Homeಕರ್ನಾಟಕಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

- Advertisement -
- Advertisement -

ಕುವೆಂಪುರವರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥರವರು ತೀರ್ಥಹಳ್ಳಿಯಲ್ಲಿ ನಡೆದ ‘ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರತಿಭಟನೆಗಳು ನಡೆದಿದ್ದವು. ವಿರೋಧದ ನಡುವೆಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಹಿತ್ ಚಕ್ರತೀರ್ಥರವರು ತಮ್ಮ ಉಪನ್ಯಾಸದಲ್ಲಿ “ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು” ಎಂದು ಉಲ್ಲೇಖಿಸಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

“ವೇದ, ಪುರಾಣಗಳನ್ನು ರಾಷ್ಟ್ರಕವಿ ಕುವೆಂಪು ವಿರೋಧಿಸಿರಲಿಲ್ಲ. ವರ್ಣಾಶ್ರಮ ಪದ್ಧತಿಯನ್ನು ಅವರು ಒಪ್ಪಿ ಬೆಂಬಲಿಸಿದ್ದರು. ವರ್ಣಾಶ್ರಮ ಪದ್ಧತಿ ಧಾರ್ಮಿಕತೆಗೆ ಪೂರಕವಾಗಿದೆ. ಸಂಸ್ಕಾರ, ಸಂಸ್ಕೃತಿಗಳನ್ನು ಒಳಗೊಳ್ಳದ ಕುಟುಂಬಗಳು ಸುಡುಗಾಡಿಗಿಂತಲೂ ಕೀಳು ಎಂದು ಕುವೆಂಪು ಪ್ರತಿಪಾದಿಸಿದ್ದರು” ಎಂಬ ಚಕ್ರತೀರ್ಥರ ಭಾಷಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಲೇಖಕ ಮತ್ತು ವ್ಯಂಗ್ಯ ಚಿತ್ರಕಾರ ಪಂಜು ಗಂಗೊಳ್ಳಿಯವರು ರೋಹಿತ್ ಚಕ್ರತೀರ್ಥರ ಭಾಷಣವನ್ನು ಖಂಡಿಸಿ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಳುಬುರುಕನೊಬ್ಬ ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು ಎಂದು ಹೇಳಿದ್ದನಂತೆ. ಆ ಕಾರ್ಯಕ್ರಮದಲ್ಲಿದ್ದ ಯಾರಾದರೂ ಅದನ್ನು ಅಲ್ಲಿಯೇ ವಿರೋಧಿಸಿದ್ದರೇ ಇಲ್ಲವೋ ತಿಳಿಯದು. ಆದರೆ, ವರ್ಣಾಶ್ರಮ ಪದ್ಧತಿ ಬಗ್ಗೆ ಕುವೆಂಪುರವರ ಅಭಿಪ್ರಾಯವನ್ನು ಕೆ.ಪಿ.ನಟರಾಜ್ ರವರು ಇಲ್ಲಿ ಹಂಚಿಕೊಂಡಿದ್ದಾರೆ. “ವಿಶ್ವ ಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆ ಸಂಪಾದಿಸಿ, “ಮನುಷ್ಯಜಾತಿ ತಾನೊಂದೆ ವಲಂ” ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು. ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ-ಕ್ಷತ್ರಿಯ, ವೈಶ್ಯ-ಶೂದ್ರ, ಅಂತ್ಯಜ, ಷಿಯಾ-ಸುನ್ನಿ, ಕ್ಯಾಥೊಲಿಕ್- ಪ್ರಾಟೆಸ್ಟಂಟ್, ಸಿಕ್-ನಿರಂಕಾರಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು” ಎಂದು ಕುವೆಂಪು ಹೇಳಿದ್ದರು ಎಂದು ಬರೆದಿದ್ದಾರೆ.

