Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...