Homeಕರ್ನಾಟಕಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಶನಿವಾರ ಬಿಟ್ಟರು. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ದೇಶದಲ್ಲಿ ಚೀತಾಗಳನ್ನು ಬೆಳೆಸುವ ಉದ್ದೇಶದಿಂದ ‘ಚೀತಾ ಯೋಜನೆ’ ಜಾರಿಯಾಗಿದೆ.

ದಶಕಗಳ ಹಿಂದೆ ಈ ಯೋಜನೆ ಜಾರಿಯ ಕೆಲಸಗಳು ಆರಂಭವಾದವು. 2009ರಲ್ಲಿ ಆಫ್ರಿಕಾದಿಂದ ಚೀತಾಗಳನ್ನು ಭಾರತಕ್ಕೆ ತರುವ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. 2010ರಲ್ಲಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್ ಸರ್ಕಾರ ಚೀತಾ ಯೋಜನೆಗೆ ಅನುಮತಿ ಕೊಟ್ಟಿತ್ತು. ಅದೇ ವರ್ಷ ಆಗಿನ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್‌‌ ಅವರು ಚೀತಾಗಳನ್ನು ನೋಡಲು ಆಫ್ರಿಕಾಕ್ಕೆ ಹೋಗಿದ್ದರು. 2011ರಲ್ಲಿ 50 ಕೋಟಿ ರೂ. ಮಂಜೂರು ಮಾಡಿ ಪಾವತಿಸಲಾಯಿತು. 2013ರಲ್ಲಿ ಯೋಜನೆಗೆ ಸುಪ್ರೀಂಕೋರ್ಟ್ ತಡೆ ನೀಡಿತು. 2020ರಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ರದ್ದುಮಾಡಿತು. ಈಗ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವರ್ಷ ಚೀತಾಗಳನ್ನು ಭಾರತಕ್ಕೆ ಕರೆತಂದಿದೆ. ಚೀತಾವನ್ನು ತರಲು ಯಾರೂ ಪ್ರಯತ್ನಿಸಿರಲಿಲ್ಲ ಎಂದು ಮೋದಿ ಹೇಳಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆತಂದ ಯೋಜನೆಯಿಂದ ಆಗಿರುವ ಪರಿಣಾಮಗಳೇನು? ಎಂದು ಯೋಚಿಸಬೇಕಿದೆ. ಕಳೆದ ಏಪ್ರಿಲ್ 25ರಂದು ಈ ಚೀತಾ ಯೋಜನೆಯ ಕುರಿತು ಗ್ರೌಂಡ್ ರಿಪೋರ್ಟ್ ಮಾಡಿದ್ದ ‘ಪೀಪಲ್ಸ್‌ ಆರ್ಕೈವ್ ಆಫ್ ರೂರಲ್‌ ಇಂಡಿಯಾ’ (ಪರಿ) ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿತ್ತು. “ಕೊನೊ: ಚೀತಾಗಳು ಒಳಗೆ, ಆದಿವಾಸಿಗಳು ಹೊರಗೆ” ಎಂಬ ವಿಸ್ತೃತ ಲೇಖನವನ್ನು ಪ್ರಕಟಿಸಿತ್ತು. ಇಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಬೆಳಕು ಚೆಲ್ಲಿತ್ತು.

ಹೆಚ್ಚಿನ ಬೆಲೆಯ ಸಫಾರಿ ಟಿಕೇಟುಗಳನ್ನು ಕೊಂಡು ಆಮದು ಮಾಡಲಾದ ಚೀತಾಗಳನ್ನು ನೋಡಲು ಬರುವ ಜನರಿಗಷ್ಟೇ ಇನ್ನು ಮುಂದೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವೇಶವಿರಲಿದೆ. ಇದು ಪೂರ್ವನಿಯೋಜಿತವಾಗಿದ್ದು, ಸ್ಥಳೀಯ ನಿವಾಸಿಗಳನ್ನು ಕಾಡಿನಿಂದ ಹೊರಗಟ್ಟಲಾಗುತ್ತದೆ. ಇಲ್ಲಿನ ಹೆಚ್ಚಿನವರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ವರದಿ ತಿಳಿಸಿತ್ತು.

