Homeಕರ್ನಾಟಕಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಶನಿವಾರ ಬಿಟ್ಟರು. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ದೇಶದಲ್ಲಿ ಚೀತಾಗಳನ್ನು ಬೆಳೆಸುವ ಉದ್ದೇಶದಿಂದ ‘ಚೀತಾ ಯೋಜನೆ’ ಜಾರಿಯಾಗಿದೆ.

ದಶಕಗಳ ಹಿಂದೆ ಈ ಯೋಜನೆ ಜಾರಿಯ ಕೆಲಸಗಳು ಆರಂಭವಾದವು. 2009ರಲ್ಲಿ ಆಫ್ರಿಕಾದಿಂದ ಚೀತಾಗಳನ್ನು ಭಾರತಕ್ಕೆ ತರುವ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. 2010ರಲ್ಲಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್ ಸರ್ಕಾರ ಚೀತಾ ಯೋಜನೆಗೆ ಅನುಮತಿ ಕೊಟ್ಟಿತ್ತು. ಅದೇ ವರ್ಷ ಆಗಿನ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್‌‌ ಅವರು ಚೀತಾಗಳನ್ನು ನೋಡಲು ಆಫ್ರಿಕಾಕ್ಕೆ ಹೋಗಿದ್ದರು. 2011ರಲ್ಲಿ 50 ಕೋಟಿ ರೂ. ಮಂಜೂರು ಮಾಡಿ ಪಾವತಿಸಲಾಯಿತು. 2013ರಲ್ಲಿ ಯೋಜನೆಗೆ ಸುಪ್ರೀಂಕೋರ್ಟ್ ತಡೆ ನೀಡಿತು. 2020ರಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ರದ್ದುಮಾಡಿತು. ಈಗ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವರ್ಷ ಚೀತಾಗಳನ್ನು ಭಾರತಕ್ಕೆ ಕರೆತಂದಿದೆ. ಚೀತಾವನ್ನು ತರಲು ಯಾರೂ ಪ್ರಯತ್ನಿಸಿರಲಿಲ್ಲ ಎಂದು ಮೋದಿ ಹೇಳಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆತಂದ ಯೋಜನೆಯಿಂದ ಆಗಿರುವ ಪರಿಣಾಮಗಳೇನು? ಎಂದು ಯೋಚಿಸಬೇಕಿದೆ. ಕಳೆದ ಏಪ್ರಿಲ್ 25ರಂದು ಈ ಚೀತಾ ಯೋಜನೆಯ ಕುರಿತು ಗ್ರೌಂಡ್ ರಿಪೋರ್ಟ್ ಮಾಡಿದ್ದ ‘ಪೀಪಲ್ಸ್‌ ಆರ್ಕೈವ್ ಆಫ್ ರೂರಲ್‌ ಇಂಡಿಯಾ’ (ಪರಿ) ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿತ್ತು. “ಕೊನೊ: ಚೀತಾಗಳು ಒಳಗೆ, ಆದಿವಾಸಿಗಳು ಹೊರಗೆ” ಎಂಬ ವಿಸ್ತೃತ ಲೇಖನವನ್ನು ಪ್ರಕಟಿಸಿತ್ತು. ಇಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಬೆಳಕು ಚೆಲ್ಲಿತ್ತು.

ಹೆಚ್ಚಿನ ಬೆಲೆಯ ಸಫಾರಿ ಟಿಕೇಟುಗಳನ್ನು ಕೊಂಡು ಆಮದು ಮಾಡಲಾದ ಚೀತಾಗಳನ್ನು ನೋಡಲು ಬರುವ ಜನರಿಗಷ್ಟೇ ಇನ್ನು ಮುಂದೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವೇಶವಿರಲಿದೆ. ಇದು ಪೂರ್ವನಿಯೋಜಿತವಾಗಿದ್ದು, ಸ್ಥಳೀಯ ನಿವಾಸಿಗಳನ್ನು ಕಾಡಿನಿಂದ ಹೊರಗಟ್ಟಲಾಗುತ್ತದೆ. ಇಲ್ಲಿನ ಹೆಚ್ಚಿನವರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ವರದಿ ತಿಳಿಸಿತ್ತು.

