Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...