Homeಮುಖಪುಟಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

ಓಲಾ ಕಂಪನಿ ಸೇರುವಂತೆ ಭವಿಶ್ ಅಗರ್ವಾಲ್ ಕೊಟ್ಟ ಆಫರ್ ಒಪ್ಪಿಕೊಂಡ ಕುನಾಲ್ ಕಮ್ರಾ!

- Advertisement -
- Advertisement -

ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ನಂತರದ ಮತ್ತು ಸೇವಾ ಗುಣಮಟ್ಟದ ಕುರಿತು ನಡೆಯುತ್ತಿರುವ ವಾಕ್ಸಮರದದ ನಡುವೆಯೇ, ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸೋಮವಾರ ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಅವರ ಉದ್ಯೋಗದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ಆದರೆ, ಅವರು ಕೆಲ ಷರತ್ತುಗಳನ್ನೂ ಇಟ್ಟುದ್ದಾರೆ.

ಈ ತಿಂಗಳ ಆರಂಭದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕುನಾಲ್ ಕಮ್ರಾ, “ಓಲಾದೊಂದಿಗೆ ಕೆಲಸ ಮಾಡುವ ಅಗರ್ವಾಲ್ ಅವರ ಪ್ರಸ್ತಾಪವನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಯಾವುದೇ ಆಯ್ಕೆಯಿಲ್ಲ” ಎಂದು ಹೇಳಿದ್ದಾರೆ. “ಸಾವಿರಾರು ಬಾರಿ ಟ್ಯಾಗ್ ಮಾಡಿದ ನಂತರ ನಾನು ಓಲಾ ಉದ್ಯೋಗಿ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಅಕ್ಟೋಬರ್ 6 ರಂದು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವಾ ಕೇಂದ್ರದ ಪರಿಸ್ಥಿತಿ ಕುರಿತು ಧ್ವನಿ ಎತ್ತಿದ ಬಳಿಕ, ಓಲಾ ಸಿಇಓ ಕುನಾಲ್ ಕಮ್ರಾ ಅವರನ್ನು ಬಂದು ಸಹಾಯ ಮಾಡುವಂತೆ ಆಹ್ವಾನಿಸಿದ್ದರು.

ಓಲಾ ಸೇವಾ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯ ಇವಿ ಸ್ಕೂಟರ್‌ಗಳನ್ನು ನಿಲ್ಲಿಸಿರುವುದನ್ನು ತೋರಿಸುವ ಚಿತ್ರವನ್ನು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದಾಗ ವಾಗ್ವಾದ ಪ್ರಾರಂಭವಾಯಿತು.

“ಭಾರತೀಯ ಗ್ರಾಹಕರು ಧ್ವನಿ ಹೊಂದಿದ್ದಾರೆಯೇ? ಅವರು ಇದಕ್ಕೆ ಅರ್ಹರೇ? ದ್ವಿಚಕ್ರ ವಾಹನಗಳು ಅನೇಕ ದೈನಂದಿನ ಕೂಲಿ ಕಾರ್ಮಿಕರ ಜೀವನಾಡಿ” ಎಂದು ಹಾಸ್ಯನಟ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಭವಿಶ್ ಅಗರ್ವಾಲ್, ಇದು ಪೇಯ್ಡ್‌ ಟ್ವೀಟ್ ಎಂದು ಹೇಳಿದ್ದಾರೆ.

“ನೀವು ತುಂಬಾ ಕಾಳಜಿ ವಹಿಸುತ್ತಿರುವುದರಿಂದ, ಬನ್ನಿ ಮತ್ತು ನಮಗೆ ಸಹಾಯ ಮಾಡಿ! ಈ ಪಾವತಿಸಿದ (ಪೇಯ್ಡ್‌) ಟ್ವೀಟ್‌ಗಾಗಿ ಅಥವಾ ನಿಮ್ಮ ವಿಫಲ ಹಾಸ್ಯ ವೃತ್ತಿಯಿಂದ ನೀವು ಗಳಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ನಾನು ಪಾವತಿಸುತ್ತೇನೆ. ನಾವು ಸೇವಾ ನೆಟ್‌ವರ್ಕ್ ಅನ್ನು ವೇಗವಾಗಿ ವಿಸ್ತರಿಸುತ್ತಿದ್ದೇವೆ ಮತ್ತು ಬ್ಯಾಕ್‌ಲಾಗ್‌ಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು” ಎಂದು ಅವರು ಬರೆದಿದ್ದಾರೆ.

ಈಗ, ಓಲಾ ವಿವಿಧ “ಆಕ್ಷನ್ ಪಾಯಿಂಟ್‌ಗಳಿಗೆ” ಬದ್ಧರಾಗುವ ಮೂಲಕ “ಈ ಸಹಯೋಗವನ್ನು ಮುಚ್ಚಬಹುದು” ಎಂದು ಕಮ್ರಾ ಹೇಳಿದರು.