“ಈ ವರ್ಷದ ಮಾರ್ಚ್ 6ರಂದು, ಅಲ್ಲಿನ ಅರಣ್ಯ ಚೌಕಿಯಲ್ಲಿ ಒಂದು ಸಭೆಯನ್ನು ಕರೆಯಲಾಯಿತು” ಎಂದು 40 ವರ್ಷದ ಬಲ್ಲು ಆದಿವಾಸಿ ತನ್ನ ಹಳ್ಳಿಯಾದ ಬಾಗ್ಚಾದ ಅಂಚಿನಲ್ಲಿರುವ ಕೂನೊ ಕಾಡಿನತ್ತ ಬೊಟ್ಟು ಮಾಡಿ ಹೇಳಿದ್ದರು. “ಈ ಪ್ರದೇಶವು ರಾಷ್ಟ್ರೀಯ ಉದ್ಯಾನವನವಾಗಿ ಮಾರ್ಪಟ್ಟಿದೆ ಮತ್ತು ನಾವು ಸ್ಥಳಾಂತರಗೊಳ್ಳಬೇಕು ಎಂದು ನಮಗೆ ತಿಳಿಸಲಾಯಿತು” ಎಂದು ತಿಳಿಸಿದ್ದರು.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಪಶ್ಚಿಮ ಅಂಚಿನಲ್ಲಿರುವ ಬಾಗ್ಚಾ ಸಹರಿಯಾ ಆದಿವಾಸಿ ಸಮುದಾಯದವರ ಗ್ರಾಮವಾಗಿದ್ದು, ಇಲ್ಲಿನ ಜನರನ್ನು ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ಗುರುತಿಸಲಾಗಿದೆ. ವಿಜಾಪುರ ಬ್ಲಾಕ್‌ನಲ್ಲಿರುವ ಈ ಗ್ರಾಮವು 2011ರ ಜನಗಣತಿಯ ಪ್ರಕಾರ 556 ಜನಸಂಖ್ಯೆಯನ್ನು ಹೊಂದಿದೆ. ಮಣ್ಣು ಮತ್ತು ಇಟ್ಟಿಗೆಯಿಂದ ನಿರ್ಮಿಸಿದ ಮನೆಗಳಲ್ಲಿ ಇಲ್ಲಿನ ಜನರು ವಾಸಿಸುತ್ತಾರೆ. ಕಲ್ಲಿನ ಚಪ್ಪಡಿಗಳನ್ನು ಛಾವಣಿಯಾಗಿ ಹೊದಿಸಲಾಗಿರುತ್ತದೆ, ಈ ಗ್ರಾಮ ರಾಷ್ಟ್ರೀಯ ಉದ್ಯಾನವನದಿಂದ ಸುತ್ತುವರೆದಿದೆ (ಇದನ್ನು ಕುನೊ ಪಲ್ಪುರ್ ಎಂದೂ ಕರೆಯಲಾಗುತ್ತದೆ), ಅಲ್ಲಿ ಕುನೊ ನದಿ ಹರಿಯುತ್ತದೆ.

ಅರವತ್ತು ವರ್ಷದ ಕಲ್ಲೋ ಆದಿವಾಸಿ ಎಂಬವರು ತಮ್ಮ ಬದುಕನ್ನೆಲ್ಲ ಬಾಗ್ಚಾದಲ್ಲಿಯೇ ಕಳೆದವರು. ‘ಪರಿ’ ತಂಡದೊಂದಿಗೆ ಮಾತನಾಡುತ್ತಾ, “ನಮ್ಮ ಭೂಮಿ ಇಲ್ಲೇ ಇದೆ. ನಮ್ಮ ಕಾಡು ಇಲ್ಲಿದೆ, ನಮ್ಮ ಮನೆ ಇಲ್ಲಿದೆ, ಇಲ್ಲಿ ಏನಿದೆಯೋ ಅದು ನಮ್ಮದು. ಈಗ ನಮ್ಮನ್ನು ತೊರೆಯುವಂತೆ ಒತ್ತಾಯಿಸಲಾಗುತ್ತಿದೆ” ಎಂದು ದುಃಖ ತೋಡಿಕೊಂಡಿದ್ದರು.

