Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ - ಈ ಬಾರಿ?

ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ – ಈ ಬಾರಿ?

- Advertisement -
- Advertisement -

ತುಮಕೂರು ಜಿಲ್ಲೆಗೆ ಸೇರಿರುವ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಮೂರು ಮುಖ್ಯ ಪಕ್ಷಗಳ ಜೊತೆಗೆ ಕೆ.ಆರ್.ಎಸ್ ಮತ್ತು ಬಂಡಾಯ ಅಭ್ಯರ್ಥಿಗಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ರಾಜಕೀಯ ಇತಿಹಾಸ

ಕುಣಿಗಲ್‌ನಲ್ಲಿ ಇದುವರೆಗೂ 15 ಚುನಾವಣೆಗಳು ನಡೆದಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷ 10 ಬಾರಿ ಗೆದ್ದು ಬೀಗಿದೆ. ಜನತಾಪಕ್ಷ ಎರಡು ಬಾರಿ, ಜೆಡಿಎಸ್ ಎರಡು ಬಾರಿ ಜಯ ಕಂಡರೆ, ಪಕ್ಷೇತರ ಅಭ್ಯರ್ಥಿ ಒಮ್ಮೆ ಗೆಲುವು ದಾಖಲಿಸಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ಇಲ್ಲಿ ಬಿಜೆಪಿ ಖಾತೆ ತೆರೆಯಲು ಇದುವರೆಗೂ ಸಾಧ್ಯವಾಗಿಲ್ಲ.

1952 ಮತ್ತು 1957 ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ಎನ್ ಮೂಡಲಗಿರಿಗೌಡ ಗೆಲುವು ಸಾಧಿಸಿದರೆ, 1962ರಲ್ಲಿ ಪಕ್ಷೇತರ ಅಭ್ಯರ್ಥಿ ಅಂದಾನಯ್ಯ ಶಾಸಕರಾಗಿದ್ದರು. 1967ರಲ್ಲಿ ಕಾಂಗ್ರೆಸ್‌ನಿಂದ ಜಿ.ತಮ್ಮಣ್ಣ ಆರಿಸಿ ಬಂದರೆ 1972 ಮತ್ತು 1978 ರಲ್ಲಿ ಕಾಂಗ್ರೆಸ್‌ ಸೇರಿದ್ದ ಅಂದಾನಯ್ಯ ಜಯ ಕಂಡಿದ್ದರು.

1983 ಮತ್ತು 1985ರಲ್ಲಿ ಜನತಾ ಪಕ್ಷದ ವೈ.ಕೆ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಲಕ್ಕಪ್ಪ ಆಯ್ಕೆಯಾಗಿದ್ದರು. 1994 ಮತ್ತು 1999ರಲ್ಲಿ ಎಸ್‌.ಪಿ ಮುದ್ದಹನುಮೇಗೌಡ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ನಿಂಗಪ್ಪ ಗೆಲುವು ಸಾಧಿಸಿದ್ದರು.

2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಬಿ.ರಾಮಸ್ವಾಮಿಗೌಡ 48,160 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಅವರ ಸಹೋದರರಾದ ಜೆಡಿಎಸ್ ಅಭ್ಯರ್ಥಿ ಡಿ.ನಾಗರಾಜಯ್ಯ 32,545 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಸಹೋದರರಿಬ್ಬರ ಮತವಿಭಜನೆ ಕಾಂಗ್ರೆಸ್‌ಗೆ ಅನುಕೂಲವಾಗಿತ್ತು.

2013ರಲ್ಲಿ ಜೆಡಿಎಸ್‌ನ ಡಿ.ನಾಗರಾಜಯ್ಯ 44,575 ಮತಗಳನ್ನು ಪಡೆದು ಜಯ ದಾಖಲಿಸಿದರು. ಅವರ ಸಹೋದರ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಎರಡನೇ ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಬಿ.ರಾಮಸ್ವಾಮಿಗೌಡ 33,918 ಮತ ಪಡೆದು ಮೂರನೇ ಸ್ಥಾನ ಪಡೆದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಸಿ.ಎಂ.ರವಿಕಿರಣ್ 24,604 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಿದ್ದು ಜೆಡಿಎಸ್ ಗೆಲುವಿಗೆ ಸಹಕಾರಿಯಾಯಿತು.

