Homeಕರ್ನಾಟಕಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಶನಿವಾರ ಬಿಟ್ಟರು. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ದೇಶದಲ್ಲಿ ಚೀತಾಗಳನ್ನು ಬೆಳೆಸುವ ಉದ್ದೇಶದಿಂದ ‘ಚೀತಾ ಯೋಜನೆ’ ಜಾರಿಯಾಗಿದೆ.

ದಶಕಗಳ ಹಿಂದೆ ಈ ಯೋಜನೆ ಜಾರಿಯ ಕೆಲಸಗಳು ಆರಂಭವಾದವು. 2009ರಲ್ಲಿ ಆಫ್ರಿಕಾದಿಂದ ಚೀತಾಗಳನ್ನು ಭಾರತಕ್ಕೆ ತರುವ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. 2010ರಲ್ಲಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್ ಸರ್ಕಾರ ಚೀತಾ ಯೋಜನೆಗೆ ಅನುಮತಿ ಕೊಟ್ಟಿತ್ತು. ಅದೇ ವರ್ಷ ಆಗಿನ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್‌‌ ಅವರು ಚೀತಾಗಳನ್ನು ನೋಡಲು ಆಫ್ರಿಕಾಕ್ಕೆ ಹೋಗಿದ್ದರು. 2011ರಲ್ಲಿ 50 ಕೋಟಿ ರೂ. ಮಂಜೂರು ಮಾಡಿ ಪಾವತಿಸಲಾಯಿತು. 2013ರಲ್ಲಿ ಯೋಜನೆಗೆ ಸುಪ್ರೀಂಕೋರ್ಟ್ ತಡೆ ನೀಡಿತು. 2020ರಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ರದ್ದುಮಾಡಿತು. ಈಗ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವರ್ಷ ಚೀತಾಗಳನ್ನು ಭಾರತಕ್ಕೆ ಕರೆತಂದಿದೆ. ಚೀತಾವನ್ನು ತರಲು ಯಾರೂ ಪ್ರಯತ್ನಿಸಿರಲಿಲ್ಲ ಎಂದು ಮೋದಿ ಹೇಳಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆತಂದ ಯೋಜನೆಯಿಂದ ಆಗಿರುವ ಪರಿಣಾಮಗಳೇನು? ಎಂದು ಯೋಚಿಸಬೇಕಿದೆ. ಕಳೆದ ಏಪ್ರಿಲ್ 25ರಂದು ಈ ಚೀತಾ ಯೋಜನೆಯ ಕುರಿತು ಗ್ರೌಂಡ್ ರಿಪೋರ್ಟ್ ಮಾಡಿದ್ದ ‘ಪೀಪಲ್ಸ್‌ ಆರ್ಕೈವ್ ಆಫ್ ರೂರಲ್‌ ಇಂಡಿಯಾ’ (ಪರಿ) ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿತ್ತು. “ಕೊನೊ: ಚೀತಾಗಳು ಒಳಗೆ, ಆದಿವಾಸಿಗಳು ಹೊರಗೆ” ಎಂಬ ವಿಸ್ತೃತ ಲೇಖನವನ್ನು ಪ್ರಕಟಿಸಿತ್ತು. ಇಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಬೆಳಕು ಚೆಲ್ಲಿತ್ತು.

ಹೆಚ್ಚಿನ ಬೆಲೆಯ ಸಫಾರಿ ಟಿಕೇಟುಗಳನ್ನು ಕೊಂಡು ಆಮದು ಮಾಡಲಾದ ಚೀತಾಗಳನ್ನು ನೋಡಲು ಬರುವ ಜನರಿಗಷ್ಟೇ ಇನ್ನು ಮುಂದೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವೇಶವಿರಲಿದೆ. ಇದು ಪೂರ್ವನಿಯೋಜಿತವಾಗಿದ್ದು, ಸ್ಥಳೀಯ ನಿವಾಸಿಗಳನ್ನು ಕಾಡಿನಿಂದ ಹೊರಗಟ್ಟಲಾಗುತ್ತದೆ. ಇಲ್ಲಿನ ಹೆಚ್ಚಿನವರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ವರದಿ ತಿಳಿಸಿತ್ತು.

