Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...