“ಓಲಾ ಎಲೆಕ್ಟ್ರಿಕ್ ತಮ್ಮ ಸೇವಾ ಬಿಕ್ಕಟ್ಟನ್ನು ಪರಿಹರಿಸಲು ತಮ್ಮ ಬದ್ಧತೆಯಲ್ಲಿ ದೃಢವಾಗಿ ನಿಲ್ಲಬೇಕು. ಅಧಿಕೃತ ಸೇವಾ ಕೇಂದ್ರಗಳಲ್ಲಿ ಸೇವಾ ವಿನಂತಿಯಿಂದ ಏಳು ವ್ಯವಹಾರ ದಿನಗಳಲ್ಲಿ ಎಲ್ಲ ಸ್ಕೂಟರ್ ರಿಪೇರಿಗಳನ್ನು ಪೂರ್ಣಗೊಳಿಸಲು ಓಲಾ ಬದ್ಧವಾಗಿರಬೇಕು” ಎಂದು ಅವರು ಒತ್ತಾಯಿಸಿದರು.

ಏಳು ದಿನಗಳ ನಂತರದ ರಿಪೇರಿಗಾಗಿ, “ಗ್ರಾಹಕರು ಮೊದಲು ತಾತ್ಕಾಲಿಕ ಬದಲಿ ಸ್ಕೂಟರ್ ಅಥವಾ ರಿಪೇರಿ ಪೂರ್ಣಗೊಳ್ಳುವವರೆಗೆ ದೈನಂದಿನ ಸಾರಿಗೆ ಮರುಪಾವತಿ ₹500 ಅನ್ನು ಪಡೆಯುತ್ತಾರೆ” ಎಂದು ಅವರು ಹೇಳಿದರು.

“ಹೆಚ್ಚುವರಿಯಾಗಿ, ಗ್ರಾಹಕರು ವಿಳಂಬವಾದ ದಿನಕ್ಕೆ ₹500 ಗಳಿಸುತ್ತಾರೆ (₹ 50,000 ವರೆಗೆ)” ಎಂದು ಕುನಾಲ್ ಕಮ್ರಾ ಹೇಳಿದರು.

ಪ್ರತಿ ಹೊಸ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಎರಡು ವಿಮೆಗಳೊಂದಿಗೆ ಮಾರಾಟ ಮಾಡಬೇಕು. ಒಂದು ವಾಹನಕ್ಕೆ ಮತ್ತು ಇನ್ನೊಂದು ಸೇವೆಗಳಿಗೆ. ಸೇವಾ ವಿಮೆಯು ಗ್ರಾಹಕರಿಗೆ ಉಚಿತವಾಗಿರಬೇಕು ಎಂದು ಕಮ್ರಾ ಷರತ್ತು ಮುಂದಿಟ್ಟಿದ್ದಾರೆ. ಅಗರ್ವಾಲ್ ಅವರು ಕಮ್ರಾ ಬೇಡಿಕೆಗಳಿಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

ಓಲಾ ವಿಚಾರವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವ ಕುನಾಲ್ ಕಮ್ರಾ, “ಮಹಾರಾಷ್ಟ್ರದ ಸರ್ವಿಸ್ ಸೆಂಟರ್‌ನಲ್ಲಿ ಎಲ್ಲ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೆಟ್ಟ ಸ್ಥಿತಿಯಲ್ಲಿ ಇವೆ. ಅವುಗಳನ್ನು ನೋಡಿಕೊಳ್ಳಲು ಯಾವುದೇ ಅರ್ಹ ಇಂಜಿನಿಯರ್‌ಗಳು ಅಥವಾ ತಂತ್ರಜ್ಞರು ಆನ್-ಸೈಟ್‌ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ. “ಭಾರತೀಯ ಗ್ರಾಹಕರ ಕಷ್ಟಗಳನ್ನು ನೋಡಿ” ಎಂದು ವಿನಂತಿಸಿದರು.

“ಸಚಿವ ನಿತಿನ್ ಗಡ್ಕರಿ ದಯವಿಟ್ಟು ಭಾರತೀಯ ಗ್ರಾಹಕರ ಕಷ್ಟವನ್ನು ನೋಡಿ, ಅವರ ಧ್ವನಿ ಕೇಳುತ್ತಿಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಅವರು ಪ್ರಾಥಮಿಕವಾಗಿ ಓಲಾ ಜವಾಬ್ದಾರಿಯಾಗಿರುವ ಸಮಸ್ಯೆಯನ್ನು ಪರಿಹರಿಸಲು ಕೆಟ್ಟ ಸಾಲಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಸರ್ಕಾರಿ ಸಂಸ್ಥೆಗಳು ಯಾವಾಗ ಮಧ್ಯಪ್ರವೇಶಿಸುತ್ತವೆ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಓಲಾ ಎಲೆಕ್ಟ್ರಿಕ್‌ನ ಮುಖ್ಯ ಹಣಕಾಸು ಅಧಿಕಾರಿ ಹರೀಶ್ ಅಭಿಚಂದನಿ ಅವರು, “ಓಲಾ ಎಲೆಕ್ಟ್ರಿಕ್‌ನ ಸಮಗ್ರ ಪರಿಹಾರ ಕಾರ್ಯವಿಧಾನದ ಪ್ರಕಾರ, ಗ್ರಾಹಕರ ಸಂಪೂರ್ಣ ತೃಪ್ತಿಗಾಗಿ ಶೇ.99 ರಷ್ಟು ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ; ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...