Homeಕರ್ನಾಟಕಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

ಕುಣಿಗಲ್ ಬಿಜೆಪಿ ಟಿಕೆಟ್ ಮಿಸ್; ದುರಂತ ನಾಯಕ ಮುದ್ದಹನುಮೇಗೌಡ ಪಕ್ಷೇತರರಾಗಿ ಸ್ಪರ್ಧೆ

- Advertisement -
- Advertisement -

ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ದಹನುಮೇಗೌಡ ಅವರು ಸ್ಪರ್ಧೆ ಉದ್ದೇಶದಿಂದಲೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಇಲ್ಲಿಯೂ ಟಿಕೆಟ್‌ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ರಾಜಕೀಯದ ಆರಂಭದಿಂದ ಈ ವರೆಗೂ ಎಸ್‌ಪಿ ಮುದ್ದಹನುಮೇಗೌಡ ಅವರು ನಿರಂತರವಾಗಿ ‘ವಿಶ್ವಾಸ ದ್ರೋಹ’ ಹಾಗೂ ಸಮಯದ ಕೈಗೊಂಬೆಗೆ ತುತ್ತಾಗಿರುವ ನಾಯಕರಾಗಿದ್ದಾರೆ. ಇದೀಗ ಯಾವ ಪಕ್ಷದ ಹಂಗು ಇಲ್ಲದೇ ‘ಸ್ವತಂತ್ರ’ರಾಗಲು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ನೋವು ಹೊರಹಾಕಿಕೊಂಡಿರುವ ಅವರು, ”ಬಹಳ ನೋವಿನಿಂದ ಹೇಳಿಕೊಳ್ಳುತ್ತೇನೆ. ಕಾಂಗ್ರೆಸ್‌ನವರು 3 ಬಾರಿ, ಜೆಡಿಎಸ್‌ನವರು 1 ಬಾರಿ ಅನ್ಯಾಯ ಮಾಡಿದ್ದರು. ಈಗ ಬಿಜೆಪಿ ಟಿಕೆಟ್‌ ಕೂಡ ನೀಡಿಲ್ಲ. ಪರವಾಗಿಲ್ಲ ಜನ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಯಾರು ಏನೇ ಮಾಡಿದರೂ ಜನರ ತೀರ್ಪು ಅಂತಿಮ. ನಾನು ಜನತಾ ನ್ಯಾಯಾಲಯದಲ್ಲೇ ನ್ಯಾಯ ಕೋರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ತುಮಕೂರು ರಾಜಕಾರಣದ ದುರಂತ ನಾಯಕ

1989ರ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್‌ಪಿ ಮುದ್ದಹನುಮೇಗೌಡರಿಗೆ  ಕಾಂಗ್ರೆಸ್ ಪಕ್ಷ ಬಿ ಫಾರಂ ಕೊಟ್ಟಿತ್ತು.  ಆದರೆ ಆ ನಂತರ ಲಕ್ಕಪ್ಪ ಅವರಿಗೆ ಸಿ ಫಾರಂ ನೀಡಿ ಕಣಕ್ಕಿಳಿಸಿತ್ತು. ಅದಾದ ಬಳಿಕ 1994 ಮತ್ತು 1999ರಲ್ಲಿ ಕಾಂಗ್ರೆಸ್‌ನಿಂದ ಸತತ ಎರಡು ಬಾರಿ ಚುನಾಯಿತರಾದ ಎಸ್‌ಪಿ ಮುದ್ದಹನುಮೇಗೌಡ 2004ರಲ್ಲಿ ಪರಾಭವಗೊಂಡರು.

2004ರಲ್ಲಾದ ಒಂದೇ ಒಂದು ಸೋಲಿನಿಂದಾಗಿ ಅವರಿಗೆ ಮತ್ತೆ ಎರಡನೇ ಅವಕಾಶವೇ ಸಿಗಲೇ ಇಲ್ಲ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದಾಗ ಕುಣಿಗಲ್‌ ಅಥವಾ ತುಮಕೂರು ಗ್ರಾಮಾಂತರ ಎರಡರಲ್ಲಿ ಒಂದು ಕ್ಷೇತ್ರಕ್ಕಾದರೂ ಕಾಂಗ್ರೆಸ್‌ ಎಸ್‌ಪಿಎಂಗೆ ಟಿಕೆಟ್‌ ನೀಡಬಹುದಿತ್ತು. ಆದರೆ, ಎರಡೂ ಕ್ಷೇತ್ರಕ್ಕೂ ಇವರನ್ನು ಕಡೆಗಣಿಸಲಾಯಿತು.

