯಲ್ಲಿ ದೃಢವಾಗಿ ನಿಲ್ಲಬೇಕು. ಅಧಿಕೃತ ಸೇವಾ ಕೇಂದ್ರಗಳಲ್ಲಿ ಸೇವಾ ವಿನಂತಿಯಿಂದ ಏಳು ವ್ಯವಹಾರ ದಿನಗಳಲ್ಲಿ ಎಲ್ಲ ಸ್ಕೂಟರ್ ರಿಪೇರಿಗಳನ್ನು ಪೂರ್ಣಗೊಳಿಸಲು ಓಲಾ ಬದ್ಧವಾಗಿರಬೇಕು” ಎಂದು ಅವರು ಒತ್ತಾಯಿಸಿದರು.

ಏಳು ದಿನಗಳ ನಂತರದ ರಿಪೇರಿಗಾಗಿ, “ಗ್ರಾಹಕರು ಮೊದಲು ತಾತ್ಕಾಲಿಕ ಬದಲಿ ಸ್ಕೂಟರ್ ಅಥವಾ ರಿಪೇರಿ ಪೂರ್ಣಗೊಳ್ಳುವವರೆಗೆ ದೈನಂದಿನ ಸಾರಿಗೆ ಮರುಪಾವತಿ ₹500 ಅನ್ನು ಪಡೆಯುತ್ತಾರೆ” ಎಂದು ಅವರು ಹೇಳಿದರು.

“ಹೆಚ್ಚುವರಿಯಾಗಿ, ಗ್ರಾಹಕರು ವಿಳಂಬವಾದ ದಿನಕ್ಕೆ ₹500 ಗಳಿಸುತ್ತಾರೆ (₹ 50,000 ವರೆಗೆ)” ಎಂದು ಕುನಾಲ್ ಕಮ್ರಾ ಹೇಳಿದರು.

ಪ್ರತಿ ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಎರಡು ವಿಮೆಗಳೊಂದಿಗೆ ಮಾರಾಟ ಮಾಡಬೇಕು. ಒಂದು ವಾಹನಕ್ಕೆ ಮತ್ತು ಇನ್ನೊಂದು ಸೇವೆಗಳಿಗೆ. ಸೇವಾ ವಿಮೆಯು ಗ್ರಾಹಕರಿಗೆ ಉಚಿತವಾಗಿರಬೇಕು ಎಂದು ಕಮ್ರಾ ಷರತ್ತು ಮುಂದಿಟ್ಟಿದ್ದಾರೆ. ಅಗರ್ವಾಲ್ ಅವರು ಕಮ್ರಾ ಬೇಡಿಕೆಗಳಿಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

ಓಲಾ ವಿಚಾರವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವ ಕುನಾಲ್ ಕಮ್ರಾ, “ಮಹಾರಾಷ್ಟ್ರದ ಸರ್ವಿಸ್ ಸೆಂಟರ್‌ನಲ್ಲಿ ಎಲ್ಲ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೆಟ್ಟ ಸ್ಥಿತಿಯಲ್ಲಿ ಇವೆ. ಅವುಗಳನ್ನು ನೋಡಿಕೊಳ್ಳಲು ಯಾವುದೇ ಅರ್ಹ ಇಂಜಿನಿಯರ್‌ಗಳು ಅಥವಾ ತಂತ್ರಜ್ಞರು ಆನ್-ಸೈಟ್‌ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ. “ಭಾರತೀಯ ಗ್ರಾಹಕರ ಕಷ್ಟಗಳನ್ನು ನೋಡಿ” ಎಂದು ವಿನಂತಿಸಿದರು.

“ಸಚಿವ ನಿತಿನ್ ಗಡ್ಕರಿ ದಯವಿಟ್ಟು ಭಾರತೀಯ ಗ್ರಾಹಕರ ಕಷ್ಟವನ್ನು ನೋಡಿ, ಅವರ ಧ್ವನಿ ಕೇಳುತ್ತಿಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಅವರು ಪ್ರಾಥಮಿಕವಾಗಿ ಓಲಾ ಜವಾಬ್ದಾರಿಯಾಗಿರುವ ಸಮಸ್ಯೆಯನ್ನು ಪರಿಹರಿಸಲು ಕೆಟ್ಟ ಸಾಲಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಸರ್ಕಾರಿ ಸಂಸ್ಥೆಗಳು ಯಾವಾಗ ಮಧ್ಯಪ್ರವೇಶಿಸುತ್ತವೆ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಓಲಾ ಎಲೆಕ್ಟ್ರಿಕ್‌ನ ಮುಖ್ಯ ಹಣಕಾಸು ಅಧಿಕಾರಿ ಹರೀಶ್ ಅಭಿಚಂದನಿ ಅವರು, “ಓಲಾ ಎಲೆಕ್ಟ್ರಿಕ್‌ನ ಸಮಗ್ರ ಪರಿಹಾರ ಕಾರ್ಯವಿಧಾನದ ಪ್ರಕಾರ, ಗ್ರಾಹಕರ ಸಂಪೂರ್ಣ ತೃಪ್ತಿಗಾಗಿ ಶೇ.99 ರಷ್ಟು ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ; ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...