Homeಕರ್ನಾಟಕಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

- Advertisement -
- Advertisement -

ಕುವೆಂಪುರವರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥರವರು ತೀರ್ಥಹಳ್ಳಿಯಲ್ಲಿ ನಡೆದ ‘ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರತಿಭಟನೆಗಳು ನಡೆದಿದ್ದವು. ವಿರೋಧದ ನಡುವೆಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಹಿತ್ ಚಕ್ರತೀರ್ಥರವರು ತಮ್ಮ ಉಪನ್ಯಾಸದಲ್ಲಿ “ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು” ಎಂದು ಉಲ್ಲೇಖಿಸಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

“ವೇದ, ಪುರಾಣಗಳನ್ನು ರಾಷ್ಟ್ರಕವಿ ಕುವೆಂಪು ವಿರೋಧಿಸಿರಲಿಲ್ಲ. ವರ್ಣಾಶ್ರಮ ಪದ್ಧತಿಯನ್ನು ಅವರು ಒಪ್ಪಿ ಬೆಂಬಲಿಸಿದ್ದರು. ವರ್ಣಾಶ್ರಮ ಪದ್ಧತಿ ಧಾರ್ಮಿಕತೆಗೆ ಪೂರಕವಾಗಿದೆ. ಸಂಸ್ಕಾರ, ಸಂಸ್ಕೃತಿಗಳನ್ನು ಒಳಗೊಳ್ಳದ ಕುಟುಂಬಗಳು ಸುಡುಗಾಡಿಗಿಂತಲೂ ಕೀಳು ಎಂದು ಕುವೆಂಪು ಪ್ರತಿಪಾದಿಸಿದ್ದರು” ಎಂಬ ಚಕ್ರತೀರ್ಥರ ಭಾಷಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಲೇಖಕ ಮತ್ತು ವ್ಯಂಗ್ಯ ಚಿತ್ರಕಾರ ಪಂಜು ಗಂಗೊಳ್ಳಿಯವರು ರೋಹಿತ್ ಚಕ್ರತೀರ್ಥರ ಭಾಷಣವನ್ನು ಖಂಡಿಸಿ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಳುಬುರುಕನೊಬ್ಬ ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು ಎಂದು ಹೇಳಿದ್ದನಂತೆ. ಆ ಕಾರ್ಯಕ್ರಮದಲ್ಲಿದ್ದ ಯಾರಾದರೂ ಅದನ್ನು ಅಲ್ಲಿಯೇ ವಿರೋಧಿಸಿದ್ದರೇ ಇಲ್ಲವೋ ತಿಳಿಯದು. ಆದರೆ, ವರ್ಣಾಶ್ರಮ ಪದ್ಧತಿ ಬಗ್ಗೆ ಕುವೆಂಪುರವರ ಅಭಿಪ್ರಾಯವನ್ನು ಕೆ.ಪಿ.ನಟರಾಜ್ ರವರು ಇಲ್ಲಿ ಹಂಚಿಕೊಂಡಿದ್ದಾರೆ. “ವಿಶ್ವ ಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆ ಸಂಪಾದಿಸಿ, “ಮನುಷ್ಯಜಾತಿ ತಾನೊಂದೆ ವಲಂ” ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು. ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ-ಕ್ಷತ್ರಿಯ, ವೈಶ್ಯ-ಶೂದ್ರ, ಅಂತ್ಯಜ, ಷಿಯಾ-ಸುನ್ನಿ, ಕ್ಯಾಥೊಲಿಕ್- ಪ್ರಾಟೆಸ್ಟಂಟ್, ಸಿಕ್-ನಿರಂಕಾರಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು” ಎಂದು ಕುವೆಂಪು ಹೇಳಿದ್ದರು ಎಂದು ಬರೆದಿದ್ದಾರೆ.

ಮುಂದುವರೆದು, ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೆ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪು ಕಟ್ಟಿ ಜಗಳ ಹಚ್ಚುವಂತಾಗಬಾರದು. ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂದಿದ್ದಾರೆ.

ನಾನು ಹಿಂದೂ ಅಲ್ಲ – ಕುವೆಂಪು

“ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇಃ ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ ಪ್ರಾಣೀನಾ? ಬೇರೆ ಪ್ರಾಣಿಗಳೇನು ಪಾಪ ಮಾಡಿದ್ದಾವೆ? ಅವೂ ಅಷ್ಟೇ ಮುಖ್ಯ. ಪೂಜೆ, ಪುನಸ್ಕಾರ, ವಿಧಿ ಇಂಥವುಗಳನ್ನು ಮಾಡೋರು ಹಿಂದುಗಳಾದರೆ, ಇದಾವುದನ್ನೂ ನಾನೂ ಮಾಡೋದಿಲ್ಲ. ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ” ಎಂಬ ಕುವೆಂಪುರವರ ಬರಹ ಇದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