“ಈ ವರ್ಷದ ಮಾರ್ಚ್ 6ರಂದು, ಅಲ್ಲಿನ ಅರಣ್ಯ ಚೌಕಿಯಲ್ಲಿ ಒಂದು ಸಭೆಯನ್ನು ಕರೆಯಲಾಯಿತು” ಎಂದು 40 ವರ್ಷದ ಬಲ್ಲು ಆದಿವಾಸಿ ತನ್ನ ಹಳ್ಳಿಯಾದ ಬಾಗ್ಚಾದ ಅಂಚಿನಲ್ಲಿರುವ ಕೂನೊ ಕಾಡಿನತ್ತ ಬೊಟ್ಟು ಮಾಡಿ ಹೇಳಿದ್ದರು. “ಈ ಪ್ರದೇಶವು ರಾಷ್ಟ್ರೀಯ ಉದ್ಯಾನವನವಾಗಿ ಮಾರ್ಪಟ್ಟಿದೆ ಮತ್ತು ನಾವು ಸ್ಥಳಾಂತರಗೊಳ್ಳಬೇಕು ಎಂದು ನಮಗೆ ತಿಳಿಸಲಾಯಿತು” ಎಂದು ತಿಳಿಸಿದ್ದರು.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಪಶ್ಚಿಮ ಅಂಚಿನಲ್ಲಿರುವ ಬಾಗ್ಚಾ ಸಹರಿಯಾ ಆದಿವಾಸಿ ಸಮುದಾಯದವರ ಗ್ರಾಮವಾಗಿದ್ದು, ಇಲ್ಲಿನ ಜನರನ್ನು ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ಗುರುತಿಸಲಾಗಿದೆ. ವಿಜಾಪುರ ಬ್ಲಾಕ್‌ನಲ್ಲಿರುವ ಈ ಗ್ರಾಮವು 2011ರ ಜನಗಣತಿಯ ಪ್ರಕಾರ 556 ಜನಸಂಖ್ಯೆಯನ್ನು ಹೊಂದಿದೆ. ಮಣ್ಣು ಮತ್ತು ಇಟ್ಟಿಗೆಯಿಂದ ನಿರ್ಮಿಸಿದ ಮನೆಗಳಲ್ಲಿ ಇಲ್ಲಿನ ಜನರು ವಾಸಿಸುತ್ತಾರೆ. ಕಲ್ಲಿನ ಚಪ್ಪಡಿಗಳನ್ನು ಛಾವಣಿಯಾಗಿ ಹೊದಿಸಲಾಗಿರುತ್ತದೆ, ಈ ಗ್ರಾಮ ರಾಷ್ಟ್ರೀಯ ಉದ್ಯಾನವನದಿಂದ ಸುತ್ತುವರೆದಿದೆ (ಇದನ್ನು ಕುನೊ ಪಲ್ಪುರ್ ಎಂದೂ ಕರೆಯಲಾಗುತ್ತದೆ), ಅಲ್ಲಿ ಕುನೊ ನದಿ ಹರಿಯುತ್ತದೆ.

ಅರವತ್ತು ವರ್ಷದ ಕಲ್ಲೋ ಆದಿವಾಸಿ ಎಂಬವರು ತಮ್ಮ ಬದುಕನ್ನೆಲ್ಲ ಬಾಗ್ಚಾದಲ್ಲಿಯೇ ಕಳೆದವರು. ‘ಪರಿ’ ತಂಡದೊಂದಿಗೆ ಮಾತನಾಡುತ್ತಾ, “ನಮ್ಮ ಭೂಮಿ ಇಲ್ಲೇ ಇದೆ. ನಮ್ಮ ಕಾಡು ಇಲ್ಲಿದೆ, ನಮ್ಮ ಮನೆ ಇಲ್ಲಿದೆ, ಇಲ್ಲಿ ಏನಿದೆಯೋ ಅದು ನಮ್ಮದು. ಈಗ ನಮ್ಮನ್ನು ತೊರೆಯುವಂತೆ ಒತ್ತಾಯಿಸಲಾಗುತ್ತಿದೆ” ಎಂದು ದುಃಖ ತೋಡಿಕೊಂಡಿದ್ದರು.

