Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...