“ಈ ವರ್ಷದ ಮಾರ್ಚ್ 6ರಂದು, ಅಲ್ಲಿನ ಅರಣ್ಯ ಚೌಕಿಯಲ್ಲಿ ಒಂದು ಸಭೆಯನ್ನು ಕರೆಯಲಾಯಿತು” ಎಂದು 40 ವರ್ಷದ ಬಲ್ಲು ಆದಿವಾಸಿ ತನ್ನ ಹಳ್ಳಿಯಾದ ಬಾಗ್ಚಾದ ಅಂಚಿನಲ್ಲಿರುವ ಕೂನೊ ಕಾಡಿನತ್ತ ಬೊಟ್ಟು ಮಾಡಿ ಹೇಳಿದ್ದರು. “ಈ ಪ್ರದೇಶವು ರಾಷ್ಟ್ರೀಯ ಉದ್ಯಾನವನವಾಗಿ ಮಾರ್ಪಟ್ಟಿದೆ ಮತ್ತು ನಾವು ಸ್ಥಳಾಂತರಗೊಳ್ಳಬೇಕು ಎಂದು ನಮಗೆ ತಿಳಿಸಲಾಯಿತು” ಎಂದು ತಿಳಿಸಿದ್ದರು.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಪಶ್ಚಿಮ ಅಂಚಿನಲ್ಲಿರುವ ಬಾಗ್ಚಾ ಸಹರಿಯಾ ಆದಿವಾಸಿ ಸಮುದಾಯದವರ ಗ್ರಾಮವಾಗಿದ್ದು, ಇಲ್ಲಿನ ಜನರನ್ನು ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ಗುರುತಿಸಲಾಗಿದೆ. ವಿಜಾಪುರ ಬ್ಲಾಕ್‌ನಲ್ಲಿರುವ ಈ ಗ್ರಾಮವು 2011ರ ಜನಗಣತಿಯ ಪ್ರಕಾರ 556 ಜನಸಂಖ್ಯೆಯನ್ನು ಹೊಂದಿದೆ. ಮಣ್ಣು ಮತ್ತು ಇಟ್ಟಿಗೆಯಿಂದ ನಿರ್ಮಿಸಿದ ಮನೆಗಳಲ್ಲಿ ಇಲ್ಲಿನ ಜನರು ವಾಸಿಸುತ್ತಾರೆ. ಕಲ್ಲಿನ ಚಪ್ಪಡಿಗಳನ್ನು ಛಾವಣಿಯಾಗಿ ಹೊದಿಸಲಾಗಿರುತ್ತದೆ, ಈ ಗ್ರಾಮ ರಾಷ್ಟ್ರೀಯ ಉದ್ಯಾನವನದಿಂದ ಸುತ್ತುವರೆದಿದೆ (ಇದನ್ನು ಕುನೊ ಪಲ್ಪುರ್ ಎಂದೂ ಕರೆಯಲಾಗುತ್ತದೆ), ಅಲ್ಲಿ ಕುನೊ ನದಿ ಹರಿಯುತ್ತದೆ.

ಅರವತ್ತು ವರ್ಷದ ಕಲ್ಲೋ ಆದಿವಾಸಿ ಎಂಬವರು ತಮ್ಮ ಬದುಕನ್ನೆಲ್ಲ ಬಾಗ್ಚಾದಲ್ಲಿಯೇ ಕಳೆದವರು. ‘ಪರಿ’ ತಂಡದೊಂದಿಗೆ ಮಾತನಾಡುತ್ತಾ, “ನಮ್ಮ ಭೂಮಿ ಇಲ್ಲೇ ಇದೆ. ನಮ್ಮ ಕಾಡು ಇಲ್ಲಿದೆ, ನಮ್ಮ ಮನೆ ಇಲ್ಲಿದೆ, ಇಲ್ಲಿ ಏನಿದೆಯೋ ಅದು ನಮ್ಮದು. ಈಗ ನಮ್ಮನ್ನು ತೊರೆಯುವಂತೆ ಒತ್ತಾಯಿಸಲಾಗುತ್ತಿದೆ” ಎಂದು ದುಃಖ ತೋಡಿಕೊಂಡಿದ್ದರು.

