Homeಕರ್ನಾಟಕಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

ಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

- Advertisement -
- Advertisement -

ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ದಹನುಮೇಗೌಡ ಅವರು ಸ್ಪರ್ಧೆ ಉದ್ದೇಶದಿಂದಲೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಇಲ್ಲಿಯೂ ಟಿಕೆಟ್‌ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ರಾಜಕೀಯದ ಆರಂಭದಿಂದ ಈ ವರೆಗೂ ಎಸ್‌ಪಿ ಮುದ್ದಹನುಮೇಗೌಡ ಅವರು ನಿರಂತರವಾಗಿ ‘ವಿಶ್ವಾಸ ದ್ರೋಹ’ ಹಾಗೂ ಸಮಯದ ಕೈಗೊಂಬೆಗೆ ತುತ್ತಾಗಿರುವ ನಾಯಕರಾಗಿದ್ದಾರೆ. ಇದೀಗ ಯಾವ ಪಕ್ಷದ ಹಂಗು ಇಲ್ಲದೇ ‘ಸ್ವತಂತ್ರ’ರಾಗಲು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ನೋವು ಹೊರಹಾಕಿಕೊಂಡಿರುವ ಅವರು, ”ಬಹಳ ನೋವಿನಿಂದ ಹೇಳಿಕೊಳ್ಳುತ್ತೇನೆ. ಕಾಂಗ್ರೆಸ್‌ನವರು 3 ಬಾರಿ, ಜೆಡಿಎಸ್‌ನವರು 1 ಬಾರಿ ಅನ್ಯಾಯ ಮಾಡಿದ್ದರು. ಈಗ ಬಿಜೆಪಿ ಟಿಕೆಟ್‌ ಕೂಡ ನೀಡಿಲ್ಲ. ಪರವಾಗಿಲ್ಲ ಜನ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಯಾರು ಏನೇ ಮಾಡಿದರೂ ಜನರ ತೀರ್ಪು ಅಂತಿಮ. ನಾನು ಜನತಾ ನ್ಯಾಯಾಲಯದಲ್ಲೇ ನ್ಯಾಯ ಕೋರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ತುಮಕೂರು ರಾಜಕಾರಣದ ದುರಂತ ನಾಯಕ

1989ರ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್‌ಪಿ ಮುದ್ದಹನುಮೇಗೌಡರಿಗೆ  ಕಾಂಗ್ರೆಸ್ ಪಕ್ಷ ಬಿ ಫಾರಂ ಕೊಟ್ಟಿತ್ತು.  ಆದರೆ ಆ ನಂತರ ಲಕ್ಕಪ್ಪ ಅವರಿಗೆ ಸಿ ಫಾರಂ ನೀಡಿ ಕಣಕ್ಕಿಳಿಸಿತ್ತು. ಅದಾದ ಬಳಿಕ 1994 ಮತ್ತು 1999ರಲ್ಲಿ ಕಾಂಗ್ರೆಸ್‌ನಿಂದ ಸತತ ಎರಡು ಬಾರಿ ಚುನಾಯಿತರಾದ ಎಸ್‌ಪಿ ಮುದ್ದಹನುಮೇಗೌಡ 2004ರಲ್ಲಿ ಪರಾಭವಗೊಂಡರು.

2004ರಲ್ಲಾದ ಒಂದೇ ಒಂದು ಸೋಲಿನಿಂದಾಗಿ ಅವರಿಗೆ ಮತ್ತೆ ಎರಡನೇ ಅವಕಾಶವೇ ಸಿಗಲೇ ಇಲ್ಲ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದಾಗ ಕುಣಿಗಲ್‌ ಅಥವಾ ತುಮಕೂರು ಗ್ರಾಮಾಂತರ ಎರಡರಲ್ಲಿ ಒಂದು ಕ್ಷೇತ್ರಕ್ಕಾದರೂ ಕಾಂಗ್ರೆಸ್‌ ಎಸ್‌ಪಿಎಂಗೆ ಟಿಕೆಟ್‌ ನೀಡಬಹುದಿತ್ತು. ಆದರೆ, ಎರಡೂ ಕ್ಷೇತ್ರಕ್ಕೂ ಇವರನ್ನು ಕಡೆಗಣಿಸಲಾಯಿತು.

