Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ಇದರ ಉದ್ದೇಶ ಸಮವಸ್ತ್ರ ಅಲ್ಲ, ಯಾವುದೇ ನೆಪದಲ್ಲಿ ಮುಸ್ಲಿಮರನ್ನು ಗುರಿಯಾಗಿಸುವುದಾಗಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್‌‌ ಧರಿಸಿರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಘಟನೆ ವಿರುದ್ದ ಕಾಂಗ್ರೆಸ್ ಸಂಸದ ಕಾರ್ತಿ ಪಿ ಚಿದಂಬರಂ ಧ್ವನಿ ಎತ್ತಿದ್ದಾರೆ. ‘ಕಾಲೇಜಿನಲ್ಲಿ ಹಿಜಾಬ್‌‌ ನಿಷೇಧಿಸುತ್ತಿರುವುದು ಉಡುಪುಗಳ ಏಕರೂಪತೆ ಜಾರಿಗೊಳಿಸಲು ಅಲ್ಲ, ಬದಲಾಗಿ ಮುಸ್ಲಿಮರನ್ನು ಯಾವುದೇ ನೆಪದಲ್ಲಿ ಗುರಿಯಾಗಿಸುವುದೇ ಇದರ ಉದ್ದೇಶ’ ಎಂದು ಅವರು ಗುರುವಾರ ಹೇಳಿದ್ದಾರೆ.

ಇತ್ತೀಚೆಗಷ್ಟೇ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಇದರ ನಂತರ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿ, ಹಿಜಾಬ್ ಧರಿಸಿ ಬರುವುದನ್ನು ವಿರೋಧಿಸಿದ್ದರು.

ಕುಂದಾಪುರ ಕಾಲೇಜಿನ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕಾರ್ತಿ ಪಿ. ಚಿದಂಬರಂ, “ಹಿಜಾಬ್ ಅನ್ನು ನಿಷೇಧಿಸುತ್ತಿರುವ ಈ ಕ್ರಮವು ವಿದ್ಯಾರ್ಥಿಗಳ ಉಡುಪುಗಳಲ್ಲಿ ಏಕರೂಪತೆಯನ್ನು ಜಾರಿಗೊಳಿಸಲು ಅಲ್ಲ. ಇಸ್ಲಾಮಿಕ್ ನಂಬಿಕೆಯ ಜನರು ಯಾವುದೇ ನೆಪದಲ್ಲಿ ಗುರಿಯಾಗುತ್ತಾರೆ ಎಂಬ ಸ್ಪಷ್ಟ ಸಂಕೇತವನ್ನು ಕಳುಹಿಸುವುದಾಗಿದೆ. ಇದೇ ರೀತಿಯ ನಿಯಮ ಸಿಖ್‌ ಪೇಟದ ವಿರುದ್ದ ಮಾಡುಲು ಯಾವುದೇ ಸಂಸ್ಥೆಗೆ ಮಾಡಲು ಧೈರ್ಯವಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಇಂದು ಕುಂದಾಪುರ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜು ಪ್ರವೇಶಿಸುವುದನ್ನು ಕಾಲೇಜ್‌‌ ನಿರಾಕರಿಸಿದೆ. ವಿದ್ಯಾರ್ಥಿನಿಯರಿಗೆ ಕಾಲೇಜಿನ ಗೇಟ್‌ ಮುಚ್ಚಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯರು “ಪರೀಕ್ಷೆಗೆ ಇನ್ನು 2 ತಿಂಗಳು ಬಾಕಿ ಇರುವಾಗ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ” ಎಂದು ಕಣ್ಣೀರು ಹಾಕಿದ್ದಾರೆ.

ವಿದ್ಯಾರ್ಥಿನಿಯರು, “ಕಾಲೇಜಿಗೆ ಪ್ರವೇಶ ಪಡೆಯುವ ವೇಳೆಯೆ ಹಿಜಾಬ್‌ ಧರಿಸಲು ಅನುಮತಿಯಿಲ್ಲ ಎಂದು ಹೇಳಿದ್ದರೆ, ನಾವು ಬೇರೆ ಕಾಲೇಜಿಗೆ ಸೇರುತ್ತಿದ್ದೆವು. ಈಗ ಪರೀಕ್ಷೆಗೆ ಎರಡು ತಿಂಗಳಿದೆ. ಈಗ ಹೊಸದಾಗಿ ನಿಯಮ ತಂದರೆ ನಮ್ಮ ಕಲಿಕೆಗೆ ತೊಂದರೆಯಾಗುತ್ತದೆ. ನಮ್ಮ ಭವಿಷ್ಯ ಯಾಕೆ ಹಾಳು ಮಾಡುತ್ತಿದ್ದೀರ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗುಲಾಮರು ಯಾವಾಗಲು ಮೊಸರಲ್ಲಿ ಕಲ್ಲು ಹಾಕಿ ಕಲ್ಲು ಹುಡುಕುವ ಕೆಲಸ ಮಾಡೋದ್ರಲ್ಲಿ ನಿಸ್ಸೀಮರು,ಆದರೆ ಅವರ ಬೇಳೆಕಾಳುಗಳು ಈಗ ಬೇಯಲ್ಲಾ ,ಬೇಯಲು ಜನ ಬಿಡೋಲ್ಲಾ ,ಈ ಚಿದಂಬರಂ ಗೆ ಬಗನಿ ಗೂಟ ಗ್ಯಾರಂಟಿ ಸಮ ವಸ್ತ್ರ ವಿಚಾರಕ್ಕೆ ಬಂದರೆ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...