ಬಾಗ್ಚಾ ಸುತ್ತಲೂ ಕಾಡು. ಹೆಚ್ಚಿನ ಸಂಖ್ಯೆಯ ಬೀಡಾಡಿ ದನಗಳು. ಇಲ್ಲಿಗೆ ಆರೋಗ್ಯ ಕೇಂದ್ರವು 20 ಕಿಲೋಮೀಟರ್ ದೂರದಲ್ಲಿದೆ. 108ಕ್ಕೆ ಕರೆ ಮಾಡುವ ಮೂಲಕ ಸೌಲಭ್ಯ ಪಡೆಯಬಹುದು, ಆದರೆ ಫೋನ್ ಲೈನ್ ಗಳು ಮತ್ತು ನೆಟ್ವರ್ಕ್ ಕಾರ್ಯನಿರ್ವಹಿಸುತ್ತಿರುವಾಗ ಮಾತ್ರ ಈ ಸೌಲಭ್ಯ ಪಡೆಯಲು ಸಾಧ್ಯ. ಬಾಗ್ಚಾದಲ್ಲಿ ಪ್ರಾಥಮಿಕ ಶಾಲೆ ಇದೆ, ಆದರೆ 5ನೇ ತರಗತಿಯ ನಂತರ ಓದಲು, ಮಕ್ಕಳು 20 ಕಿಲೋಮೀಟರ್ ದೂರದಲ್ಲಿರುವ ಓಚಾದ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು.

ಸಹರಿಯಾ ಜನರು ಸಣ್ಣ ತುಂಡು ಭೂಮಿಗಳಲ್ಲಿ ಮಳೆಯಾಶ್ರಿತ ಕೃಷಿಯನ್ನು ಮಾಡುತ್ತಾರೆ. ಕಾಡನ್ನು ನಂಬಿ ಬದುಕು ಕಂಡುಕೊಂಡ ಜನರಿವರು. ತೆಂಡು ಎಲೆಗಳು, ಹಣ್ಣುಗಳು, ಬೇರುಗಳು ಮತ್ತು ಗಿಡಮೂಲಿಕೆಗಳು, ಇತ್ಯಾದಿಗಳು ಇವರ ಸಂಪಾದನೆಯ ಮೂಲವಾಗಿದ್ದವು. ಕಾಡಿನಿಂದ ಹೊರಹೋಗುವುದೆಂದರೆ ಈ ಎಲ್ಲಾ ಆದಾಯ ಮೂಲಗಳನ್ನು ಕಳೆದುಕೊಳ್ಳುವುದೇ ಆಗಿದೆ.

“ನಮಗೆ ಕಾಡು ನೀಡುತ್ತಿದ್ದ ಸುರಕ್ಷಿತ ಭಾವನೆ ಇಲ್ಲವಾಗುತ್ತದೆ. ಇನ್ನು ಮುಂದೆ ಚಿರ್‌ ಮತ್ತು ಗೊಂಡ್‌ ಸಂಗ್ರಹಿಸಲು ಸಾಧ್ಯವಿಲ್ಲ. ನಮ್ಮ ಉಪ್ಪು ಮತ್ತು ಎ‍ಣ್ಣೆಯ ಖರ್ಚು ಇದರಿಂದಲೇ ಹುಟ್ಟುತ್ತಿತ್ತು. ನಮಗೆ ದಿನಗೂಲಿಯೊಂದೇ ಆಯ್ಕೆಯಾಗಿ ಉಳಿಯಲಿದೆ” ಎಂದು ಸಹಾರಿಯ ಸಮುದಾಯದ ಹರೇತ್‌ ಆದಿವಾಸಿ ನೋವು ತೋಡಿಕೊಂಡಿದ್ದಾರೆ.

ಚೀತಾ ಯೋಜನೆಯಿಂದ ಹೇಗೆ ಇಲ್ಲಿನ ಆದಿವಾಸಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡ ವಿಸ್ತೃತವಾಗಿ ಹೊರಗೆಡವಿದೆ. (ವಿವರಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ಇದನ್ನೂ ಓದಿರಿ: ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಪ್ರಕೃತಿ ವಿರೋಧಿ ಕೃತ್ಯ: ನವೀನ್ ಸೂರಿಂಜೆ

“ಆಫ್ರಿಕಾದಿಂದ ಭಾರತಕ್ಕೆ ಚೀತಾವನ್ನು ತಂದಿರೋದನ್ನು ವೈಭವಿಕರೀಸಲಾಗುತ್ತಿದೆ. ವಾಸ್ತವವಾಗಿ ಇದು ಪ್ರಕೃತಿ ವಿರೋಧಿ ಮತ್ತು ಮಾನವ ವಿರೋಧಿ ಕೃತ್ಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

