Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...