Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...