Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ - ಈ ಬಾರಿ?

ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ – ಈ ಬಾರಿ?

- Advertisement -
- Advertisement -

ತುಮಕೂರು ಜಿಲ್ಲೆಗೆ ಸೇರಿರುವ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಮೂರು ಮುಖ್ಯ ಪಕ್ಷಗಳ ಜೊತೆಗೆ ಕೆ.ಆರ್.ಎಸ್ ಮತ್ತು ಬಂಡಾಯ ಅಭ್ಯರ್ಥಿಗಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ರಾಜಕೀಯ ಇತಿಹಾಸ

ಕುಣಿಗಲ್‌ನಲ್ಲಿ ಇದುವರೆಗೂ 15 ಚುನಾವಣೆಗಳು ನಡೆದಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷ 10 ಬಾರಿ ಗೆದ್ದು ಬೀಗಿದೆ. ಜನತಾಪಕ್ಷ ಎರಡು ಬಾರಿ, ಜೆಡಿಎಸ್ ಎರಡು ಬಾರಿ ಜಯ ಕಂಡರೆ, ಪಕ್ಷೇತರ ಅಭ್ಯರ್ಥಿ ಒಮ್ಮೆ ಗೆಲುವು ದಾಖಲಿಸಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ಇಲ್ಲಿ ಬಿಜೆಪಿ ಖಾತೆ ತೆರೆಯಲು ಇದುವರೆಗೂ ಸಾಧ್ಯವಾಗಿಲ್ಲ.

1952 ಮತ್ತು 1957 ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ಎನ್ ಮೂಡಲಗಿರಿಗೌಡ ಗೆಲುವು ಸಾಧಿಸಿದರೆ, 1962ರಲ್ಲಿ ಪಕ್ಷೇತರ ಅಭ್ಯರ್ಥಿ ಅಂದಾನಯ್ಯ ಶಾಸಕರಾಗಿದ್ದರು. 1967ರಲ್ಲಿ ಕಾಂಗ್ರೆಸ್‌ನಿಂದ ಜಿ.ತಮ್ಮಣ್ಣ ಆರಿಸಿ ಬಂದರೆ 1972 ಮತ್ತು 1978 ರಲ್ಲಿ ಕಾಂಗ್ರೆಸ್‌ ಸೇರಿದ್ದ ಅಂದಾನಯ್ಯ ಜಯ ಕಂಡಿದ್ದರು.

1983 ಮತ್ತು 1985ರಲ್ಲಿ ಜನತಾ ಪಕ್ಷದ ವೈ.ಕೆ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಲಕ್ಕಪ್ಪ ಆಯ್ಕೆಯಾಗಿದ್ದರು. 1994 ಮತ್ತು 1999ರಲ್ಲಿ ಎಸ್‌.ಪಿ ಮುದ್ದಹನುಮೇಗೌಡ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ನಿಂಗಪ್ಪ ಗೆಲುವು ಸಾಧಿಸಿದ್ದರು.

2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಬಿ.ರಾಮಸ್ವಾಮಿಗೌಡ 48,160 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಅವರ ಸಹೋದರರಾದ ಜೆಡಿಎಸ್ ಅಭ್ಯರ್ಥಿ ಡಿ.ನಾಗರಾಜಯ್ಯ 32,545 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಸಹೋದರರಿಬ್ಬರ ಮತವಿಭಜನೆ ಕಾಂಗ್ರೆಸ್‌ಗೆ ಅನುಕೂಲವಾಗಿತ್ತು.

2013ರಲ್ಲಿ ಜೆಡಿಎಸ್‌ನ ಡಿ.ನಾಗರಾಜಯ್ಯ 44,575 ಮತಗಳನ್ನು ಪಡೆದು ಜಯ ದಾಖಲಿಸಿದರು. ಅವರ ಸಹೋದರ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಎರಡನೇ ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಬಿ.ರಾಮಸ್ವಾಮಿಗೌಡ 33,918 ಮತ ಪಡೆದು ಮೂರನೇ ಸ್ಥಾನ ಪಡೆದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಸಿ.ಎಂ.ರವಿಕಿರಣ್ 24,604 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಿದ್ದು ಜೆಡಿಎಸ್ ಗೆಲುವಿಗೆ ಸಹಕಾರಿಯಾಯಿತು.