ಮುಂದುವರೆದು, ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒಂದು ಮತಕ್ಕೆ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪು ಕಟ್ಟಿ ಜಗಳ ಹಚ್ಚುವಂತಾಗಬಾರದು. ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂದಿದ್ದಾರೆ.

ನಾನು ಹಿಂದೂ ಅಲ್ಲ – ಕುವೆಂಪು

“ಹಾಗೆ ನೋಡಿದರೆ ನಾನು ಹಿಂದೂ ಅಂತ ಹೇಳಿಕೊಳ್ಳೋದೆ ಇಲ್ಲ. ನಾನು ಹಿಂದೂ ಅಲ್ಲ. ಹಿಂದೂ ಅಂದರೆ ಗಂಗಾ-ಗಾಯತ್ರೀ-ಗೋವು ಇವು ಪವಿತ್ರ ಅಂತ ಭಾವಿಸೋದು. ಗಂಗಾ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಕೂಡ ಪವಿತ್ರ ಅಲ್ಲವೇ? ಗಾಯತ್ರಿ ಒಂದು ಪ್ರಾರ್ಥನೆ ಆದರೆ ನಾನು ಹಾಡೋ ಪದ್ಯಾನೂ ಗಾಯತ್ರೀನೇಃ ಇನ್ನು ಗೋವು, ಕಡಿಬಾರದು ಅನ್ನೋದಾದ್ರೆ ಅದೊಂದೇ ಪ್ರಾಣೀನಾ? ಬೇರೆ ಪ್ರಾಣಿಗಳೇನು ಪಾಪ ಮಾಡಿದ್ದಾವೆ? ಅವೂ ಅಷ್ಟೇ ಮುಖ್ಯ. ಪೂಜೆ, ಪುನಸ್ಕಾರ, ವಿಧಿ ಇಂಥವುಗಳನ್ನು ಮಾಡೋರು ಹಿಂದುಗಳಾದರೆ, ಇದಾವುದನ್ನೂ ನಾನೂ ಮಾಡೋದಿಲ್ಲ. ನೀವು ಹೇಳುವ ಹಿಂದುವಿನ ಯಾವ ಲಕ್ಷಣಗಳೂ ನನ್ನಲ್ಲಿಲ್ಲ” ಎಂಬ ಕುವೆಂಪುರವರ ಬರಹ ಇದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

ಧರಣಿಯ ಅಮರರ ಧನದಿ ಸಲಹಿದ
ಕರಿತುರಗ ಮೊದಲಾದ ದಳವು
ಉಬ್ಬರದಿ ಹೆಚ್ಚಿಹುದು ಅರಿನೃಪಾಲರ ಯುದ್ಧಪರಿಯಂತ
ಜರಿದು ನಸಿವುದು, ವಾಹಿನಿಗೆ ಮಲೆತ
ಉರಿಮಳಲ ಕಟ್ಟೆಯವೋಲ್ ಆದನರಿದ
ಅರಸುಗಳು ವರ್ಣೋತ್ತಮಠ ದೆಸೆಗೆ ಅಂಜಬೇಕೆಂದ

