Homeಮುಖಪುಟಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ದೂರು ದಾಖಲು, ಕಮ್ರಾಗೆ ಬೆದರಿಕೆ ಹಾಕಿದ ಶಿವಸೇನೆ

- Advertisement -
- Advertisement -

ಸ್ಟಾಂಡ್‌ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರನ್ನು ಕೆರಳಿಸಿದೆ.

ಇತ್ತೀಚೆಗೆ ನಡೆದ ‘ನಯ ಭಾರತ್’ ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಕುರಿತು ಚರ್ಚಿಸುವ ವೇಳೆ, ಶಿವಸೇನೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಶಿಂದೆ ಅವರನ್ನು ಕಮ್ರಾ ಪರೋಕ್ಷವಾಗಿ ಟೀಕಿಸಿದ್ದು, ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಾಗಿ ಆರೋಪಿಸಲಾಗಿದೆ.

ಕಮ್ರಾ ಸ್ವತಃ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ ಅವರು ‘ಥಾಣೆಯ ನಾಯಕ’ ಎಂದು ಉಲ್ಲೇಖಿಸಿ ‘ದಿಲ್ ತೋ ಪಾಗಲ್ ಹೈ’ ಹಾಡಿನ ದಾಟಿಯಲ್ಲಿ ಹಾಡೊಂದನ್ನು ಹಾಡಿ ಶಿಂದೆ ಅವರನ್ನು ಅಣಕಿಸಿದ್ದಾರೆ. ಅವರ ದೈಹಿಕ ನೋಟ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗಿನ ಹೊಂದಾಣಿಕೆಯ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಆದರೆ, ಎಲ್ಲೂ ಶಿಂದೆ ಹೆಸರು ಉಲ್ಲೇಖಿಸಿಲ್ಲ.

ಕುನಾಲ್ ಕಮ್ರಾ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಂಬೈನಲ್ಲಿ ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಮ್ರಾ ಅವರ ಫೋಟೋಗಳನ್ನು ಸುಟ್ಟುಹಾಕಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಮುಂಬೈನ ಖಾರ್ ಪ್ರದೇಶದ ಹೋಟೆಲ್‌ ಅನ್ನು ಧ್ವಂಸಗೊಳಿಸಿದ್ದಾರೆ.

ಇದು “ಶಿಂಧೆ ಅವರ ಮೇಲೆ ಅಪಪ್ರಚಾರ ಮಾಡುವ ಪಿತೂರಿ” ಎಂದಿರುವ ಶಿವಸೇನೆ, ಕುನಾಲ್ ಕಮ್ರಾ, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಶಿವಸೇನಾ ನಾಯಕ ರಾಹುಲ್ ಕನಾಲ್ ನೀಡಿದ ದೂರಿನಲ್ಲಿ, “ಇದು ಶಿಂಧೆ ಅವರ ಖ್ಯಾತಿ, ವ್ಯಕ್ತಿತ್ವಕ್ಕೆ ಧಕ್ಕೆ ತರುವ “ಪೂರ್ವ ಯೋಜಿತ ಕ್ರಿಮಿನಲ್ ಪಿತೂರಿ ಮತ್ತು ವ್ಯವಸ್ಥಿತ ಪೇಯ್ಡ್ ಅಭಿಯಾನ” ಎಂದು ಕರೆದಿದ್ದಾರೆ.

“ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದು, ಅಶ್ಲೀಲ ಪದಗಳನ್ನು ಬಳಸುವುದು ಮತ್ತು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆರೋಪಗಳನ್ನು ಮಾಡುವುದು ಸೇರಿದಂತೆ ಕುನಾಲ್ ಕಮ್ರಾ ಮಾಡಿದ ಕೃತ್ಯಗಳು ಆಕ್ರಮಣಕಾರಿ ಮಾತ್ರವಲ್ಲದೆ ಕಾನೂನುಬಾಹಿರವೂ ಆಗಿವೆ ಎನ್ನಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

ಶಿವಸೇನಾ ಶಾಸಕ ಮುರಾಜಿ ಪಟೇಲ್ ನೀಡಿದ ದೂರಿನ ಮೇರೆಗೆ ಕಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ನಾಳೆ 11 ಗಂಟೆಗೆ ಕುನಾಲ್ ಕಮ್ರಾಗೆ ಥಳಿಸುತ್ತೇವೆ” ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ನಿರುಪಮ್ ಭಾನುವಾರ ರಾತ್ರಿ ಎಕ್ಸ್‌ನಲ್ಲಿ ಬೆದರಿಕೆಯ ಪೋಸ್ಟ್ ಹಾಕಿದ್ದಾರೆ.

ಶಿವಸೇನೆ ಸಂಸದ ನರೇಶ್ ಮಸ್ಕೆ, “ದೇಶದಾದ್ಯಂತ ಸೇನಾ ಕಾರ್ಯಕರ್ತರು ಕಮ್ರಾ ಅವರ ಬೆನ್ನಟ್ಟಲಿದ್ದಾರೆ” ಎಂದಿದ್ದಾರೆ. “ನೀವು ಭಾರತದಿಂದ ಪಲಾಯನ ಮಾಡಿ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಈ ನಡುವೆ, ಉದ್ಧವ್ ಸೇನಾ ನಾಯಕರು ಕಮ್ರಾ ಕಾರ್ಯಕ್ರಮದ ನಡೆದ ಹೋಟೆಲ್‌ನ ಸ್ಟುಡಿಯೋ ಧ್ವಂಸವನ್ನು ಖಂಡಿಸಿದ್ದು, ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದು, ಫಡ್ನವೀಸ್ ಅವರನ್ನು ‘ದುರ್ಬಲ ಗೃಹ ಸಚಿವ’ ಎಂದು ಕರೆದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆದಿತ್ಯ ಠಾಕ್ರೆ, “ಏಕನಾಥ್ ಶಿಂಧೆ ಅವರ ಕುರಿತ ಹಾಡು “100% ನಿಜ” ಮತ್ತು “ಯಾರಾದರೂ ಹಾಡಿದರೆ ಅಸುರಕ್ಷಿತ ಹೇಡಿ ಮಾತ್ರ ಪ್ರತಿಕ್ರಿಯಿಸುತ್ತಾನೆ” ಎಂದು ಹೇಳಿದ್ದಾರೆ.

ಕುನಾಲ್ ಕಮ್ರಾ ಅವರು ಇದುವರೆಗೆ ವಿವಾದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕ ಪೋಸ್ಟ್‌ನಲ್ಲಿ, ಅವರು ಸಂವಿಧಾನದ ಪ್ರತಿಯನ್ನು ಹಿಡಿದಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಹೆಚ್ಚಿನ ವಿವರಣೆಯನ್ನು ನೀಡದೆ “ಮುಂದಕ್ಕೆ ಒಂದೇ ದಾರಿ” ಎಂದು ಬರೆದಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...