Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಟೀಕಿಸಿದ್ದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೇಕ್ಷಕರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಕಾರ್ಯಕ್ರಮದ ಎಲೆಕ್ಟ್ರಾನಿಕ್ ಪುರಾವೆಗಳು ಲಭ್ಯವಿರುವುದರಿಂದ ಪ್ರಕರಣದಲ್ಲಿ ಪ್ರೇಕ್ಷಕರಿಗೆ ಸಮನ್ಸ್ ನೀಡುವುದು ಕಡ್ಡಾಯವಲ್ಲ ಎಂದು ವಕೀಲ ವೈ.ಪಿ. ಸಿಂಗ್ ಹೇಳಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. ಕುನಾಲ್ ಕಾರ್ಯಕ್ರಮಕ್ಕೆ

ಮಾರ್ಚ್ 23 ರಂದು ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ವಿಡಂಬನಾತ್ಮಕ ಹಾಡಿನ ಆವೃತ್ತಿಯನ್ನು ಪ್ರಕಟಿಸಿದ್ದರು. ಈ ಹಾಡಿನಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ‘ದೇಶದ್ರೋಹಿ’ ಎಂದು ಟೀಕಿಸಲಾಗಿತ್ತು. ಈ ಪ್ರದರ್ಶನದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ, ಮಾರ್ಚ್ 23 ರ ರಾತ್ರಿ ಶಿವಸೇನೆಯ ಶಿಂಧೆ ನೇತೃತ್ವದ ಬಣದ ಕಾರ್ಯಕರ್ತರು ಕಾರ್ಯಕ್ರಮ ರೆಕಾರ್ಡ್‌ ಮಾಡಲಾದ ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟ್ಯಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಕುನಾಲ್ ಕಾರ್ಯಕ್ರಮಕ್ಕೆ

ಮರುದಿನ, ಮುಂಬೈ ಪೊಲೀಸರು ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತದ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಬಗ್ಗೆ ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅವರಿಗೆ ಎರಡು ಸಮನ್ಸ್‌ಗಳನ್ನು ಕಳುಹಿಸಿದ್ದರು.

ಅದಾಗ್ಯೂ, ಕುನಾಲ್ ಅವರು ಮುಂಬೈಗೆ ಪ್ರಯಾಣಿಸಲು ಏಳು ದಿನಗಳನ್ನು ಕೋರಿದ್ದು, ಆದರೆ ಪೊಲೀಸರು ಅವರ ವಿನಂತಿಯನ್ನು ನಿರಾಕರಿಸಿದ್ದರು. ಶುಕ್ರವಾರ ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಕುನಾಲ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದಾಗಿ ಒಂದು ದಿನದ ನಂತರ, ಶಿಂಧೆ ನೇತೃತ್ವದ ಶಿವಸೇನೆ ಕಾರ್ಯಕರ್ತರು ಸಲ್ಲಿಸಿದ ದೂರುಗಳ ಆಧಾರದ ಮೇಲೆ ಕುನಾಲ್ ವಿರುದ್ಧ ಮೂರು ಹೆಚ್ಚುವರಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು ಕುನಾಲ್ ಕಾಮ್ರಾ ಅವರೊಂದಿಗೆ ಕ್ಷಮೆಯಾಚಿಸುವಂತೆ ಕೋರಿದೆ. ಇಡೀ ಘಟನೆ ಬಗ್ಗೆ ಮಾರ್ಚ್ 24 ರಂದು ಪ್ರತಿಕ್ರಿಯಿಸಿದ್ದ ಕುನಾಲ್ “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ, ಕ್ಷಮೆಯಾಚಿಸುವ ಪ್ರಶ್ನೆಯೆ ಇಲ್ಲ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...