Homeಮುಖಪುಟಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ದೂರು ದಾಖಲು, ಕಮ್ರಾಗೆ ಬೆದರಿಕೆ ಹಾಕಿದ ಶಿವಸೇನೆ

- Advertisement -
- Advertisement -

ಸ್ಟಾಂಡ್‌ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರನ್ನು ಕೆರಳಿಸಿದೆ.

ಇತ್ತೀಚೆಗೆ ನಡೆದ ‘ನಯ ಭಾರತ್’ ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಕುರಿತು ಚರ್ಚಿಸುವ ವೇಳೆ, ಶಿವಸೇನೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಶಿಂದೆ ಅವರನ್ನು ಕಮ್ರಾ ಪರೋಕ್ಷವಾಗಿ ಟೀಕಿಸಿದ್ದು, ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಾಗಿ ಆರೋಪಿಸಲಾಗಿದೆ.

ಕಮ್ರಾ ಸ್ವತಃ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ ಅವರು ‘ಥಾಣೆಯ ನಾಯಕ’ ಎಂದು ಉಲ್ಲೇಖಿಸಿ ‘ದಿಲ್ ತೋ ಪಾಗಲ್ ಹೈ’ ಹಾಡಿನ ದಾಟಿಯಲ್ಲಿ ಹಾಡೊಂದನ್ನು ಹಾಡಿ ಶಿಂದೆ ಅವರನ್ನು ಅಣಕಿಸಿದ್ದಾರೆ. ಅವರ ದೈಹಿಕ ನೋಟ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗಿನ ಹೊಂದಾಣಿಕೆಯ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಆದರೆ, ಎಲ್ಲೂ ಶಿಂದೆ ಹೆಸರು ಉಲ್ಲೇಖಿಸಿಲ್ಲ.

ಕುನಾಲ್ ಕಮ್ರಾ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಂಬೈನಲ್ಲಿ ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಮ್ರಾ ಅವರ ಫೋಟೋಗಳನ್ನು ಸುಟ್ಟುಹಾಕಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಮುಂಬೈನ ಖಾರ್ ಪ್ರದೇಶದ ಹೋಟೆಲ್‌ ಅನ್ನು ಧ್ವಂಸಗೊಳಿಸಿದ್ದಾರೆ.

ಇದು “ಶಿಂಧೆ ಅವರ ಮೇಲೆ ಅಪಪ್ರಚಾರ ಮಾಡುವ ಪಿತೂರಿ” ಎಂದಿರುವ ಶಿವಸೇನೆ, ಕುನಾಲ್ ಕಮ್ರಾ, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಶಿವಸೇನಾ ನಾಯಕ ರಾಹುಲ್ ಕನಾಲ್ ನೀಡಿದ ದೂರಿನಲ್ಲಿ, “ಇದು ಶಿಂಧೆ ಅವರ ಖ್ಯಾತಿ, ವ್ಯಕ್ತಿತ್ವಕ್ಕೆ ಧಕ್ಕೆ ತರುವ “ಪೂರ್ವ ಯೋಜಿತ ಕ್ರಿಮಿನಲ್ ಪಿತೂರಿ ಮತ್ತು ವ್ಯವಸ್ಥಿತ ಪೇಯ್ಡ್ ಅಭಿಯಾನ” ಎಂದು ಕರೆದಿದ್ದಾರೆ.

“ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದು, ಅಶ್ಲೀಲ ಪದಗಳನ್ನು ಬಳಸುವುದು ಮತ್ತು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆರೋಪಗಳನ್ನು ಮಾಡುವುದು ಸೇರಿದಂತೆ ಕುನಾಲ್ ಕಮ್ರಾ ಮಾಡಿದ ಕೃತ್ಯಗಳು ಆಕ್ರಮಣಕಾರಿ ಮಾತ್ರವಲ್ಲದೆ ಕಾನೂನುಬಾಹಿರವೂ ಆಗಿವೆ ಎನ್ನಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

ಶಿವಸೇನಾ ಶಾಸಕ ಮುರಾಜಿ ಪಟೇಲ್ ನೀಡಿದ ದೂರಿನ ಮೇರೆಗೆ ಕಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ನಾಳೆ 11 ಗಂಟೆಗೆ ಕುನಾಲ್ ಕಮ್ರಾಗೆ ಥಳಿಸುತ್ತೇವೆ” ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ನಿರುಪಮ್ ಭಾನುವಾರ ರಾತ್ರಿ ಎಕ್ಸ್‌ನಲ್ಲಿ ಬೆದರಿಕೆಯ ಪೋಸ್ಟ್ ಹಾಕಿದ್ದಾರೆ.

ಶಿವಸೇನೆ ಸಂಸದ ನರೇಶ್ ಮಸ್ಕೆ, “ದೇಶದಾದ್ಯಂತ ಸೇನಾ ಕಾರ್ಯಕರ್ತರು ಕಮ್ರಾ ಅವರ ಬೆನ್ನಟ್ಟಲಿದ್ದಾರೆ” ಎಂದಿದ್ದಾರೆ. “ನೀವು ಭಾರತದಿಂದ ಪಲಾಯನ ಮಾಡಿ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಈ ನಡುವೆ, ಉದ್ಧವ್ ಸೇನಾ ನಾಯಕರು ಕಮ್ರಾ ಕಾರ್ಯಕ್ರಮದ ನಡೆದ ಹೋಟೆಲ್‌ನ ಸ್ಟುಡಿಯೋ ಧ್ವಂಸವನ್ನು ಖಂಡಿಸಿದ್ದು, ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದು, ಫಡ್ನವೀಸ್ ಅವರನ್ನು ‘ದುರ್ಬಲ ಗೃಹ ಸಚಿವ’ ಎಂದು ಕರೆದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆದಿತ್ಯ ಠಾಕ್ರೆ, “ಏಕನಾಥ್ ಶಿಂಧೆ ಅವರ ಕುರಿತ ಹಾಡು “100% ನಿಜ” ಮತ್ತು “ಯಾರಾದರೂ ಹಾಡಿದರೆ ಅಸುರಕ್ಷಿತ ಹೇಡಿ ಮಾತ್ರ ಪ್ರತಿಕ್ರಿಯಿಸುತ್ತಾನೆ” ಎಂದು ಹೇಳಿದ್ದಾರೆ.

ಕುನಾಲ್ ಕಮ್ರಾ ಅವರು ಇದುವರೆಗೆ ವಿವಾದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕ ಪೋಸ್ಟ್‌ನಲ್ಲಿ, ಅವರು ಸಂವಿಧಾನದ ಪ್ರತಿಯನ್ನು ಹಿಡಿದಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಹೆಚ್ಚಿನ ವಿವರಣೆಯನ್ನು ನೀಡದೆ “ಮುಂದಕ್ಕೆ ಒಂದೇ ದಾರಿ” ಎಂದು ಬರೆದಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...