Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...