Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...