ಬಾಗ್ಚಾ ಸುತ್ತಲೂ ಕಾಡು. ಹೆಚ್ಚಿನ ಸಂಖ್ಯೆಯ ಬೀಡಾಡಿ ದನಗಳು. ಇಲ್ಲಿಗೆ ಆರೋಗ್ಯ ಕೇಂದ್ರವು 20 ಕಿಲೋಮೀಟರ್ ದೂರದಲ್ಲಿದೆ. 108ಕ್ಕೆ ಕರೆ ಮಾಡುವ ಮೂಲಕ ಸೌಲಭ್ಯ ಪಡೆಯಬಹುದು, ಆದರೆ ಫೋನ್ ಲೈನ್ ಗಳು ಮತ್ತು ನೆಟ್ವರ್ಕ್ ಕಾರ್ಯನಿರ್ವಹಿಸುತ್ತಿರುವಾಗ ಮಾತ್ರ ಈ ಸೌಲಭ್ಯ ಪಡೆಯಲು ಸಾಧ್ಯ. ಬಾಗ್ಚಾದಲ್ಲಿ ಪ್ರಾಥಮಿಕ ಶಾಲೆ ಇದೆ, ಆದರೆ 5ನೇ ತರಗತಿಯ ನಂತರ ಓದಲು, ಮಕ್ಕಳು 20 ಕಿಲೋಮೀಟರ್ ದೂರದಲ್ಲಿರುವ ಓಚಾದ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು.

ಸಹರಿಯಾ ಜನರು ಸಣ್ಣ ತುಂಡು ಭೂಮಿಗಳಲ್ಲಿ ಮಳೆಯಾಶ್ರಿತ ಕೃಷಿಯನ್ನು ಮಾಡುತ್ತಾರೆ. ಕಾಡನ್ನು ನಂಬಿ ಬದುಕು ಕಂಡುಕೊಂಡ ಜನರಿವರು. ತೆಂಡು ಎಲೆಗಳು, ಹಣ್ಣುಗಳು, ಬೇರುಗಳು ಮತ್ತು ಗಿಡಮೂಲಿಕೆಗಳು, ಇತ್ಯಾದಿಗಳು ಇವರ ಸಂಪಾದನೆಯ ಮೂಲವಾಗಿದ್ದವು. ಕಾಡಿನಿಂದ ಹೊರಹೋಗುವುದೆಂದರೆ ಈ ಎಲ್ಲಾ ಆದಾಯ ಮೂಲಗಳನ್ನು ಕಳೆದುಕೊಳ್ಳುವುದೇ ಆಗಿದೆ.

“ನಮಗೆ ಕಾಡು ನೀಡುತ್ತಿದ್ದ ಸುರಕ್ಷಿತ ಭಾವನೆ ಇಲ್ಲವಾಗುತ್ತದೆ. ಇನ್ನು ಮುಂದೆ ಚಿರ್‌ ಮತ್ತು ಗೊಂಡ್‌ ಸಂಗ್ರಹಿಸಲು ಸಾಧ್ಯವಿಲ್ಲ. ನಮ್ಮ ಉಪ್ಪು ಮತ್ತು ಎ‍ಣ್ಣೆಯ ಖರ್ಚು ಇದರಿಂದಲೇ ಹುಟ್ಟುತ್ತಿತ್ತು. ನಮಗೆ ದಿನಗೂಲಿಯೊಂದೇ ಆಯ್ಕೆಯಾಗಿ ಉಳಿಯಲಿದೆ” ಎಂದು ಸಹಾರಿಯ ಸಮುದಾಯದ ಹರೇತ್‌ ಆದಿವಾಸಿ ನೋವು ತೋಡಿಕೊಂಡಿದ್ದಾರೆ.

ಚೀತಾ ಯೋಜನೆಯಿಂದ ಹೇಗೆ ಇಲ್ಲಿನ ಆದಿವಾಸಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡ ವಿಸ್ತೃತವಾಗಿ ಹೊರಗೆಡವಿದೆ. (ವಿವರಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ಇದನ್ನೂ ಓದಿರಿ: ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಪ್ರಕೃತಿ ವಿರೋಧಿ ಕೃತ್ಯ: ನವೀನ್ ಸೂರಿಂಜೆ

“ಆಫ್ರಿಕಾದಿಂದ ಭಾರತಕ್ಕೆ ಚೀತಾವನ್ನು ತಂದಿರೋದನ್ನು ವೈಭವಿಕರೀಸಲಾಗುತ್ತಿದೆ. ವಾಸ್ತವವಾಗಿ ಇದು ಪ್ರಕೃತಿ ವಿರೋಧಿ ಮತ್ತು ಮಾನವ ವಿರೋಧಿ ಕೃತ್ಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