2018ರ ಚುನಾವಣೆಗೆ ವೇಳೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿತು. ಬಿ.ಬಿ.ರಾಮಸ್ವಾಮಿಗೌಡರ ಬದಲಿಗೆ ಡಿ.ಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಕಣಕ್ಕಳಿದು 58,697 ಮತಗಳನ್ನು ಪಡೆದು ಶಾಸಕರಾದರು. ಬಿಜೆಪಿಯ ಡಿ.ಕೃಷ್ಣಕುಮಾರ್ 53,097 ಮತಗಳನ್ನು ಪಡೆದರೆ ಅವರ ಸಹೋದರ ಜೆಡಿಎಸ್‌ನ ಡಿ.ನಾಗರಾಜಯ್ಯ 44,476 ಮತಗಳನ್ನು ಪಡೆದರು.

ಅಂದಾಜು ಜಾತಿವಾರು ಮತಗಳು

ಕುಣಿಗಲ್‌ನಲ್ಲಿ ಅಂದಾಜು 2 ಲಕ್ಷದಷ್ಟು ಮತಗಳಿದ್ದು, ಒಕ್ಕಲಿಗ ಸಮುದಾಯದ ಮತಗಳು ಅತ್ಯಧಿಕ ಸಂಖ್ಯೆಯಲ್ಲಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಒಕ್ಕಲಿಗರೇ ಆಗಿದ್ದಾರೆ.

ಒಕ್ಕಲಿಗರು: 85,000
ಪರಿಶಿಷ್ಟ ಜಾತಿ: 35,000
ಮುಸ್ಲಿಂ: 28,000
ತಿಗಳ: 8,000
ಕುರುಬರು 8,000
ಲಿಂಗಾಯತ 7,000
ಇತರೆ: 29,000

ಹಾಲಿ ಶಾಸಕ ರಂಗನಾಥ್‌ರವರಿಗೆ ಕಾಂಗ್ರೆಸ್ ಟಿಕೆಟ್

ಹಾಲಿ ಶಾಸಕ ಡಾ.ರಂಗನಾಥ್‌ರವರು ರಸ್ತೆ, ಕುಡಿಯುವ ನೀರಿನಂತಹ ಒಂದಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ. ಒಂದಷ್ಟು ಅನುದಾನವನ್ನು ತಂದಿದ್ದಾರೆ. ಆದರೆ ತಮ್ಮ ಅನುಯಾಯಿಗಳಿಗೆ ಹೆಚ್ಚಿನ ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅವರಿಗೆ ಟಿಕೆಟ್ ನೀಡಿದೆ.

ಡಾ.ರಂಗನಾಥ್

ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಬಿ.ಬಿ ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿ ಟಿಕೆಟ್‌ ಡಿ.ಕೃಷ್ಣಕುಮಾರ್ ಪಾಲು

ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಸತತ ಸೋಲು ಕಂಡಿರುವ ಅವರು ಇದು ಕೊನೆಯ ಚುನಾವಣೆ ಎಂದು ಟಿಕೆಟ್ ಪಡೆದಿದ್ದಾರೆ.

ಡಿ.ಕೃಷ್ಣಕುಮಾರ್

ಆದರೆ ಮಹಿಳೆಯರಿಗೆ ಬಾಗಿನ ಕೊಡುವುದು, ಬಾಡೂಟ ಹಾಕಿಸುವ ಕೆಲಸಗಳ ಮೂಲಕ ಬಿಜೆಪಿ ಟಿಕೆಟ್ ಬಯಸಿದ್ದ ಹಿಂದುತ್ವವಾದಿ ರಾಜೇಶ್ ಗೌಡರಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೊನೆಗೆ ಬಿಜೆಪಿ ಮುಖಂಡರು ಅವರ ಮನವೊಲಿಸಿ ನಾಮಪತ್ರ ವಾಪಸ್ ಪಡೆಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಸ್‌ಪಿ ಮುದ್ದಹನುಮೇಗೌಡರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಸಿಗುತ್ತದೆ ಎಂದೂ ಹೇಳಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ವಂಚಿತರಾದರು. ಆಗ ಬಂಡಾಯವೆದ್ದು ಪಕ್ಷೇತರ ಸ್ಪರ್ಧೆ ಘೋಷಿಸಿದರು. ನಂತರ ಬಿಜೆಪಿಯ ಹಿರಿಯ ಮುಖಂಡರು ಅವರ ಮನವೊಲಿಸಿ 2024ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಂಡಾಯ ಶಮನಗೊಳಿಸಲಾಗಿದೆ.