2018ರ ಚುನಾವಣೆಗೆ ವೇಳೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿತು. ಬಿ.ಬಿ.ರಾಮಸ್ವಾಮಿಗೌಡರ ಬದಲಿಗೆ ಡಿ.ಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಕಣಕ್ಕಳಿದು 58,697 ಮತಗಳನ್ನು ಪಡೆದು ಶಾಸಕರಾದರು. ಬಿಜೆಪಿಯ ಡಿ.ಕೃಷ್ಣಕುಮಾರ್ 53,097 ಮತಗಳನ್ನು ಪಡೆದರೆ ಅವರ ಸಹೋದರ ಜೆಡಿಎಸ್‌ನ ಡಿ.ನಾಗರಾಜಯ್ಯ 44,476 ಮತಗಳನ್ನು ಪಡೆದರು.

ಅಂದಾಜು ಜಾತಿವಾರು ಮತಗಳು

ಕುಣಿಗಲ್‌ನಲ್ಲಿ ಅಂದಾಜು 2 ಲಕ್ಷದಷ್ಟು ಮತಗಳಿದ್ದು, ಒಕ್ಕಲಿಗ ಸಮುದಾಯದ ಮತಗಳು ಅತ್ಯಧಿಕ ಸಂಖ್ಯೆಯಲ್ಲಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಒಕ್ಕಲಿಗರೇ ಆಗಿದ್ದಾರೆ.

ಒಕ್ಕಲಿಗರು: 85,000
ಪರಿಶಿಷ್ಟ ಜಾತಿ: 35,000
ಮುಸ್ಲಿಂ: 28,000
ತಿಗಳ: 8,000
ಕುರುಬರು 8,000
ಲಿಂಗಾಯತ 7,000
ಇತರೆ: 29,000

ಹಾಲಿ ಶಾಸಕ ರಂಗನಾಥ್‌ರವರಿಗೆ ಕಾಂಗ್ರೆಸ್ ಟಿಕೆಟ್

ಹಾಲಿ ಶಾಸಕ ಡಾ.ರಂಗನಾಥ್‌ರವರು ರಸ್ತೆ, ಕುಡಿಯುವ ನೀರಿನಂತಹ ಒಂದಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ. ಒಂದಷ್ಟು ಅನುದಾನವನ್ನು ತಂದಿದ್ದಾರೆ. ಆದರೆ ತಮ್ಮ ಅನುಯಾಯಿಗಳಿಗೆ ಹೆಚ್ಚಿನ ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅವರಿಗೆ ಟಿಕೆಟ್ ನೀಡಿದೆ.

ಡಾ.ರಂಗನಾಥ್

ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಬಿ.ಬಿ ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿ ಟಿಕೆಟ್‌ ಡಿ.ಕೃಷ್ಣಕುಮಾರ್ ಪಾಲು

ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಸತತ ಸೋಲು ಕಂಡಿರುವ ಅವರು ಇದು ಕೊನೆಯ ಚುನಾವಣೆ ಎಂದು ಟಿಕೆಟ್ ಪಡೆದಿದ್ದಾರೆ.

ಡಿ.ಕೃಷ್ಣಕುಮಾರ್

ಆದರೆ ಮಹಿಳೆಯರಿಗೆ ಬಾಗಿನ ಕೊಡುವುದು, ಬಾಡೂಟ ಹಾಕಿಸುವ ಕೆಲಸಗಳ ಮೂಲಕ ಬಿಜೆಪಿ ಟಿಕೆಟ್ ಬಯಸಿದ್ದ ಹಿಂದುತ್ವವಾದಿ ರಾಜೇಶ್ ಗೌಡರಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೊನೆಗೆ ಬಿಜೆಪಿ ಮುಖಂಡರು ಅವರ ಮನವೊಲಿಸಿ ನಾಮಪತ್ರ ವಾಪಸ್ ಪಡೆಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಸ್‌ಪಿ ಮುದ್ದಹನುಮೇಗೌಡರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಸಿಗುತ್ತದೆ ಎಂದೂ ಹೇಳಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ವಂಚಿತರಾದರು. ಆಗ ಬಂಡಾಯವೆದ್ದು ಪಕ್ಷೇತರ ಸ್ಪರ್ಧೆ ಘೋಷಿಸಿದರು. ನಂತರ ಬಿಜೆಪಿಯ ಹಿರಿಯ ಮುಖಂಡರು ಅವರ ಮನವೊಲಿಸಿ 2024ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಂಡಾಯ ಶಮನಗೊಳಿಸಲಾಗಿದೆ.

