Homeಮುಖಪುಟಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ದೂರು ದಾಖಲು, ಕಮ್ರಾಗೆ ಬೆದರಿಕೆ ಹಾಕಿದ ಶಿವಸೇನೆ

- Advertisement -
- Advertisement -

ಸ್ಟಾಂಡ್‌ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರನ್ನು ಕೆರಳಿಸಿದೆ.

ಇತ್ತೀಚೆಗೆ ನಡೆದ ‘ನಯ ಭಾರತ್’ ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಕುರಿತು ಚರ್ಚಿಸುವ ವೇಳೆ, ಶಿವಸೇನೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಶಿಂದೆ ಅವರನ್ನು ಕಮ್ರಾ ಪರೋಕ್ಷವಾಗಿ ಟೀಕಿಸಿದ್ದು, ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಾಗಿ ಆರೋಪಿಸಲಾಗಿದೆ.

ಕಮ್ರಾ ಸ್ವತಃ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ ಅವರು ‘ಥಾಣೆಯ ನಾಯಕ’ ಎಂದು ಉಲ್ಲೇಖಿಸಿ ‘ದಿಲ್ ತೋ ಪಾಗಲ್ ಹೈ’ ಹಾಡಿನ ದಾಟಿಯಲ್ಲಿ ಹಾಡೊಂದನ್ನು ಹಾಡಿ ಶಿಂದೆ ಅವರನ್ನು ಅಣಕಿಸಿದ್ದಾರೆ. ಅವರ ದೈಹಿಕ ನೋಟ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗಿನ ಹೊಂದಾಣಿಕೆಯ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಆದರೆ, ಎಲ್ಲೂ ಶಿಂದೆ ಹೆಸರು ಉಲ್ಲೇಖಿಸಿಲ್ಲ.

ಕುನಾಲ್ ಕಮ್ರಾ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಂಬೈನಲ್ಲಿ ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಮ್ರಾ ಅವರ ಫೋಟೋಗಳನ್ನು ಸುಟ್ಟುಹಾಕಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಮುಂಬೈನ ಖಾರ್ ಪ್ರದೇಶದ ಹೋಟೆಲ್‌ ಅನ್ನು ಧ್ವಂಸಗೊಳಿಸಿದ್ದಾರೆ.

ಇದು “ಶಿಂಧೆ ಅವರ ಮೇಲೆ ಅಪಪ್ರಚಾರ ಮಾಡುವ ಪಿತೂರಿ” ಎಂದಿರುವ ಶಿವಸೇನೆ, ಕುನಾಲ್ ಕಮ್ರಾ, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಶಿವಸೇನಾ ನಾಯಕ ರಾಹುಲ್ ಕನಾಲ್ ನೀಡಿದ ದೂರಿನಲ್ಲಿ, “ಇದು ಶಿಂಧೆ ಅವರ ಖ್ಯಾತಿ, ವ್ಯಕ್ತಿತ್ವಕ್ಕೆ ಧಕ್ಕೆ ತರುವ “ಪೂರ್ವ ಯೋಜಿತ ಕ್ರಿಮಿನಲ್ ಪಿತೂರಿ ಮತ್ತು ವ್ಯವಸ್ಥಿತ ಪೇಯ್ಡ್ ಅಭಿಯಾನ” ಎಂದು ಕರೆದಿದ್ದಾರೆ.

“ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದು, ಅಶ್ಲೀಲ ಪದಗಳನ್ನು ಬಳಸುವುದು ಮತ್ತು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆರೋಪಗಳನ್ನು ಮಾಡುವುದು ಸೇರಿದಂತೆ ಕುನಾಲ್ ಕಮ್ರಾ ಮಾಡಿದ ಕೃತ್ಯಗಳು ಆಕ್ರಮಣಕಾರಿ ಮಾತ್ರವಲ್ಲದೆ ಕಾನೂನುಬಾಹಿರವೂ ಆಗಿವೆ ಎನ್ನಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

ಶಿವಸೇನಾ ಶಾಸಕ ಮುರಾಜಿ ಪಟೇಲ್ ನೀಡಿದ ದೂರಿನ ಮೇರೆಗೆ ಕಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ನಾಳೆ 11 ಗಂಟೆಗೆ ಕುನಾಲ್ ಕಮ್ರಾಗೆ ಥಳಿಸುತ್ತೇವೆ” ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ನಿರುಪಮ್ ಭಾನುವಾರ ರಾತ್ರಿ ಎಕ್ಸ್‌ನಲ್ಲಿ ಬೆದರಿಕೆಯ ಪೋಸ್ಟ್ ಹಾಕಿದ್ದಾರೆ.

ಶಿವಸೇನೆ ಸಂಸದ ನರೇಶ್ ಮಸ್ಕೆ, “ದೇಶದಾದ್ಯಂತ ಸೇನಾ ಕಾರ್ಯಕರ್ತರು ಕಮ್ರಾ ಅವರ ಬೆನ್ನಟ್ಟಲಿದ್ದಾರೆ” ಎಂದಿದ್ದಾರೆ. “ನೀವು ಭಾರತದಿಂದ ಪಲಾಯನ ಮಾಡಿ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಈ ನಡುವೆ, ಉದ್ಧವ್ ಸೇನಾ ನಾಯಕರು ಕಮ್ರಾ ಕಾರ್ಯಕ್ರಮದ ನಡೆದ ಹೋಟೆಲ್‌ನ ಸ್ಟುಡಿಯೋ ಧ್ವಂಸವನ್ನು ಖಂಡಿಸಿದ್ದು, ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದು, ಫಡ್ನವೀಸ್ ಅವರನ್ನು ‘ದುರ್ಬಲ ಗೃಹ ಸಚಿವ’ ಎಂದು ಕರೆದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆದಿತ್ಯ ಠಾಕ್ರೆ, “ಏಕನಾಥ್ ಶಿಂಧೆ ಅವರ ಕುರಿತ ಹಾಡು “100% ನಿಜ” ಮತ್ತು “ಯಾರಾದರೂ ಹಾಡಿದರೆ ಅಸುರಕ್ಷಿತ ಹೇಡಿ ಮಾತ್ರ ಪ್ರತಿಕ್ರಿಯಿಸುತ್ತಾನೆ” ಎಂದು ಹೇಳಿದ್ದಾರೆ.

ಕುನಾಲ್ ಕಮ್ರಾ ಅವರು ಇದುವರೆಗೆ ವಿವಾದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕ ಪೋಸ್ಟ್‌ನಲ್ಲಿ, ಅವರು ಸಂವಿಧಾನದ ಪ್ರತಿಯನ್ನು ಹಿಡಿದಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಹೆಚ್ಚಿನ ವಿವರಣೆಯನ್ನು ನೀಡದೆ “ಮುಂದಕ್ಕೆ ಒಂದೇ ದಾರಿ” ಎಂದು ಬರೆದಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...