Homeಮುಖಪುಟಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

- Advertisement -
- Advertisement -

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 20 ಜನರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತಕ್ಕೆ ಚಾಲಕನೇ ನಿರ್ಲಕ್ಷ್ಯವೇ ಕಾರಣ ಎಂದು ಮೋಲ್ನೋಟಕ್ಕೆ ಕಂಡುಬಂದಿದೆ.

ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವಿ ಕಾವೇರಿ ಟ್ರಾವೆಲ್ಸ್‌ಗೆ ಸೇರಿದ 44 ಪ್ರಯಾಣಿಕರಿದ್ದ ಬಸ್, ತೆಲಂಗಾಣದ ಹೈದರಾಬಾದ್‌ನಿಂದ ಕರ್ನಾಟಕದ ಬೆಂಗಳೂರಿಗೆ ಹೋಗುತ್ತಿದ್ದಾಗ ಕರ್ನೂಲ್ ನಗರದ ಹೊರವಲಯದ ಬಳಿ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 44 ರಲ್ಲಿ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮಲ್ಟಿ ಆಕ್ಸಲ್ ಸ್ಲೀಪರ್ ಎಸಿ ವೋಲ್ವೋ ಬಸ್ 42 ಆಸನ ಸಾಮರ್ಥ್ಯವನ್ನು ಹೊಂದಿತ್ತು ಎಂದು ವರದಿಯಾಗಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ, ಚಾಲಕನ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ಪ್ರಕರಣ ದಾಖಲಿಸಿದ್ದಾರೆ. ಬಸ್‌ನ ಇಬ್ಬರು ಚಾಲಕರ ವಿರುದ್ಧ ಅತಿವೇಗದ ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಒಬ್ಬರು ತಮ್ಮ ಹೇಳಿಕೆ ಬದಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಪ್ರಮುಖ ಅಂಶಗಳು

ಪೊಲೀಸರು ಮತ್ತು ಬದುಕುಳಿದ ಪ್ರಯಾಣಿಕರ ಪ್ರಕಾರ, ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. “ದ್ವಿಚಕ್ರ ವಾಹನವು ಬಸ್ಸಿನ ಕೆಳಗೆ ಸಿಲುಕಿಕೊಂಡು ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತಕ್ಷಣ ಸ್ಫೋಟಗೊಂಡು ವಾಹನದಾದ್ಯಂತ ಬೆಂಕಿ ವೇಗವಾಗಿ ಹರಡಿತು” ಎಂದು ಪೊಲೀಸರು ಹೇಳಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕಲ್ಲೂರ್ ಮಂಡಲದ ಚಿನ್ನೇಕೂರ್ ಗ್ರಾಮದ ಬಳಿ ಸಂಭವಿಸಿದ ಬಸ್ ಬೆಂಕಿಯಲ್ಲಿ ಬೈಕ್ ಸವಾರ ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಘಟನೆಯ ನಡುವೆ ಇನ್ನೂ 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ಬೆಳಗಿನ ಜಾವ ನಡೆದಾಗ, ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಕೆಲವು ಪ್ರಯಾಣಿಕರು ಹಠಾತ್ ಬೆಂಕಿಯಿಂದ ಎಚ್ಚರಗೊಂಡು ಕಿಟಕಿಗಳನ್ನು ಮುರಿದು ಹೊರಗೆ ಹಾರುವಲ್ಲಿ ಯಶಸ್ವಿಯಾದರು, ಇತರರು ಒಳಗೆ ಸಿಲುಕಿಕೊಂಡರು ಮತ್ತು ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಅನ್ನು ಆವರಿಸಿದ್ದರಿಂದ ಗುರುತಿಸಲಾಗದಷ್ಟು ಸುಟ್ಟುಹೋದರು.

