Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....