ಇದರ ಅರ್ಥ ಅರಸನಾದವನು ಯಾವಾಗಲೂ ವರ್ಣೋತ್ತಮರಿಗೆ ಹೆದರಿಕೊಂಡಿರಬೇಕು ಎಂಬುದು. ಒಂದು ವೇಳೆ ಅವನೇನಾದರೂ ಅವರ ವಿರೋಧ ಮಾಡಿಕೊಂಡರೆ ಪ್ರವಾಹಕ್ಕೆ ಕೊಚ್ಚಿ ಹೋಗುವ ಮಳಲ ಕಟ್ಟೆಯಂತೆ ಅವರ ಸ್ಥಿತಿ. ನಾನು ಸುಮ್ಮನೆ ಅಲ್ಲಿ ಇಲ್ಲಿ ಒಂದೆರಡು ಉದಾಹರಣೆಗಳನ್ನು ಹೇಳಿದ್ದೇನೆ ಅಷ್ಟೆ. ಆದರೆ ಇಂಥದ್ದು ನಮ್ಮಲ್ಲಿ ರಾಶಿರಾಶಿಯಾಗಿದೆ. ಕೆಲವು ದಿನಗಳ ಹಿಂದೆ ಶ್ರೀ ಬಸವಲಿಂಗಪ್ಪನವರು ‘ಬೂಸ’ ಎಂದು ಹೇಳಿದರಲ್ಲ; ಇದೆಲ್ಲಾ ಆ ಬೂಸಾಕ್ಕೆ ಸೇರುತ್ತದೆ. ಯಾರೋ ಒಬ್ಬರು ಕೇಳಿದರು, ಕುಮಾರವ್ಯಾಸ ಭಾರತಕ್ಕೆ ನೀವೂ ಒಬ್ಬರು ಸಂಪಾದಕರು, ಇದನ್ನೆಲ್ಲಾ ಸೇರಿಸಿಬಿಟ್ಟಿದ್ದೀರಲ್ಲಾ ಎಂದು, ನಮ್ಮ ದೃಷ್ಟಿ academic ಎಂದು ಹೇಳುತ್ತಾರಲ್ಲ ಆ ತರಹದ್ದು. ನಾಳೆ ನೀವು ಯಾರಾದರೂ ಇದನ್ನು ಪಠ್ಯಪುಸ್ತಕವಾಗಿ ಮಾಡಬೇಕಾದರೆ ಇದನ್ನೆಲ್ಲಾ ತೆಗೆದುಬಿಟ್ಟು ನಿಜವಾದ ಕಾವ್ಯದ ಅಂಶ ಏನಿದೆಯೊ ಅದನ್ನು ಮಾತ್ರ ಉಳಿಸಬೇಕಾಗುತ್ತದೆ – ಹೀಗೆ ಹೇಳಿದವರು ಕುವೆಂಪು.. ಎಂದು ಪ್ರಸನ್ನ ಲಕ್ಷ್ಮೀಪುರರವರು ಪೋಸ್ಟ್ ಮಾಡಿದ್ದಾರೆ.

ಕುವೆಂಪುವನ್ನು ಅವಮಾನಿಸುವ ಅತ್ಯುತ್ತಮ ಉಪಾಯವೆಂದರೆ ಕುವೆಂಪು ನಿಂದಕನಿಂದ, ಕುವೆಂಪು ಬಗ್ಗೆ ಮಾತನಾಡುವ ಯಾವ ಯೋಗ್ಯತೆಯೂ ಇಲ್ಲದವನಿಂದ, ಕುವೆಂಪು ಚಿಂತನೆಯನ್ನು ಅಪಹಾಸ್ಯ ಮಾಡುವವನಿಂದ (ವಿರೋಧ, ಟೀಕೆ, ವಿಮರ್ಶೆಯಲ್ಲ; ವಿರೋಧ, ಟೀಕೆ, ವಿಮರ್ಶೆ ಯಾರೂ ಮಾಡಬಹುದು. ಅದು ತಪ್ಪಲ್ಲ. ಯಾರೂ ವಿಮರ್ಶಾತೀತರಲ್ಲ) ಕುವೆಂಪು ಬಗ್ಗೆ ಭಾಷಣ ಮಾಡಿಸುವುದು.
ಇಂತಹ ಒಂದು ಕಾರ್ಯಕ್ರಮ ಕುವೆಂಪು ಊರಿನಲ್ಲಿಯೇ ನಡೆಯಬೇಕೇ !!? ತೀರ್ಥಹಳ್ಳಿ ಯಾಕೆ ಹೀಗಾಯಿತು?!! ಎಂದು ಚಿಂತಹ ಶ್ರೀನಿವಾಸ ಕಾರ್ಕಳರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...