Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...