Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...