Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಹೇಳಿಕೆ ನೀಡಿದ್ದ ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಿ ಮುಂಬೈ ಮೂಲದ ಬ್ಯಾಂಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದಕ್ಕೆ ಕುನಾಲ್ ಅವರು ಪ್ರತಿಕ್ರಿಯಿಸಿ ತನ್ನಿಂದಾದ ತೊಂದರೆಗೆ ಬ್ಯಾಂಕರ್ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಅದಾಗ್ಯೂ, ನಂತರ ಪೊಲೀಸರು ಬ್ಯಾಂಕರ್‌ಗೆ ಕರೆ ಮಾಡಿ ಅವರ ಉಪಸ್ಥಿತಿ ತಕ್ಷಣವೆ ಅಗತ್ಯವಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಪೊಲೀಸರ ಕಾರಣಕ್ಕೆ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂಬ ಸುದ್ದಿಗೆ ಕುನಾಲ್‌ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದು, ಅವರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ್ದು, “ಭಾರತದಲ್ಲಿ ನೀವು ಎಲ್ಲಿ ಬೇಕಾದರೂ ನಿಮ್ಮ ಮುಂದಿನ ಪ್ರವಾಸವನ್ನು ನಿಗದಿಪಡಿಸಿ” ಎಂದು ಅವರು ಅದರ ಖರ್ಚು ತಾನು ಭರಿಸುವುದಾಗಿ ಪ್ರಸ್ತಾಪಿಸಿದ್ದಾರೆ.

ಪೊಲೀಸ್ ಸಮನ್ಸ್ ಕಾರಣಕ್ಕೆ ಬ್ಯಾಂಕರ್ ತಮ್ಮ ಪ್ರವಾಸವನ್ನು ಕಡಿತಗೊಳಿಸಬೇಕಾಯಿತು ಎಂದು ಹೇಳುವ ಮಾಧ್ಯಮ ವರದಿಯನ್ನು ಕುನಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರರಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಮನ್ಸ್ ನೀಡಲಾಗಿದೆ ಎಂಬ ವರದಿಗಳನ್ನು ಪೊಲೀಸರು ಮಂಗಳವಾರದಂದು ನಿರಾಕರಿಸಿದ್ದರು.

ಮಾರ್ಚ್ 29 ರಂದು ಬುಕ್‌ಮೈಶೋ ಅಪ್ಲಿಕೇಶನ್ ಮೂಲಕ ಕುನಾಲ್ ಅವರ ಕಾರ್ಯಕ್ರಮಕ್ಕೆ ಟಿಕೆಟ್ ಬುಕ್ ಮಾಡಿದ್ದ ಬ್ಯಾಂಕರ್‌ಗೆ ಅವರ ಮೊಬೈಲ್ ಫೋನ್‌ನಲ್ಲಿ ಸಮನ್ಸ್ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ಮಾರ್ಚ್ 28 ರಂದು ನೀಡಿದ ದೂರಿನ ಮೇರೆಗೆ ಖಾರ್ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಕ್ಕಾಗಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲು ಬಯಸಿದ್ದರಿಂದ ಬ್ಯಾಂಕರ್‌ಗೆ ಹಾಜರಿರುವಂತೆ ತಿಳಿಸಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಅವರಿಗೆ ನೋಟಿಸ್ ಕಳುಹಿಸುವ ಮೊದಲು, ತನಿಖಾಧಿಕಾರಿ ಬ್ಯಾಂಕರ್‌ಗೆ ಕರೆ ಮಾಡಿ ಖಾರ್ ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದರು ಎಂದು ಅಧಿಕಾರಿ ಹೇಳಿದ್ದರು ಎಂದು ವರದಿಯಾಗಿದೆ. ಆದರೆ ನಂತರ, ಪ್ರಕರಣದಲ್ಲಿನ ಕೆಲವು ಬೆಳವಣಿಗೆಗಳ ನಂತರ, ಪೊಲೀಸರು ಮತ್ತೆ ಬ್ಯಾಂಕರ್‌ಗೆ ಕರೆ ಮಾಡಿ ಅವರ ತಕ್ಷಣದ ಹಾಜರಾತಿ ಅಗತ್ಯವಿಲ್ಲ ಎಂದು ಹೇಳಿದ್ದರು. ಅದಾಗ್ಯೂ, ಅವರ ಹೇಳಿಕೆ ಅಗತ್ಯವಿದ್ದಾಗ ಅವರನ್ನು ಕರೆಯಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ಪೊಲೀಸ್ ಸಮನ್ಸ್‌ನಿಂದಾಗಿ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂಬ ಮಾಧ್ಯಮ ವರದಿಗಳಿಗೆ ಕುನಾಲ್ ಪ್ರತಿಕ್ರಿಯಿಸಿದ್ದು, “ನನ್ನ ಕಾರ್ಯಕ್ರಮಕ್ಕೆ ಹಾಜರಾದ ಕಾರಣಕ್ಕೆ ನಿಮಗೆ ಉಂಟಾದ ಅನಾನುಕೂಲತೆಗೆ ನಾನು ತುಂಬಾ ವಿಷಾದಿಸುತ್ತೇನೆ. ದಯವಿಟ್ಟು ನನಗೆ ಇಮೇಲ್ ಮಾಡಿ. ನೀವು ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಮುಂದಿನ ರಜೆಯನ್ನು ನಿಗದಿಪಡಿಸಬಹುದು” ಎಂದು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತನ್ನ ಪ್ರವಾಸ ಮುಗಿಸಿ ಏಪ್ರಿಲ್ 6 ರಂದು ಹಿಂತಿರುಗಬೇಕಿದ್ದ ವ್ಯಕ್ತಿ ಪೊಲೀಸರ ಕಾರಣಕ್ಕೆ ಅದನ್ನು ಅರ್ಧದಲ್ಲೆ ಮೊಟಕುಗೊಳಿಸಿ ಸೋಮವಾರ ಮುಂಬೈಗೆ ಹಿಂತಿರುಗಬೇಕಾಯಿತು ಎಂದು ವರದಿಗಳು ಹೇಳಿವೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕುಬಾಲ್ ಪ್ರದರ್ಶಿಸಿದ ವಿಡಂಬನಾತ್ಮಕ ಹಾಡಿನಿಂದಾಗಿ ಪ್ರಕರಣ ಭುಗಿಲೆದ್ದಿತ್ತು. ಈ ಹಾಡಿನಲ್ಲಿ ಕುನಾಲ್ ಅವರು ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಅವರನ್ನು ಗುರಿ ಮಾಡಿ ದೇಶದ್ರೋಹಿ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನೆ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಮಾರ್ಚ್ 28 ರಂದು ಮದ್ರಾಸ್ ಹೈಕೋರ್ಟ್ ಕುನಾಲ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...