ಬದುಕುಳಿದವರಲ್ಲಿ ಒಬ್ಬರಾದ ಎನ್ ರಮೇಶ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಬಸ್‌ನ ಇಬ್ಬರು ಚಾಲಕರ ವಿರುದ್ಧ ನಿರ್ಲಕ್ಷ್ಯ ಮತ್ತು ಅತಿವೇಗದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಾಲಕರು ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಗೆ ಕಾರಣ ಎಂದು ಆರೋಪಿಸಿದ್ದಾರೆ. ವಾಹನವು ಅತಿವೇಗದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದು ಸುಮಾರು 200 ಮೀಟರ್‌ಗಳಷ್ಟು ಎಳೆದುಕೊಂಡು ಹೋಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ರಮೇಶ್‌ಗೆ ತಿಳಿಸಿದ್ದಾರೆ.

ಓರ್ವ ಚಾಲಕ ಪೊಲೀಸ್ ವಶಕ್ಕೆ; ಮತ್ತೊಬ್ಬ ಪರಾರಿ

ಹಲವಾರು ಪ್ರಯಾಣಿಕರನ್ನು ರಕ್ಷಿಸಿದ್ದಕ್ಕಾಗಿ ಕೆಲವರು ವೀರ ಎಂದು ಬಿಂಬಿಸಲ್ಪಟ್ಟ ಇಬ್ಬರು ಬಸ್ ಚಾಲಕರಲ್ಲಿ ಒಬ್ಬರು ತಮ್ಮ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಘಟನೆಯ ಸಮಯದಲ್ಲಿ ಬಸ್‌ನ ಎರಡನೇ ಚಾಲಕ ಶಿವ ನಾರಾಯಣ (30) ಸ್ಟೇರಿಂಗ್ ಹಿಂದೆ ಇರಲಿಲ್ಲ. ಆದರೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯ ನಂತರ, ಬಸ್ ಚಲಾಯಿಸುತ್ತಿದ್ದ ಲಕ್ಷ್ಮಯ್ಯ ಎಂಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಶಿವ ನಾರಾಯಣ ಈ ಹಿಂದೆ ಭಾರೀ ಮಳೆಯ ನಡುವೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ರಸ್ತೆಯ ಗೋಚರತೆ ಕಡಿಮೆಯಾಗಿತ್ತು ಎಂದು ಹೇಳಿದ್ದರು. ಆದರೆ, ನಂತರ ಹೇಳಿಕೆಯನ್ನು ಬದಲಾಯಿಸಿ ಮೋಟಾರ್‌ ಬೈಕ್ ಸವಾರ ಹಿಂದಿನ ಬಂದು ಅಪಘಾತ ಮಾಡಿದ್ದರಿಂದ ರಸ್ತೆಯಲ್ಲಿ ಬಿದ್ದಿದ್ದರು, ಚಾಲಕ ಲಕ್ಷ್ಮಯ್ಯ ಅರಿವಿಲ್ಲದೆ ಅವರ ಮೇಲೆ ಬಸ್ ಚಲಾಯಿಸಿದ್ದರಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಅಪಾಯಕಾರಿ ಚಾಲನೆ ಮತ್ತು ಅನಧಿಕೃತ ಪಾರ್ಕಿಂಗ್ ಸೇರಿದಂತೆ ಸಂಚಾರ ಉಲ್ಲಂಘನೆ ಆರೋಪದ ಮೇಲೆ ತೆಲಂಗಾಣ ಪೊಲೀಸರು ಐಷಾರಾಮಿ ಬಸ್‌ಗೆ ಹಲವಾರು ಚಲನ್‌ಗಳನ್ನು ವಿಧಿಸಿದ್ದಾರೆ ಎಂದು ಬೆಳಕಿಗೆ ಬಂದಿದೆ. ವಾಹನವು ಅಖಿಲ ಭಾರತ ಪರವಾನಗಿ ಮತ್ತು ಮಾನ್ಯ ಫಿಟ್‌ನೆಸ್ ಪ್ರಮಾಣಪತ್ರವನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...