Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...