“ಆಫ್ರಿಕಾದಿಂದ ತಂದ ಚೀತಾವನ್ನು ಅದರದ್ದಲ್ಲದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಜಗತ್ತಿನ ಅತ್ಯಂತ ವೇಗದ ಮತ್ತು ಕ್ರೂರ ಪ್ರಾಣಿಯಾದ ಚೀತಾ ತನ್ನದಲ್ಲದ ಅಪರಿಚಿತ ಕಾಡಲ್ಲಿ ಬೇಟೆಯನ್ನು ಹುಡುಕಬೇಕು. ಅದು ಕಾಡಿನ ಸುತ್ತ ಇರುವ ಆದಿವಾಸಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಆಹಾರದ ಕೊರತೆಯಾದಾಗ, ಹೊಸ ಕಾಡಲ್ಲಿ ಬೇಟೆ ಸಿಗದೇ ಇದ್ದಾಗ ಕುನೋ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಆದಿವಾಸಿಗಳು ಮತ್ತು ಅವರ ಹಟ್ಟಿಯಲ್ಲಿರುವ ದನಗಳತ್ತಾ ಚೀತಾದ ಗಮನ ಸೆಳೆಯಬಹುದು. ಜೊತೆಗೆ ಕಾಡಿನ ಹೊಸ ಚೀತಾಗಳ ಆಗಮನದಿಂದ ಚಿರತೆಗಳು ಮತ್ತು ಹುಲಿಗಳು ಕಾಡಿನ ಹೊರ ಭಾಗದಲ್ಲಿ ಸುಲಭವಾಗಿ ಸಿಗುವ ಮನುಷ್ಯರು ಮತ್ತು ಮನುಷ್ಯರು ಸಾಕಿದ ಪ್ರಾಣಿಗಳ ಮೇಲೆ ಎರಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇದು ಮೋದಿಯಿಂದಾದ ಸಮಸ್ಯೆ ಮಾತ್ರವಲ್ಲ. ನಮ್ಮದೇ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲೂ ಈ ಸಮಸ್ಯೆ ಇದೆ‌. ಯಾವುದಾದರೂ ಊರಲ್ಲಿ ಚಿರತೆ ಸಿಕ್ಕಿದರೆ ಅದನ್ನು ಹಿಡಿದು ಪಶ್ಚಿಮ ಘಟ್ಟದಲ್ಲಿ ಬಿಡುತ್ತಾರೆ. ಎಲ್ಲೇ ಕಾಳಿಂಗ ಸರ್ಪ, ಹುಲಿಯ ಪ್ರಭೇದಗಳು ಸಿಕ್ಕರೂ ಪಶ್ಚಿಮ ಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಈ ರೀತಿ ಸಿಕ್ಕ ಪ್ರಾಣಿಗಳ ನಿಜವಾದ ವಾಸಸ್ಥಳ ಎಲ್ಲಿ? ಅವು ಯಾವ ಕಾಡಿನಿಂದ ತಪ್ಪಿಸಿಕೊಂಡು ಬಂದವು ಎಂಬ ಬಗ್ಗೆ ಅಧ್ಯಯನ ಮಾಡುವ ಗೋಜಿಗೆ ಯಾರೂ ಹೋಗುವುದಿಲ್ಲ. ಯಾವುದೋ ಒಂದು ಕಾಡಾದರೆ ಆಯ್ತು. ಹೀಗೆ ಮಾಡಿದ್ದರಿಂದ ಕುತ್ಲೂರು ಸೇರಿದಂತೆ ಹಲವಾರು ಕಾಡಂಚಿನ ಗ್ರಾಮದ ಆದಿವಾಸಿಗಳು ತೊಂದರೆ ಅನುಭವಿಸಿದ್ದಿದೆ. ಈ ರೀತಿ ಎಲ್ಲೆಲ್ಲಿಂದಲೋ ಪ್ರಾಣಿಗಳ ತಂದು ನಮ್ಮ ಕಾಡಲ್ಲಿ ತಂದು ಬಿಡುವುದನ್ನು ಮಲೆಕುಡಿಯ ಸಮುದಾಯ ಪ್ರತಿಭಟನೆ ಕೂಡಾ ನಡೆಸಿತ್ತು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ೫೫೬ ಜನ ಆದಿವಾಸಿಗಳ ಬದುಕನ್ನು ಹಾಳುಮಾಡಿ, ವಿದೇಶದಿಂದ ಚಿರತೆ ತಂದು ಸಾಕಬೇಕಾದ ಅನಿವಾರ್ಯತೆ ನಮಗೆ ಇದೆಯಾ? ಈ ಆದಿವಾಸಿಗಳ ಬದುಕಿಗೆ ಬೆಲೆಯೇ ಇಲ್ಲವಾ?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...