Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...