Homeಕರ್ನಾಟಕಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

ಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

- Advertisement -
- Advertisement -

ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ದಹನುಮೇಗೌಡ ಅವರು ಸ್ಪರ್ಧೆ ಉದ್ದೇಶದಿಂದಲೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಇಲ್ಲಿಯೂ ಟಿಕೆಟ್‌ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ರಾಜಕೀಯದ ಆರಂಭದಿಂದ ಈ ವರೆಗೂ ಎಸ್‌ಪಿ ಮುದ್ದಹನುಮೇಗೌಡ ಅವರು ನಿರಂತರವಾಗಿ ‘ವಿಶ್ವಾಸ ದ್ರೋಹ’ ಹಾಗೂ ಸಮಯದ ಕೈಗೊಂಬೆಗೆ ತುತ್ತಾಗಿರುವ ನಾಯಕರಾಗಿದ್ದಾರೆ. ಇದೀಗ ಯಾವ ಪಕ್ಷದ ಹಂಗು ಇಲ್ಲದೇ ‘ಸ್ವತಂತ್ರ’ರಾಗಲು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ನೋವು ಹೊರಹಾಕಿಕೊಂಡಿರುವ ಅವರು, ”ಬಹಳ ನೋವಿನಿಂದ ಹೇಳಿಕೊಳ್ಳುತ್ತೇನೆ. ಕಾಂಗ್ರೆಸ್‌ನವರು 3 ಬಾರಿ, ಜೆಡಿಎಸ್‌ನವರು 1 ಬಾರಿ ಅನ್ಯಾಯ ಮಾಡಿದ್ದರು. ಈಗ ಬಿಜೆಪಿ ಟಿಕೆಟ್‌ ಕೂಡ ನೀಡಿಲ್ಲ. ಪರವಾಗಿಲ್ಲ ಜನ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಯಾರು ಏನೇ ಮಾಡಿದರೂ ಜನರ ತೀರ್ಪು ಅಂತಿಮ. ನಾನು ಜನತಾ ನ್ಯಾಯಾಲಯದಲ್ಲೇ ನ್ಯಾಯ ಕೋರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ತುಮಕೂರು ರಾಜಕಾರಣದ ದುರಂತ ನಾಯಕ

1989ರ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್‌ಪಿ ಮುದ್ದಹನುಮೇಗೌಡರಿಗೆ  ಕಾಂಗ್ರೆಸ್ ಪಕ್ಷ ಬಿ ಫಾರಂ ಕೊಟ್ಟಿತ್ತು.  ಆದರೆ ಆ ನಂತರ ಲಕ್ಕಪ್ಪ ಅವರಿಗೆ ಸಿ ಫಾರಂ ನೀಡಿ ಕಣಕ್ಕಿಳಿಸಿತ್ತು. ಅದಾದ ಬಳಿಕ 1994 ಮತ್ತು 1999ರಲ್ಲಿ ಕಾಂಗ್ರೆಸ್‌ನಿಂದ ಸತತ ಎರಡು ಬಾರಿ ಚುನಾಯಿತರಾದ ಎಸ್‌ಪಿ ಮುದ್ದಹನುಮೇಗೌಡ 2004ರಲ್ಲಿ ಪರಾಭವಗೊಂಡರು.

2004ರಲ್ಲಾದ ಒಂದೇ ಒಂದು ಸೋಲಿನಿಂದಾಗಿ ಅವರಿಗೆ ಮತ್ತೆ ಎರಡನೇ ಅವಕಾಶವೇ ಸಿಗಲೇ ಇಲ್ಲ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದಾಗ ಕುಣಿಗಲ್‌ ಅಥವಾ ತುಮಕೂರು ಗ್ರಾಮಾಂತರ ಎರಡರಲ್ಲಿ ಒಂದು ಕ್ಷೇತ್ರಕ್ಕಾದರೂ ಕಾಂಗ್ರೆಸ್‌ ಎಸ್‌ಪಿಎಂಗೆ ಟಿಕೆಟ್‌ ನೀಡಬಹುದಿತ್ತು. ಆದರೆ, ಎರಡೂ ಕ್ಷೇತ್ರಕ್ಕೂ ಇವರನ್ನು ಕಡೆಗಣಿಸಲಾಯಿತು.