2009ರಲ್ಲಿ ಜೆಡಿಎಸ್‌ನಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಪರಾಜಯಗೊಂಡಿದ್ದ ಎಸ್‌ಪಿ ಮುದ್ದಹನುಮೇಗೌಡಗೆ ಜೆಡಿಎಸ್‌ ಪಕ್ಷವು ಕುಣಿಗಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ನೀಡಿ ಕೈಕೊಟ್ಟಿತು. ಬಿ ಫಾರಂ ನೀಡಿ ಆನಂತರ ಡಿ ನಾಗರಾಜಯ್ಯ ಅವರಿಗೆ ಸಿ ಫಾರಂ ಕೊಟ್ಟು ಜೆಡಿಎಸ್‌ ಕಣಕ್ಕಿಳಿಸಿತು.

2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದ ಎಸ್‌ಪಿ ಮುದ್ದಹನುಮೇಗೌಡ ಅತ್ಯುತ್ತಮ ಸಂಸದೀಯ ಪಟುವಾಗಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಹಾಲಿ ಸಂಸದರಾಗಿದ್ದರೂ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ನೆಪದಲ್ಲಿ ಎಚ್‌ಡಿ ದೇವೇಗೌಡರನ್ನು ಕಣಕ್ಕಿಳಿಸಿ ಎಸ್‌ಪಿ ಮುದ್ದಹನುಮೇಗೌಡರಿಗೆ ಕೈಕೊಟ್ಟಿತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಕಾರಣವಿಲ್ಲದೆ ತಪ್ಪಿದ್ದಕ್ಕೆ ಕುಣಿಗಲ್‌ನಿಂದ ಕೈ ಟಿಕೆಟ್‌ಗೆ ಪಟ್ಟು ಹಿಡಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಬಂಧಿ ಹಾಲಿ ಶಾಸಕ ಡಾ ಎಚ್‌ಡಿ ರಂಗನಾಥ್‌ಗೆ ಟಿಕೆಟ್‌ ನೀಡುವುದು ಖಾತ್ರಿಯಾಗಿದ್ದರಿಂದ, ಈ ಚುನಾವಣೆಯಲ್ಲಿ ಸ್ಪರ್ಧಿಸಿ ಪಾಠ ಕಲಿಸಬೇಕು ಎಂದು ಪಣತೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು.

ಮುದ್ದಹನುಮೇಗೌಡ ಅವರು ಕಾಂಗ್ರೆಸ್‌ನಿಂದ 3 ಬಾರಿ, ಜೆಡಿಎಸ್‌ನಿಂದ ಒಂದು ಬಾರಿ ‘ವಿಶ್ವಾಸದ ಹೊಡೆತ’ ತಿಂದಿದ್ದ ಅವರು, ಈ ಬಾರಿ ಬಿಜೆಪಿಯಿಂದ ಕುಣಿಗಲ್‌ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಬಿಜೆಪಿಯು 3 ಬಾರಿ ಸೋತಿರುವ ಡಿ ಕೃಷ್ಣಕುಮಾರ್‌ಗೆ ಮಣೆ ಹಾಕಿದೆ. ಹೀಗಾಗಿ ಎಸ್‌ಪಿ ಮುದ್ದಹನುಮೇಗೌಡ ಬೇಸರದಿಂದ ಸ್ವತಂತ್ರ ಅಭ್ಯರ್ಥಿಯಾಗಲು ಮುಂದಾಗಿದ್ದಾರೆ.

ಚುನಾವಣಾ ರಾಜಕೀಯ ಜೀವನದುದ್ದಕ್ಕೂ ‘ದುರಂತ’ ನಾಯಕರಾಗಿರುವ ಎಸ್‌.ಪಿ.ಮುದ್ದಹನುಮೇಗೌಡ ಈ ಬಾರಿ ಕುಣಿಗಲ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...