Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಹೇಳಿಕೆ ನೀಡಿದ್ದ ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಿ ಮುಂಬೈ ಮೂಲದ ಬ್ಯಾಂಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದಕ್ಕೆ ಕುನಾಲ್ ಅವರು ಪ್ರತಿಕ್ರಿಯಿಸಿ ತನ್ನಿಂದಾದ ತೊಂದರೆಗೆ ಬ್ಯಾಂಕರ್ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಅದಾಗ್ಯೂ, ನಂತರ ಪೊಲೀಸರು ಬ್ಯಾಂಕರ್‌ಗೆ ಕರೆ ಮಾಡಿ ಅವರ ಉಪಸ್ಥಿತಿ ತಕ್ಷಣವೆ ಅಗತ್ಯವಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಪೊಲೀಸರ ಕಾರಣಕ್ಕೆ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂಬ ಸುದ್ದಿಗೆ ಕುನಾಲ್‌ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದು, ಅವರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ್ದು, “ಭಾರತದಲ್ಲಿ ನೀವು ಎಲ್ಲಿ ಬೇಕಾದರೂ ನಿಮ್ಮ ಮುಂದಿನ ಪ್ರವಾಸವನ್ನು ನಿಗದಿಪಡಿಸಿ” ಎಂದು ಅವರು ಅದರ ಖರ್ಚು ತಾನು ಭರಿಸುವುದಾಗಿ ಪ್ರಸ್ತಾಪಿಸಿದ್ದಾರೆ.

ಪೊಲೀಸ್ ಸಮನ್ಸ್ ಕಾರಣಕ್ಕೆ ಬ್ಯಾಂಕರ್ ತಮ್ಮ ಪ್ರವಾಸವನ್ನು ಕಡಿತಗೊಳಿಸಬೇಕಾಯಿತು ಎಂದು ಹೇಳುವ ಮಾಧ್ಯಮ ವರದಿಯನ್ನು ಕುನಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರರಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಮನ್ಸ್ ನೀಡಲಾಗಿದೆ ಎಂಬ ವರದಿಗಳನ್ನು ಪೊಲೀಸರು ಮಂಗಳವಾರದಂದು ನಿರಾಕರಿಸಿದ್ದರು.

ಮಾರ್ಚ್ 29 ರಂದು ಬುಕ್‌ಮೈಶೋ ಅಪ್ಲಿಕೇಶನ್ ಮೂಲಕ ಕುನಾಲ್ ಅವರ ಕಾರ್ಯಕ್ರಮಕ್ಕೆ ಟಿಕೆಟ್ ಬುಕ್ ಮಾಡಿದ್ದ ಬ್ಯಾಂಕರ್‌ಗೆ ಅವರ ಮೊಬೈಲ್ ಫೋನ್‌ನಲ್ಲಿ ಸಮನ್ಸ್ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ಮಾರ್ಚ್ 28 ರಂದು ನೀಡಿದ ದೂರಿನ ಮೇರೆಗೆ ಖಾರ್ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಕ್ಕಾಗಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲು ಬಯಸಿದ್ದರಿಂದ ಬ್ಯಾಂಕರ್‌ಗೆ ಹಾಜರಿರುವಂತೆ ತಿಳಿಸಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಅವರಿಗೆ ನೋಟಿಸ್ ಕಳುಹಿಸುವ ಮೊದಲು, ತನಿಖಾಧಿಕಾರಿ ಬ್ಯಾಂಕರ್‌ಗೆ ಕರೆ ಮಾಡಿ ಖಾರ್ ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದರು ಎಂದು ಅಧಿಕಾರಿ ಹೇಳಿದ್ದರು ಎಂದು ವರದಿಯಾಗಿದೆ. ಆದರೆ ನಂತರ, ಪ್ರಕರಣದಲ್ಲಿನ ಕೆಲವು ಬೆಳವಣಿಗೆಗಳ ನಂತರ, ಪೊಲೀಸರು ಮತ್ತೆ ಬ್ಯಾಂಕರ್‌ಗೆ ಕರೆ ಮಾಡಿ ಅವರ ತಕ್ಷಣದ ಹಾಜರಾತಿ ಅಗತ್ಯವಿಲ್ಲ ಎಂದು ಹೇಳಿದ್ದರು. ಅದಾಗ್ಯೂ, ಅವರ ಹೇಳಿಕೆ ಅಗತ್ಯವಿದ್ದಾಗ ಅವರನ್ನು ಕರೆಯಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ಪೊಲೀಸ್ ಸಮನ್ಸ್‌ನಿಂದಾಗಿ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂಬ ಮಾಧ್ಯಮ ವರದಿಗಳಿಗೆ ಕುನಾಲ್ ಪ್ರತಿಕ್ರಿಯಿಸಿದ್ದು, “ನನ್ನ ಕಾರ್ಯಕ್ರಮಕ್ಕೆ ಹಾಜರಾದ ಕಾರಣಕ್ಕೆ ನಿಮಗೆ ಉಂಟಾದ ಅನಾನುಕೂಲತೆಗೆ ನಾನು ತುಂಬಾ ವಿಷಾದಿಸುತ್ತೇನೆ. ದಯವಿಟ್ಟು ನನಗೆ ಇಮೇಲ್ ಮಾಡಿ. ನೀವು ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಮುಂದಿನ ರಜೆಯನ್ನು ನಿಗದಿಪಡಿಸಬಹುದು” ಎಂದು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತನ್ನ ಪ್ರವಾಸ ಮುಗಿಸಿ ಏಪ್ರಿಲ್ 6 ರಂದು ಹಿಂತಿರುಗಬೇಕಿದ್ದ ವ್ಯಕ್ತಿ ಪೊಲೀಸರ ಕಾರಣಕ್ಕೆ ಅದನ್ನು ಅರ್ಧದಲ್ಲೆ ಮೊಟಕುಗೊಳಿಸಿ ಸೋಮವಾರ ಮುಂಬೈಗೆ ಹಿಂತಿರುಗಬೇಕಾಯಿತು ಎಂದು ವರದಿಗಳು ಹೇಳಿವೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕುಬಾಲ್ ಪ್ರದರ್ಶಿಸಿದ ವಿಡಂಬನಾತ್ಮಕ ಹಾಡಿನಿಂದಾಗಿ ಪ್ರಕರಣ ಭುಗಿಲೆದ್ದಿತ್ತು. ಈ ಹಾಡಿನಲ್ಲಿ ಕುನಾಲ್ ಅವರು ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಅವರನ್ನು ಗುರಿ ಮಾಡಿ ದೇಶದ್ರೋಹಿ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನೆ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಮಾರ್ಚ್ 28 ರಂದು ಮದ್ರಾಸ್ ಹೈಕೋರ್ಟ್ ಕುನಾಲ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...