ಜೆಡಿಎಸ್‌ನಿಂದ ಡಿ.ನಾಗರಾಜಯ್ಯನವರ ಪುತ್ರ ಕಣಕ್ಕೆ

ಕೃಷ್ಣಕುಮಾರ್‌ರವರ ಅಣ್ಣ ಡಿ.ನಾಗರಾಜಯ್ಯನವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. 80 ವರ್ಷದ ಅವರು ತಮ್ಮ ಪುತ್ರನಿಗೆ ಟಿಕೆಟ್ ಧಾರೆಯೆರೆದರು. ಅವರ ಪುತ್ರ ಮಾಜಿ ಜಿ.ಪಂ ಅಧ್ಯಕ್ಷ ಡಾ.ಬಿ.ಎನ್ ರವಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಡಾ ರವಿ ಬಿ.ಎನ್

ಜಾಣಗೆರೆ ರಘು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ

ಭ್ರಷ್ಟಾಚಾರದ ವಿರುದ್ಧ ರಾಜಿರಹಿತ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಕಾರ್ಯದರ್ಶಿಯಾದ ರಘು ಜಾಣಗೆರೆಯವರು ಕೆಆರ್‌ಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹತ್ತಾರು ವರ್ಷಗಳಿಂದ ಕ್ಷೇತ್ರದಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅವರು ನಿರಂತರವಾಗಿ ದನಿ ಎತ್ತಿದ್ದಾರೆ. ಪೊಲೀಸರ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಚಿರಪರಿಚಿತರಾಗಿರುವ ಅವರು ಈ ಬಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಣಕ್ಕಿಳಿದಿದ್ದಾರೆ.

ರಘು ಜಾಣಗೆರೆ

ಎಚ್.ಎ ಜಯರಾಮಯ್ಯ: ಆಮ್ ಆದ್ಮಿ ಪಕ್ಷ

ಕುಣಿಗಲ್‌ನಲ್ಲಿ ಆಮ್ ಆದ್ಮಿ ಪಕ್ಷವು ಸಹ ಸದ್ದು ಮಾಡುತ್ತಿದೆ. ಎಚ್.ಎ ಜಯರಾಮಯ್ಯ ಅಭ್ಯರ್ಥಿಯಾಗಿದ್ದು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

2023ರ ಸಾಧ್ಯತೆಗಳು 

ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರು ಸ್ಪರ್ಧಿಸುತ್ತಿದ್ದರು. ಈ ಬಾರಿ ಅಪ್ಪ ಕೃಷ್ಣಕುಮಾರ್ ಮತ್ತು ಅಣ್ಣನ ಮಗ ಬಿ.ಎನ್ ರವಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮೂರು ಸೋಲಿನ ಅನುಕಂಪ ಹೊ೦ದಿರುವ ಡಿ.ಕೃಷ್ಣಕುಮಾರ್‌ರವರಿಗೆ ಗೆಲ್ಲಲು ಅವರ ಅಣ್ಣ ಅಡ್ಡಿಯಾಗಿದ್ದರು. ಈಗ ಅವರ ಪುತ್ರ ಕಣದಲ್ಲಿದ್ದಾರೆ. ಹಾಗಾಗಿ ಕುಣಿಗಲ್‌ನಲ್ಲಿ ಈ ಬಾರಿಯೂ ಬಿಜೆಪಿ ಖಾತೆ ತೆರೆಯುತ್ತದೆ ಎಂದು ಖಚಿತವಾಗಿ ಹೇಳಲು ಬರುವುದಿಲ್ಲ. ಕಾಂಗ್ರೆಸ್ ಬಂಡಾಯ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ನಡುವೆ ಕೆಆರ್‌ಎಸ್ ಪಕ್ಷದ ರಘು ಜಾಣಗೆರೆ ಮತ್ತು ಆಪ್‌ನ ಎಚ್.ಎ ಜಯರಾಮಯ್ಯ ಕೂಡ ಗಂಭೀರ ಸ್ಪರ್ಧೆಯೊಡ್ಡುತ್ತಿದ್ದಾರೆ. ಹಾಗಾಗಿ ಕುಣಿಗಲ್‌ನ ಫಲಿತಾಂಶ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...