ಬಾಗ್ಚಾ ಸುತ್ತಲೂ ಕಾಡು. ಹೆಚ್ಚಿನ ಸಂಖ್ಯೆಯ ಬೀಡಾಡಿ ದನಗಳು. ಇಲ್ಲಿಗೆ ಆರೋಗ್ಯ ಕೇಂದ್ರವು 20 ಕಿಲೋಮೀಟರ್ ದೂರದಲ್ಲಿದೆ. 108ಕ್ಕೆ ಕರೆ ಮಾಡುವ ಮೂಲಕ ಸೌಲಭ್ಯ ಪಡೆಯಬಹುದು, ಆದರೆ ಫೋನ್ ಲೈನ್ ಗಳು ಮತ್ತು ನೆಟ್ವರ್ಕ್ ಕಾರ್ಯನಿರ್ವಹಿಸುತ್ತಿರುವಾಗ ಮಾತ್ರ ಈ ಸೌಲಭ್ಯ ಪಡೆಯಲು ಸಾಧ್ಯ. ಬಾಗ್ಚಾದಲ್ಲಿ ಪ್ರಾಥಮಿಕ ಶಾಲೆ ಇದೆ, ಆದರೆ 5ನೇ ತರಗತಿಯ ನಂತರ ಓದಲು, ಮಕ್ಕಳು 20 ಕಿಲೋಮೀಟರ್ ದೂರದಲ್ಲಿರುವ ಓಚಾದ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು.

ಸಹರಿಯಾ ಜನರು ಸಣ್ಣ ತುಂಡು ಭೂಮಿಗಳಲ್ಲಿ ಮಳೆಯಾಶ್ರಿತ ಕೃಷಿಯನ್ನು ಮಾಡುತ್ತಾರೆ. ಕಾಡನ್ನು ನಂಬಿ ಬದುಕು ಕಂಡುಕೊಂಡ ಜನರಿವರು. ತೆಂಡು ಎಲೆಗಳು, ಹಣ್ಣುಗಳು, ಬೇರುಗಳು ಮತ್ತು ಗಿಡಮೂಲಿಕೆಗಳು, ಇತ್ಯಾದಿಗಳು ಇವರ ಸಂಪಾದನೆಯ ಮೂಲವಾಗಿದ್ದವು. ಕಾಡಿನಿಂದ ಹೊರಹೋಗುವುದೆಂದರೆ ಈ ಎಲ್ಲಾ ಆದಾಯ ಮೂಲಗಳನ್ನು ಕಳೆದುಕೊಳ್ಳುವುದೇ ಆಗಿದೆ.

“ನಮಗೆ ಕಾಡು ನೀಡುತ್ತಿದ್ದ ಸುರಕ್ಷಿತ ಭಾವನೆ ಇಲ್ಲವಾಗುತ್ತದೆ. ಇನ್ನು ಮುಂದೆ ಚಿರ್‌ ಮತ್ತು ಗೊಂಡ್‌ ಸಂಗ್ರಹಿಸಲು ಸಾಧ್ಯವಿಲ್ಲ. ನಮ್ಮ ಉಪ್ಪು ಮತ್ತು ಎ‍ಣ್ಣೆಯ ಖರ್ಚು ಇದರಿಂದಲೇ ಹುಟ್ಟುತ್ತಿತ್ತು. ನಮಗೆ ದಿನಗೂಲಿಯೊಂದೇ ಆಯ್ಕೆಯಾಗಿ ಉಳಿಯಲಿದೆ” ಎಂದು ಸಹಾರಿಯ ಸಮುದಾಯದ ಹರೇತ್‌ ಆದಿವಾಸಿ ನೋವು ತೋಡಿಕೊಂಡಿದ್ದಾರೆ.

ಚೀತಾ ಯೋಜನೆಯಿಂದ ಹೇಗೆ ಇಲ್ಲಿನ ಆದಿವಾಸಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡ ವಿಸ್ತೃತವಾಗಿ ಹೊರಗೆಡವಿದೆ. (ವಿವರಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ಇದನ್ನೂ ಓದಿರಿ: ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಪ್ರಕೃತಿ ವಿರೋಧಿ ಕೃತ್ಯ: ನವೀನ್ ಸೂರಿಂಜೆ

“ಆಫ್ರಿಕಾದಿಂದ ಭಾರತಕ್ಕೆ ಚೀತಾವನ್ನು ತಂದಿರೋದನ್ನು ವೈಭವಿಕರೀಸಲಾಗುತ್ತಿದೆ. ವಾಸ್ತವವಾಗಿ ಇದು ಪ್ರಕೃತಿ ವಿರೋಧಿ ಮತ್ತು ಮಾನವ ವಿರೋಧಿ ಕೃತ್ಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