“ಆಫ್ರಿಕಾದಿಂದ ತಂದ ಚೀತಾವನ್ನು ಅದರದ್ದಲ್ಲದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಜಗತ್ತಿನ ಅತ್ಯಂತ ವೇಗದ ಮತ್ತು ಕ್ರೂರ ಪ್ರಾಣಿಯಾದ ಚೀತಾ ತನ್ನದಲ್ಲದ ಅಪರಿಚಿತ ಕಾಡಲ್ಲಿ ಬೇಟೆಯನ್ನು ಹುಡುಕಬೇಕು. ಅದು ಕಾಡಿನ ಸುತ್ತ ಇರುವ ಆದಿವಾಸಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಆಹಾರದ ಕೊರತೆಯಾದಾಗ, ಹೊಸ ಕಾಡಲ್ಲಿ ಬೇಟೆ ಸಿಗದೇ ಇದ್ದಾಗ ಕುನೋ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಆದಿವಾಸಿಗಳು ಮತ್ತು ಅವರ ಹಟ್ಟಿಯಲ್ಲಿರುವ ದನಗಳತ್ತಾ ಚೀತಾದ ಗಮನ ಸೆಳೆಯಬಹುದು. ಜೊತೆಗೆ ಕಾಡಿನ ಹೊಸ ಚೀತಾಗಳ ಆಗಮನದಿಂದ ಚಿರತೆಗಳು ಮತ್ತು ಹುಲಿಗಳು ಕಾಡಿನ ಹೊರ ಭಾಗದಲ್ಲಿ ಸುಲಭವಾಗಿ ಸಿಗುವ ಮನುಷ್ಯರು ಮತ್ತು ಮನುಷ್ಯರು ಸಾಕಿದ ಪ್ರಾಣಿಗಳ ಮೇಲೆ ಎರಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇದು ಮೋದಿಯಿಂದಾದ ಸಮಸ್ಯೆ ಮಾತ್ರವಲ್ಲ. ನಮ್ಮದೇ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲೂ ಈ ಸಮಸ್ಯೆ ಇದೆ‌. ಯಾವುದಾದರೂ ಊರಲ್ಲಿ ಚಿರತೆ ಸಿಕ್ಕಿದರೆ ಅದನ್ನು ಹಿಡಿದು ಪಶ್ಚಿಮ ಘಟ್ಟದಲ್ಲಿ ಬಿಡುತ್ತಾರೆ. ಎಲ್ಲೇ ಕಾಳಿಂಗ ಸರ್ಪ, ಹುಲಿಯ ಪ್ರಭೇದಗಳು ಸಿಕ್ಕರೂ ಪಶ್ಚಿಮ ಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಈ ರೀತಿ ಸಿಕ್ಕ ಪ್ರಾಣಿಗಳ ನಿಜವಾದ ವಾಸಸ್ಥಳ ಎಲ್ಲಿ? ಅವು ಯಾವ ಕಾಡಿನಿಂದ ತಪ್ಪಿಸಿಕೊಂಡು ಬಂದವು ಎಂಬ ಬಗ್ಗೆ ಅಧ್ಯಯನ ಮಾಡುವ ಗೋಜಿಗೆ ಯಾರೂ ಹೋಗುವುದಿಲ್ಲ. ಯಾವುದೋ ಒಂದು ಕಾಡಾದರೆ ಆಯ್ತು. ಹೀಗೆ ಮಾಡಿದ್ದರಿಂದ ಕುತ್ಲೂರು ಸೇರಿದಂತೆ ಹಲವಾರು ಕಾಡಂಚಿನ ಗ್ರಾಮದ ಆದಿವಾಸಿಗಳು ತೊಂದರೆ ಅನುಭವಿಸಿದ್ದಿದೆ. ಈ ರೀತಿ ಎಲ್ಲೆಲ್ಲಿಂದಲೋ ಪ್ರಾಣಿಗಳ ತಂದು ನಮ್ಮ ಕಾಡಲ್ಲಿ ತಂದು ಬಿಡುವುದನ್ನು ಮಲೆಕುಡಿಯ ಸಮುದಾಯ ಪ್ರತಿಭಟನೆ ಕೂಡಾ ನಡೆಸಿತ್ತು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ೫೫೬ ಜನ ಆದಿವಾಸಿಗಳ ಬದುಕನ್ನು ಹಾಳುಮಾಡಿ, ವಿದೇಶದಿಂದ ಚಿರತೆ ತಂದು ಸಾಕಬೇಕಾದ ಅನಿವಾರ್ಯತೆ ನಮಗೆ ಇದೆಯಾ? ಈ ಆದಿವಾಸಿಗಳ ಬದುಕಿಗೆ ಬೆಲೆಯೇ ಇಲ್ಲವಾ?

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...