ಧರಣಿಯ ಅಮರರ ಧನದಿ ಸಲಹಿದ
ಕರಿತುರಗ ಮೊದಲಾದ ದಳವು
ಉಬ್ಬರದಿ ಹೆಚ್ಚಿಹುದು ಅರಿನೃಪಾಲರ ಯುದ್ಧಪರಿಯಂತ
ಜರಿದು ನಸಿವುದು, ವಾಹಿನಿಗೆ ಮಲೆತ
ಉರಿಮಳಲ ಕಟ್ಟೆಯವೋಲ್ ಆದನರಿದ
ಅರಸುಗಳು ವರ್ಣೋತ್ತಮಠ ದೆಸೆಗೆ ಅಂಜಬೇಕೆಂದ

ಇದರ ಅರ್ಥ ಅರಸನಾದವನು ಯಾವಾಗಲೂ ವರ್ಣೋತ್ತಮರಿಗೆ ಹೆದರಿಕೊಂಡಿರಬೇಕು ಎಂಬುದು. ಒಂದು ವೇಳೆ ಅವನೇನಾದರೂ ಅವರ ವಿರೋಧ ಮಾಡಿಕೊಂಡರೆ ಪ್ರವಾಹಕ್ಕೆ ಕೊಚ್ಚಿ ಹೋಗುವ ಮಳಲ ಕಟ್ಟೆಯಂತೆ ಅವರ ಸ್ಥಿತಿ. ನಾನು ಸುಮ್ಮನೆ ಅಲ್ಲಿ ಇಲ್ಲಿ ಒಂದೆರಡು ಉದಾಹರಣೆಗಳನ್ನು ಹೇಳಿದ್ದೇನೆ ಅಷ್ಟೆ. ಆದರೆ ಇಂಥದ್ದು ನಮ್ಮಲ್ಲಿ ರಾಶಿರಾಶಿಯಾಗಿದೆ. ಕೆಲವು ದಿನಗಳ ಹಿಂದೆ ಶ್ರೀ ಬಸವಲಿಂಗಪ್ಪನವರು ‘ಬೂಸ’ ಎಂದು ಹೇಳಿದರಲ್ಲ; ಇದೆಲ್ಲಾ ಆ ಬೂಸಾಕ್ಕೆ ಸೇರುತ್ತದೆ. ಯಾರೋ ಒಬ್ಬರು ಕೇಳಿದರು, ಕುಮಾರವ್ಯಾಸ ಭಾರತಕ್ಕೆ ನೀವೂ ಒಬ್ಬರು ಸಂಪಾದಕರು, ಇದನ್ನೆಲ್ಲಾ ಸೇರಿಸಿಬಿಟ್ಟಿದ್ದೀರಲ್ಲಾ ಎಂದು, ನಮ್ಮ ದೃಷ್ಟಿ academic ಎಂದು ಹೇಳುತ್ತಾರಲ್ಲ ಆ ತರಹದ್ದು. ನಾಳೆ ನೀವು ಯಾರಾದರೂ ಇದನ್ನು ಪಠ್ಯಪುಸ್ತಕವಾಗಿ ಮಾಡಬೇಕಾದರೆ ಇದನ್ನೆಲ್ಲಾ ತೆಗೆದುಬಿಟ್ಟು ನಿಜವಾದ ಕಾವ್ಯದ ಅಂಶ ಏನಿದೆಯೊ ಅದನ್ನು ಮಾತ್ರ ಉಳಿಸಬೇಕಾಗುತ್ತದೆ – ಹೀಗೆ ಹೇಳಿದವರು ಕುವೆಂಪು.. ಎಂದು ಪ್ರಸನ್ನ ಲಕ್ಷ್ಮೀಪುರರವರು ಪೋಸ್ಟ್ ಮಾಡಿದ್ದಾರೆ.

ಕುವೆಂಪುವನ್ನು ಅವಮಾನಿಸುವ ಅತ್ಯುತ್ತಮ ಉಪಾಯವೆಂದರೆ ಕುವೆಂಪು ನಿಂದಕನಿಂದ, ಕುವೆಂಪು ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲದವನಿಂದ, ಕುವೆಂಪು ಚಿಂತನೆಯನ್ನು ಅಪಹಾಸ್ಯ ಮಾಡುವವನಿಂದ (ವಿರೋಧ, ಟೀಕೆ, ವಿಮರ್ಶೆಯಲ್ಲ; ವಿರೋಧ, ಟೀಕೆ, ವಿಮರ್ಶೆ ಯಾರೂ ಮಾಡಬಹುದು. ಅದು ತಪ್ಪಲ್ಲ. ಯಾರೂ ವಿಮರ್ಶಾತೀತರಲ್ಲ) ಕುವೆಂಪು ಬಗ್ಗೆ ಭಾಷಣ ಮಾಡಿಸುವುದು.
ಇಂತಹ ಒಂದು ಕಾರ್ಯಕ್ರಮ ಕುವೆಂಪು ಊರಿನಲ್ಲಿಯೇ ನಡೆಯಬೇಕೇ !!? ತೀರ್ಥಹಳ್ಳಿ ಯಾಕೆ ಹೀಗಾಯಿತು?!! ಎಂದು ಚಿಂತಹ ಶ್ರೀನಿವಾಸ ಕಾರ್ಕಳರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...