Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...