Homeಮುಖಪುಟಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

- Advertisement -
- Advertisement -

ಇತ್ತೀಚೆಗೆ ವಿವಾದಕ್ಕೆ ಸಿಲುಕಿರುವ ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಅಧಿಕಾರಿಗಳ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಅವರ ಮನವಿಯನ್ನು ಮುಂಬೈ ಪೊಲೀಸರು ತಿರಸ್ಕರಿಸಿದ್ದಾರೆ.

ಕಮ್ರಾ ಅವರ ವಕೀಲರು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವೈಯಕ್ತಿಕವಾಗಿ ಮೇಲ್ಮನವಿ ಹಾಗೂ ಉತ್ತರ ಸಲ್ಲಿಸಿದರು. ಆದರೂ, ಪೊಲೀಸರು ಅವರ ವಿನಂತಿಯನ್ನು ತಿರಸ್ಕರಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 35 ರ ಅಡಿಯಲ್ಲಿ ಖಾರ್ ಪೊಲೀಸರು ಇಂದು ಕುನಾಲ್ ಕಮ್ರಾ ಅವರಿಗೆ ಎರಡನೇ ಸಮನ್ಸ್ ಜಾರಿ ಮಾಡಲಿದ್ದಾರೆ.

ಇದಕ್ಕೂ ಮೊದಲು, ಮುಂಬೈ ಪೊಲೀಸರು ಮಂಗಳವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸ್ಟ್ಯಾಂಡ್-ಅಪ್ ಕಲಾವಿದರಿಗೆ ಸಮನ್ಸ್ ಕಳುಹಿಸಿದ್ದರು.

ಸ್ಟ್ಯಾಂಡ್-ಅಪ್ ಹಾಸ್ಯ ಕಾರ್ಯಕ್ರಮದ ಸಂದರ್ಭದಲ್ಲಿ ಕಮ್ರಾ ಅವರ ಹೇಳಿಕೆಗಳಿಗಾಗಿ ಎಂಐಡಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದರು. ನಂತರ. ಅದನ್ನು ಹೆಚ್ಚಿನ ತನಿಖೆಗಾಗಿ ಖಾರ್ ಪೊಲೀಸರಿಗೆ ವರ್ಗಾಯಿಸಲಾಯಿತು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿರಿಸಿಕೊಂಡು ಕಮ್ರಾ ತಮ್ಮ ವಿವಾದಾತ್ಮಕ ‘ಗದ್ದರ್’ (ದೇಶದ್ರೋಹಿ) ಜೋಕ್‌ನೊಂದಿಗೆ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದರು.

ಸ್ಟ್ಯಾಂಡ್-ಅಪ್ ಪ್ರದರ್ಶನದಲ್ಲಿ ಕಮ್ರಾ ಅವರ ಹೇಳಿಕೆಯನ್ನು ಹಲವಾರು ರಾಜಕೀಯ ನಾಯಕರು ಖಂಡಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆದರೂ, ಮಂಗಳವಾರ ಕಮ್ರಾ ಅವರು ಮುಂಬೈನ ದಿ ಹ್ಯಾಬಿಟ್ಯಾಟ್ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡರು, ಅಲ್ಲಿ ಅವರು ಈ ಹಿಂದೆ ಪ್ರದರ್ಶನ ನೀಡಿದ್ದರು.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, “ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರದ ಪರವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಮ್ಮ ಮುಖ್ಯಮಂತ್ರಿ ಹೇಳಿದ್ದಾರೆ” ಎಂದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಏಕನಾಥ್ ಶಿಂಧೆ ವಿರುದ್ಧ ಮಾಡಿದ ಆಪಾದಿತ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, “ನಾವು ಹಾಸ್ಯ ಮತ್ತು ವಿಡಂಬನೆಯನ್ನು ಪ್ರಶಂಸಿಸುತ್ತೇವೆ. ನಾವು ರಾಜಕೀಯ ವಿಡಂಬನೆಯನ್ನು ಸ್ವೀಕರಿಸುತ್ತೇವೆ. ಆದರೆ, ಅದು ದಬ್ಬಾಳಿಕೆಗೆ ಕಾರಣವಾದರೆ ನಾವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದರು.

“ಈ ಕಲಾವಿದ ಪ್ರಧಾನಿ, ಮುಖ್ಯ ನ್ಯಾಯಾಧೀಶರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ; ಅವರು ವಿವಾದ ಸೃಷ್ಟಿಸುವ ಮೂಲಕ ಖ್ಯಾತಿ ಗಳಿಸಲು ಬಯಸುತ್ತಾರೆ. ಅವರು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಕಳಪೆ ಗುಣಮಟ್ಟದ ಹಾಸ್ಯ ಪ್ರದರ್ಶಿಸಿದರು” ಎಂದು ಮುಖ್ಯಮಂತ್ರಿ ಹೇಳಿದರು.

ಸ್ಕ್ರ್ಯಾಪಿಂಗ್ ನೀತಿಯಿಂದ ವಾಹನ ಬಿಡಿಭಾಗಗಳ ಬೆಲೆ ಶೇ.30 ರಷ್ಟು ಕಡಿಮೆಯಾಗುತ್ತದೆ: ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...