2009ರಲ್ಲಿ ಜೆಡಿಎಸ್‌ನಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಪರಾಜಯಗೊಂಡಿದ್ದ ಎಸ್‌ಪಿ ಮುದ್ದಹನುಮೇಗೌಡಗೆ ಜೆಡಿಎಸ್‌ ಪಕ್ಷವು ಕುಣಿಗಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ನೀಡಿ ಕೈಕೊಟ್ಟಿತು. ಬಿ ಫಾರಂ ನೀಡಿ ಆನಂತರ ಡಿ ನಾಗರಾಜಯ್ಯ ಅವರಿಗೆ ಸಿ ಫಾರಂ ಕೊಟ್ಟು ಜೆಡಿಎಸ್‌ ಕಣಕ್ಕಿಳಿಸಿತು.

2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದ ಎಸ್‌ಪಿ ಮುದ್ದಹನುಮೇಗೌಡ ಅತ್ಯುತ್ತಮ ಸಂಸದೀಯ ಪಟುವಾಗಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಹಾಲಿ ಸಂಸದರಾಗಿದ್ದರೂ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ನೆಪದಲ್ಲಿ ಎಚ್‌ಡಿ ದೇವೇಗೌಡರನ್ನು ಕಣಕ್ಕಿಳಿಸಿ ಎಸ್‌ಪಿ ಮುದ್ದಹನುಮೇಗೌಡರಿಗೆ ಕೈಕೊಟ್ಟಿತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಕಾರಣವಿಲ್ಲದೆ ತಪ್ಪಿದ್ದಕ್ಕೆ ಕುಣಿಗಲ್‌ನಿಂದ ಕೈ ಟಿಕೆಟ್‌ಗೆ ಪಟ್ಟು ಹಿಡಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಬಂಧಿ ಹಾಲಿ ಶಾಸಕ ಡಾ ಎಚ್‌ಡಿ ರಂಗನಾಥ್‌ಗೆ ಟಿಕೆಟ್‌ ನೀಡುವುದು ಖಾತ್ರಿಯಾಗಿದ್ದರಿಂದ, ಈ ಚುನಾವಣೆಯಲ್ಲಿ ಸ್ಪರ್ಧಿಸಿ ಪಾಠ ಕಲಿಸಬೇಕು ಎಂದು ಪಣತೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು.

ಮುದ್ದಹನುಮೇಗೌಡ ಅವರು ಕಾಂಗ್ರೆಸ್‌ನಿಂದ 3 ಬಾರಿ, ಜೆಡಿಎಸ್‌ನಿಂದ ಒಂದು ಬಾರಿ ‘ವಿಶ್ವಾಸದ ಹೊಡೆತ’ ತಿಂದಿದ್ದ ಅವರು, ಈ ಬಾರಿ ಬಿಜೆಪಿಯಿಂದ ಕುಣಿಗಲ್‌ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಬಿಜೆಪಿಯು 3 ಬಾರಿ ಸೋತಿರುವ ಡಿ ಕೃಷ್ಣಕುಮಾರ್‌ಗೆ ಮಣೆ ಹಾಕಿದೆ. ಹೀಗಾಗಿ ಎಸ್‌ಪಿ ಮುದ್ದಹನುಮೇಗೌಡ ಬೇಸರದಿಂದ ಸ್ವತಂತ್ರ ಅಭ್ಯರ್ಥಿಯಾಗಲು ಮುಂದಾಗಿದ್ದಾರೆ.

ಚುನಾವಣಾ ರಾಜಕೀಯ ಜೀವನದುದ್ದಕ್ಕೂ ‘ದುರಂತ’ ನಾಯಕರಾಗಿರುವ ಎಸ್‌.ಪಿ.ಮುದ್ದಹನುಮೇಗೌಡ ಈ ಬಾರಿ ಕುಣಿಗಲ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...