2009ರಲ್ಲಿ ಜೆಡಿಎಸ್‌ನಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಪರಾಜಯಗೊಂಡಿದ್ದ ಎಸ್‌ಪಿ ಮುದ್ದಹನುಮೇಗೌಡಗೆ ಜೆಡಿಎಸ್‌ ಪಕ್ಷವು ಕುಣಿಗಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ನೀಡಿ ಕೈಕೊಟ್ಟಿತು. ಬಿ ಫಾರಂ ನೀಡಿ ಆನಂತರ ಡಿ ನಾಗರಾಜಯ್ಯ ಅವರಿಗೆ ಸಿ ಫಾರಂ ಕೊಟ್ಟು ಜೆಡಿಎಸ್‌ ಕಣಕ್ಕಿಳಿಸಿತು.

2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದ ಎಸ್‌ಪಿ ಮುದ್ದಹನುಮೇಗೌಡ ಅತ್ಯುತ್ತಮ ಸಂಸದೀಯ ಪಟುವಾಗಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಹಾಲಿ ಸಂಸದರಾಗಿದ್ದರೂ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ನೆಪದಲ್ಲಿ ಎಚ್‌ಡಿ ದೇವೇಗೌಡರನ್ನು ಕಣಕ್ಕಿಳಿಸಿ ಎಸ್‌ಪಿ ಮುದ್ದಹನುಮೇಗೌಡರಿಗೆ ಕೈಕೊಟ್ಟಿತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಕಾರಣವಿಲ್ಲದೆ ತಪ್ಪಿದ್ದಕ್ಕೆ ಕುಣಿಗಲ್‌ನಿಂದ ಕೈ ಟಿಕೆಟ್‌ಗೆ ಪಟ್ಟು ಹಿಡಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಬಂಧಿ ಹಾಲಿ ಶಾಸಕ ಡಾ ಎಚ್‌ಡಿ ರಂಗನಾಥ್‌ಗೆ ಟಿಕೆಟ್‌ ನೀಡುವುದು ಖಾತ್ರಿಯಾಗಿದ್ದರಿಂದ, ಈ ಚುನಾವಣೆಯಲ್ಲಿ ಸ್ಪರ್ಧಿಸಿ ಪಾಠ ಕಲಿಸಬೇಕು ಎಂದು ಪಣತೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು.

ಮುದ್ದಹನುಮೇಗೌಡ ಅವರು ಕಾಂಗ್ರೆಸ್‌ನಿಂದ 3 ಬಾರಿ, ಜೆಡಿಎಸ್‌ನಿಂದ ಒಂದು ಬಾರಿ ‘ವಿಶ್ವಾಸದ ಹೊಡೆತ’ ತಿಂದಿದ್ದ ಅವರು, ಈ ಬಾರಿ ಬಿಜೆಪಿಯಿಂದ ಕುಣಿಗಲ್‌ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಬಿಜೆಪಿಯು 3 ಬಾರಿ ಸೋತಿರುವ ಡಿ ಕೃಷ್ಣಕುಮಾರ್‌ಗೆ ಮಣೆ ಹಾಕಿದೆ. ಹೀಗಾಗಿ ಎಸ್‌ಪಿ ಮುದ್ದಹನುಮೇಗೌಡ ಬೇಸರದಿಂದ ಸ್ವತಂತ್ರ ಅಭ್ಯರ್ಥಿಯಾಗಲು ಮುಂದಾಗಿದ್ದಾರೆ.

ಚುನಾವಣಾ ರಾಜಕೀಯ ಜೀವನದುದ್ದಕ್ಕೂ ‘ದುರಂತ’ ನಾಯಕರಾಗಿರುವ ಎಸ್‌.ಪಿ.ಮುದ್ದಹನುಮೇಗೌಡ ಈ ಬಾರಿ ಕುಣಿಗಲ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...