Homeಕರ್ನಾಟಕಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

ಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

- Advertisement -
- Advertisement -

ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ದಹನುಮೇಗೌಡ ಅವರು ಸ್ಪರ್ಧೆ ಉದ್ದೇಶದಿಂದಲೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಇಲ್ಲಿಯೂ ಟಿಕೆಟ್‌ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ರಾಜಕೀಯದ ಆರಂಭದಿಂದ ಈ ವರೆಗೂ ಎಸ್‌ಪಿ ಮುದ್ದಹನುಮೇಗೌಡ ಅವರು ನಿರಂತರವಾಗಿ ‘ವಿಶ್ವಾಸ ದ್ರೋಹ’ ಹಾಗೂ ಸಮಯದ ಕೈಗೊಂಬೆಗೆ ತುತ್ತಾಗಿರುವ ನಾಯಕರಾಗಿದ್ದಾರೆ. ಇದೀಗ ಯಾವ ಪಕ್ಷದ ಹಂಗು ಇಲ್ಲದೇ ‘ಸ್ವತಂತ್ರ’ರಾಗಲು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ನೋವು ಹೊರಹಾಕಿಕೊಂಡಿರುವ ಅವರು, ”ಬಹಳ ನೋವಿನಿಂದ ಹೇಳಿಕೊಳ್ಳುತ್ತೇನೆ. ಕಾಂಗ್ರೆಸ್‌ನವರು 3 ಬಾರಿ, ಜೆಡಿಎಸ್‌ನವರು 1 ಬಾರಿ ಅನ್ಯಾಯ ಮಾಡಿದ್ದರು. ಈಗ ಬಿಜೆಪಿ ಟಿಕೆಟ್‌ ಕೂಡ ನೀಡಿಲ್ಲ. ಪರವಾಗಿಲ್ಲ ಜನ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಯಾರು ಏನೇ ಮಾಡಿದರೂ ಜನರ ತೀರ್ಪು ಅಂತಿಮ. ನಾನು ಜನತಾ ನ್ಯಾಯಾಲಯದಲ್ಲೇ ನ್ಯಾಯ ಕೋರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ತುಮಕೂರು ರಾಜಕಾರಣದ ದುರಂತ ನಾಯಕ

1989ರ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್‌ಪಿ ಮುದ್ದಹನುಮೇಗೌಡರಿಗೆ  ಕಾಂಗ್ರೆಸ್ ಪಕ್ಷ ಬಿ ಫಾರಂ ಕೊಟ್ಟಿತ್ತು.  ಆದರೆ ಆ ನಂತರ ಲಕ್ಕಪ್ಪ ಅವರಿಗೆ ಸಿ ಫಾರಂ ನೀಡಿ ಕಣಕ್ಕಿಳಿಸಿತ್ತು. ಅದಾದ ಬಳಿಕ 1994 ಮತ್ತು 1999ರಲ್ಲಿ ಕಾಂಗ್ರೆಸ್‌ನಿಂದ ಸತತ ಎರಡು ಬಾರಿ ಚುನಾಯಿತರಾದ ಎಸ್‌ಪಿ ಮುದ್ದಹನುಮೇಗೌಡ 2004ರಲ್ಲಿ ಪರಾಭವಗೊಂಡರು.

2004ರಲ್ಲಾದ ಒಂದೇ ಒಂದು ಸೋಲಿನಿಂದಾಗಿ ಅವರಿಗೆ ಮತ್ತೆ ಎರಡನೇ ಅವಕಾಶವೇ ಸಿಗಲೇ ಇಲ್ಲ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದಾಗ ಕುಣಿಗಲ್‌ ಅಥವಾ ತುಮಕೂರು ಗ್ರಾಮಾಂತರ ಎರಡರಲ್ಲಿ ಒಂದು ಕ್ಷೇತ್ರಕ್ಕಾದರೂ ಕಾಂಗ್ರೆಸ್‌ ಎಸ್‌ಪಿಎಂಗೆ ಟಿಕೆಟ್‌ ನೀಡಬಹುದಿತ್ತು. ಆದರೆ, ಎರಡೂ ಕ್ಷೇತ್ರಕ್ಕೂ ಇವರನ್ನು ಕಡೆಗಣಿಸಲಾಯಿತು.