“ಆಫ್ರಿಕಾದಿಂದ ತಂದ ಚೀತಾವನ್ನು ಅದರದ್ದಲ್ಲದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಜಗತ್ತಿನ ಅತ್ಯಂತ ವೇಗದ ಮತ್ತು ಕ್ರೂರ ಪ್ರಾಣಿಯಾದ ಚೀತಾ ತನ್ನದಲ್ಲದ ಅಪರಿಚಿತ ಕಾಡಲ್ಲಿ ಬೇಟೆಯನ್ನು ಹುಡುಕಬೇಕು. ಅದು ಕಾಡಿನ ಸುತ್ತ ಇರುವ ಆದಿವಾಸಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಆಹಾರದ ಕೊರತೆಯಾದಾಗ, ಹೊಸ ಕಾಡಲ್ಲಿ ಬೇಟೆ ಸಿಗದೇ ಇದ್ದಾಗ ಕುನೋ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಆದಿವಾಸಿಗಳು ಮತ್ತು ಅವರ ಹಟ್ಟಿಯಲ್ಲಿರುವ ದನಗಳತ್ತಾ ಚೀತಾದ ಗಮನ ಸೆಳೆಯಬಹುದು. ಜೊತೆಗೆ ಕಾಡಿನ ಹೊಸ ಚೀತಾಗಳ ಆಗಮನದಿಂದ ಚಿರತೆಗಳು ಮತ್ತು ಹುಲಿಗಳು ಕಾಡಿನ ಹೊರ ಭಾಗದಲ್ಲಿ ಸುಲಭವಾಗಿ ಸಿಗುವ ಮನುಷ್ಯರು ಮತ್ತು ಮನುಷ್ಯರು ಸಾಕಿದ ಪ್ರಾಣಿಗಳ ಮೇಲೆ ಎರಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇದು ಮೋದಿಯಿಂದಾದ ಸಮಸ್ಯೆ ಮಾತ್ರವಲ್ಲ. ನಮ್ಮದೇ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲೂ ಈ ಸಮಸ್ಯೆ ಇದೆ‌. ಯಾವುದಾದರೂ ಊರಲ್ಲಿ ಚಿರತೆ ಸಿಕ್ಕಿದರೆ ಅದನ್ನು ಹಿಡಿದು ಪಶ್ಚಿಮ ಘಟ್ಟದಲ್ಲಿ ಬಿಡುತ್ತಾರೆ. ಎಲ್ಲೇ ಕಾಳಿಂಗ ಸರ್ಪ, ಹುಲಿಯ ಪ್ರಭೇದಗಳು ಸಿಕ್ಕರೂ ಪಶ್ಚಿಮ ಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಈ ರೀತಿ ಸಿಕ್ಕ ಪ್ರಾಣಿಗಳ ನಿಜವಾದ ವಾಸಸ್ಥಳ ಎಲ್ಲಿ? ಅವು ಯಾವ ಕಾಡಿನಿಂದ ತಪ್ಪಿಸಿಕೊಂಡು ಬಂದವು ಎಂಬ ಬಗ್ಗೆ ಅಧ್ಯಯನ ಮಾಡುವ ಗೋಜಿಗೆ ಯಾರೂ ಹೋಗುವುದಿಲ್ಲ. ಯಾವುದೋ ಒಂದು ಕಾಡಾದರೆ ಆಯ್ತು. ಹೀಗೆ ಮಾಡಿದ್ದರಿಂದ ಕುತ್ಲೂರು ಸೇರಿದಂತೆ ಹಲವಾರು ಕಾಡಂಚಿನ ಗ್ರಾಮದ ಆದಿವಾಸಿಗಳು ತೊಂದರೆ ಅನುಭವಿಸಿದ್ದಿದೆ. ಈ ರೀತಿ ಎಲ್ಲೆಲ್ಲಿಂದಲೋ ಪ್ರಾಣಿಗಳ ತಂದು ನಮ್ಮ ಕಾಡಲ್ಲಿ ತಂದು ಬಿಡುವುದನ್ನು ಮಲೆಕುಡಿಯ ಸಮುದಾಯ ಪ್ರತಿಭಟನೆ ಕೂಡಾ ನಡೆಸಿತ್ತು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ೫೫೬ ಜನ ಆದಿವಾಸಿಗಳ ಬದುಕನ್ನು ಹಾಳುಮಾಡಿ, ವಿದೇಶದಿಂದ ಚಿರತೆ ತಂದು ಸಾಕಬೇಕಾದ ಅನಿವಾರ್ಯತೆ ನಮಗೆ ಇದೆಯಾ? ಈ ಆದಿವಾಸಿಗಳ ಬದುಕಿಗೆ ಬೆಲೆಯೇ ಇಲ್ಲವಾ?

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...