Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಹೇಳಿಕೆ ನೀಡಿದ್ದ ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಿ ಮುಂಬೈ ಮೂಲದ ಬ್ಯಾಂಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದಕ್ಕೆ ಕುನಾಲ್ ಅವರು ಪ್ರತಿಕ್ರಿಯಿಸಿ ತನ್ನಿಂದಾದ ತೊಂದರೆಗೆ ಬ್ಯಾಂಕರ್ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಅದಾಗ್ಯೂ, ನಂತರ ಪೊಲೀಸರು ಬ್ಯಾಂಕರ್‌ಗೆ ಕರೆ ಮಾಡಿ ಅವರ ಉಪಸ್ಥಿತಿ ತಕ್ಷಣವೆ ಅಗತ್ಯವಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಪೊಲೀಸರ ಕಾರಣಕ್ಕೆ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂಬ ಸುದ್ದಿಗೆ ಕುನಾಲ್‌ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದು, ಅವರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ್ದು, “ಭಾರತದಲ್ಲಿ ನೀವು ಎಲ್ಲಿ ಬೇಕಾದರೂ ನಿಮ್ಮ ಮುಂದಿನ ಪ್ರವಾಸವನ್ನು ನಿಗದಿಪಡಿಸಿ” ಎಂದು ಅವರು ಅದರ ಖರ್ಚು ತಾನು ಭರಿಸುವುದಾಗಿ ಪ್ರಸ್ತಾಪಿಸಿದ್ದಾರೆ.

ಪೊಲೀಸ್ ಸಮನ್ಸ್ ಕಾರಣಕ್ಕೆ ಬ್ಯಾಂಕರ್ ತಮ್ಮ ಪ್ರವಾಸವನ್ನು ಕಡಿತಗೊಳಿಸಬೇಕಾಯಿತು ಎಂದು ಹೇಳುವ ಮಾಧ್ಯಮ ವರದಿಯನ್ನು ಕುನಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರರಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಮನ್ಸ್ ನೀಡಲಾಗಿದೆ ಎಂಬ ವರದಿಗಳನ್ನು ಪೊಲೀಸರು ಮಂಗಳವಾರದಂದು ನಿರಾಕರಿಸಿದ್ದರು.

ಮಾರ್ಚ್ 29 ರಂದು ಬುಕ್‌ಮೈಶೋ ಅಪ್ಲಿಕೇಶನ್ ಮೂಲಕ ಕುನಾಲ್ ಅವರ ಕಾರ್ಯಕ್ರಮಕ್ಕೆ ಟಿಕೆಟ್ ಬುಕ್ ಮಾಡಿದ್ದ ಬ್ಯಾಂಕರ್‌ಗೆ ಅವರ ಮೊಬೈಲ್ ಫೋನ್‌ನಲ್ಲಿ ಸಮನ್ಸ್ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ಮಾರ್ಚ್ 28 ರಂದು ನೀಡಿದ ದೂರಿನ ಮೇರೆಗೆ ಖಾರ್ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಕ್ಕಾಗಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲು ಬಯಸಿದ್ದರಿಂದ ಬ್ಯಾಂಕರ್‌ಗೆ ಹಾಜರಿರುವಂತೆ ತಿಳಿಸಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಅವರಿಗೆ ನೋಟಿಸ್ ಕಳುಹಿಸುವ ಮೊದಲು, ತನಿಖಾಧಿಕಾರಿ ಬ್ಯಾಂಕರ್‌ಗೆ ಕರೆ ಮಾಡಿ ಖಾರ್ ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದರು ಎಂದು ಅಧಿಕಾರಿ ಹೇಳಿದ್ದರು ಎಂದು ವರದಿಯಾಗಿದೆ. ಆದರೆ ನಂತರ, ಪ್ರಕರಣದಲ್ಲಿನ ಕೆಲವು ಬೆಳವಣಿಗೆಗಳ ನಂತರ, ಪೊಲೀಸರು ಮತ್ತೆ ಬ್ಯಾಂಕರ್‌ಗೆ ಕರೆ ಮಾಡಿ ಅವರ ತಕ್ಷಣದ ಹಾಜರಾತಿ ಅಗತ್ಯವಿಲ್ಲ ಎಂದು ಹೇಳಿದ್ದರು. ಅದಾಗ್ಯೂ, ಅವರ ಹೇಳಿಕೆ ಅಗತ್ಯವಿದ್ದಾಗ ಅವರನ್ನು ಕರೆಯಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ಪೊಲೀಸ್ ಸಮನ್ಸ್‌ನಿಂದಾಗಿ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂಬ ಮಾಧ್ಯಮ ವರದಿಗಳಿಗೆ ಕುನಾಲ್ ಪ್ರತಿಕ್ರಿಯಿಸಿದ್ದು, “ನನ್ನ ಕಾರ್ಯಕ್ರಮಕ್ಕೆ ಹಾಜರಾದ ಕಾರಣಕ್ಕೆ ನಿಮಗೆ ಉಂಟಾದ ಅನಾನುಕೂಲತೆಗೆ ನಾನು ತುಂಬಾ ವಿಷಾದಿಸುತ್ತೇನೆ. ದಯವಿಟ್ಟು ನನಗೆ ಇಮೇಲ್ ಮಾಡಿ. ನೀವು ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಮುಂದಿನ ರಜೆಯನ್ನು ನಿಗದಿಪಡಿಸಬಹುದು” ಎಂದು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತನ್ನ ಪ್ರವಾಸ ಮುಗಿಸಿ ಏಪ್ರಿಲ್ 6 ರಂದು ಹಿಂತಿರುಗಬೇಕಿದ್ದ ವ್ಯಕ್ತಿ ಪೊಲೀಸರ ಕಾರಣಕ್ಕೆ ಅದನ್ನು ಅರ್ಧದಲ್ಲೆ ಮೊಟಕುಗೊಳಿಸಿ ಸೋಮವಾರ ಮುಂಬೈಗೆ ಹಿಂತಿರುಗಬೇಕಾಯಿತು ಎಂದು ವರದಿಗಳು ಹೇಳಿವೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕುಬಾಲ್ ಪ್ರದರ್ಶಿಸಿದ ವಿಡಂಬನಾತ್ಮಕ ಹಾಡಿನಿಂದಾಗಿ ಪ್ರಕರಣ ಭುಗಿಲೆದ್ದಿತ್ತು. ಈ ಹಾಡಿನಲ್ಲಿ ಕುನಾಲ್ ಅವರು ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಅವರನ್ನು ಗುರಿ ಮಾಡಿ ದೇಶದ್ರೋಹಿ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನೆ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಮಾರ್ಚ್ 28 ರಂದು ಮದ್ರಾಸ್ ಹೈಕೋರ್ಟ್ ಕುನಾಲ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...