2009ರಲ್ಲಿ ಜೆಡಿಎಸ್‌ನಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಪರಾಜಯಗೊಂಡಿದ್ದ ಎಸ್‌ಪಿ ಮುದ್ದಹನುಮೇಗೌಡಗೆ ಜೆಡಿಎಸ್‌ ಪಕ್ಷವು ಕುಣಿಗಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ನೀಡಿ ಕೈಕೊಟ್ಟಿತು. ಬಿ ಫಾರಂ ನೀಡಿ ಆನಂತರ ಡಿ ನಾಗರಾಜಯ್ಯ ಅವರಿಗೆ ಸಿ ಫಾರಂ ಕೊಟ್ಟು ಜೆಡಿಎಸ್‌ ಕಣಕ್ಕಿಳಿಸಿತು.

2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದ ಎಸ್‌ಪಿ ಮುದ್ದಹನುಮೇಗೌಡ ಅತ್ಯುತ್ತಮ ಸಂಸದೀಯ ಪಟುವಾಗಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಹಾಲಿ ಸಂಸದರಾಗಿದ್ದರೂ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ನೆಪದಲ್ಲಿ ಎಚ್‌ಡಿ ದೇವೇಗೌಡರನ್ನು ಕಣಕ್ಕಿಳಿಸಿ ಎಸ್‌ಪಿ ಮುದ್ದಹನುಮೇಗೌಡರಿಗೆ ಕೈಕೊಟ್ಟಿತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಕಾರಣವಿಲ್ಲದೆ ತಪ್ಪಿದ್ದಕ್ಕೆ ಕುಣಿಗಲ್‌ನಿಂದ ಕೈ ಟಿಕೆಟ್‌ಗೆ ಪಟ್ಟು ಹಿಡಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಬಂಧಿ ಹಾಲಿ ಶಾಸಕ ಡಾ ಎಚ್‌ಡಿ ರಂಗನಾಥ್‌ಗೆ ಟಿಕೆಟ್‌ ನೀಡುವುದು ಖಾತ್ರಿಯಾಗಿದ್ದರಿಂದ, ಈ ಚುನಾವಣೆಯಲ್ಲಿ ಸ್ಪರ್ಧಿಸಿ ಪಾಠ ಕಲಿಸಬೇಕು ಎಂದು ಪಣತೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು.

ಮುದ್ದಹನುಮೇಗೌಡ ಅವರು ಕಾಂಗ್ರೆಸ್‌ನಿಂದ 3 ಬಾರಿ, ಜೆಡಿಎಸ್‌ನಿಂದ ಒಂದು ಬಾರಿ ‘ವಿಶ್ವಾಸದ ಹೊಡೆತ’ ತಿಂದಿದ್ದ ಅವರು, ಈ ಬಾರಿ ಬಿಜೆಪಿಯಿಂದ ಕುಣಿಗಲ್‌ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಬಿಜೆಪಿಯು 3 ಬಾರಿ ಸೋತಿರುವ ಡಿ ಕೃಷ್ಣಕುಮಾರ್‌ಗೆ ಮಣೆ ಹಾಕಿದೆ. ಹೀಗಾಗಿ ಎಸ್‌ಪಿ ಮುದ್ದಹನುಮೇಗೌಡ ಬೇಸರದಿಂದ ಸ್ವತಂತ್ರ ಅಭ್ಯರ್ಥಿಯಾಗಲು ಮುಂದಾಗಿದ್ದಾರೆ.

ಚುನಾವಣಾ ರಾಜಕೀಯ ಜೀವನದುದ್ದಕ್ಕೂ ‘ದುರಂತ’ ನಾಯಕರಾಗಿರುವ ಎಸ್‌.ಪಿ.ಮುದ್ದಹನುಮೇಗೌಡ ಈ ಬಾರಿ ಕುಣಿಗಲ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...