ಜೆಡಿಎಸ್‌ನಿಂದ ಡಿ.ನಾಗರಾಜಯ್ಯನವರ ಪುತ್ರ ಕಣಕ್ಕೆ

ಕೃಷ್ಣಕುಮಾರ್‌ರವರ ಅಣ್ಣ ಡಿ.ನಾಗರಾಜಯ್ಯನವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. 80 ವರ್ಷದ ಅವರು ತಮ್ಮ ಪುತ್ರನಿಗೆ ಟಿಕೆಟ್ ಧಾರೆಯೆರೆದರು. ಅವರ ಪುತ್ರ ಮಾಜಿ ಜಿ.ಪಂ ಅಧ್ಯಕ್ಷ ಡಾ.ಬಿ.ಎನ್ ರವಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಡಾ ರವಿ ಬಿ.ಎನ್

ಜಾಣಗೆರೆ ರಘು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ

ಭ್ರಷ್ಟಾಚಾರದ ವಿರುದ್ಧ ರಾಜಿರಹಿತ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಕಾರ್ಯದರ್ಶಿಯಾದ ರಘು ಜಾಣಗೆರೆಯವರು ಕೆಆರ್‌ಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹತ್ತಾರು ವರ್ಷಗಳಿಂದ ಕ್ಷೇತ್ರದಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅವರು ನಿರಂತರವಾಗಿ ದನಿ ಎತ್ತಿದ್ದಾರೆ. ಪೊಲೀಸರ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಚಿರಪರಿಚಿತರಾಗಿರುವ ಅವರು ಈ ಬಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಣಕ್ಕಿಳಿದಿದ್ದಾರೆ.

ರಘು ಜಾಣಗೆರೆ

ಎಚ್.ಎ ಜಯರಾಮಯ್ಯ: ಆಮ್ ಆದ್ಮಿ ಪಕ್ಷ

ಕುಣಿಗಲ್‌ನಲ್ಲಿ ಆಮ್ ಆದ್ಮಿ ಪಕ್ಷವು ಸಹ ಸದ್ದು ಮಾಡುತ್ತಿದೆ. ಎಚ್.ಎ ಜಯರಾಮಯ್ಯ ಅಭ್ಯರ್ಥಿಯಾಗಿದ್ದು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

2023ರ ಸಾಧ್ಯತೆಗಳು 

ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರು ಸ್ಪರ್ಧಿಸುತ್ತಿದ್ದರು. ಈ ಬಾರಿ ಅಪ್ಪ ಕೃಷ್ಣಕುಮಾರ್ ಮತ್ತು ಅಣ್ಣನ ಮಗ ಬಿ.ಎನ್ ರವಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮೂರು ಸೋಲಿನ ಅನುಕಂಪ ಹೊ೦ದಿರುವ ಡಿ.ಕೃಷ್ಣಕುಮಾರ್‌ರವರಿಗೆ ಗೆಲ್ಲಲು ಅವರ ಅಣ್ಣ ಅಡ್ಡಿಯಾಗಿದ್ದರು. ಈಗ ಅವರ ಪುತ್ರ ಕಣದಲ್ಲಿದ್ದಾರೆ. ಹಾಗಾಗಿ ಕುಣಿಗಲ್‌ನಲ್ಲಿ ಈ ಬಾರಿಯೂ ಬಿಜೆಪಿ ಖಾತೆ ತೆರೆಯುತ್ತದೆ ಎಂದು ಖಚಿತವಾಗಿ ಹೇಳಲು ಬರುವುದಿಲ್ಲ. ಕಾಂಗ್ರೆಸ್ ಬಂಡಾಯ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ನಡುವೆ ಕೆಆರ್‌ಎಸ್ ಪಕ್ಷದ ರಘು ಜಾಣಗೆರೆ ಮತ್ತು ಆಪ್‌ನ ಎಚ್.ಎ ಜಯರಾಮಯ್ಯ ಕೂಡ ಗಂಭೀರ ಸ್ಪರ್ಧೆಯೊಡ್ಡುತ್ತಿದ್ದಾರೆ. ಹಾಗಾಗಿ ಕುಣಿಗಲ್‌ನ ಫಲಿತಾಂಶ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...