Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...