Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...