Homeಕರ್ನಾಟಕಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

- Advertisement -
- Advertisement -

ಕನ್ನಡದ ಮಹತ್ವದ ಸಾಹಿತಿ ರಾಷ್ಟ್ರಕವಿ ಕುವೆಂಪುರವರನ್ನು ಮತ್ತು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿರುವ ‘ಶ್ರೀರಾಮಾಯಣ ದರ್ಶನಂ’ ಕೃತಿಯ ಬಗ್ಗೆ ಅವಹೇಳಕಾರಿಯಾಗಿ ಹೀಯಾಳಿಸಿರುವ ಘಟನೆ ಸೋಮವಾರದಂದು ನಡೆದಿದೆ.

ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ನಲ್ಲಿ ‘ನಾಲೆಡ್ಜ್ ಹೌಸ್ ಕನ್ನಡ’ ಎಂಬ ಗ್ರೂಪಿನಲ್ಲಿ ನಡೆದ ಚರ್ಚೆಯೊಂದರಲ್ಲಿ ದಿವ್ಯ ನಾಯಕ್ ಎಂಬ ಬಿಜೆಪಿ ಬೆಂಬಲಿಗ ಯುವತಿಯೊಬ್ಬರು, “ಕುವೆಂಪು ಅವರಿಗೆ ಗೌರವ ಯಾಕೆ ಕೊಡಬೇಕು? ಯಾರಿಗಾದರೂ ಗೌರವ ಕೊಡುವುದು ಅಥವಾ ಕೊಡದೇ ಇರುವುದು ನನ್ನ ವೈಯಕ್ತಿಕ ಆಯ್ಕೆ. ಕುವೆಂಪು ರಾಮಾಯಣ is something fuck all shit” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

“ಅದನ್ನು ಫಾಲೋ ಮಾಡುವುದಾಗಲಿ, ರೆಫರ್‌ ಮಾಡುವುದಾಗಲಿ ಮಾಡಬೇಡಿ. ಮೂಲ ಕೃತಿಗಳನ್ನು ಓದಿ. ಕುವೆಂಪು ಆಗಲಿ, ಕುವೆಂಪು ಅಪ್ಪ ಆಗಲಿ, ಯಾರೇ ಆಗಲಿ, ಹಿಂದೂಗಳಾಗಿ ಮೂಲ ಕೃತಿಗಳನ್ನು ಓದಿ. ಪುರಸ್ಕಾರ ಬಂದರೆ ಅವರೇನು ದೊಡ್ಡವರಲ್ಲ, ಪುರಸ್ಕಾರ ಎಷ್ಟೋ ಜನರಿಗೆ ಬಂದಿದೆ. ಅವರ (ಬಿಜೆಪಿಯೇತರ) ಸರ್ಕಾರ ಇದ್ದಾಗ ದೇಶ ವಿರೋಧಿಗಳಿಗೆ ಕೂಡಾ ಪುರಸ್ಕಾರ ಬಂದಿದೆ” ಎಂದು ವಿವಾದ ಸೃಷ್ಟಿಸಿದ್ದಾರೆ.

ಅವರ ಹೇಳಿಕೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಯುವತಿಯು ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ಆಪ್ತೆ ಎಂದು ಆರೋಪಿಸಲಾಗಿದೆ. “ಕ್ಲಬ್-ಹೌಸಿನಲ್ಲಿರುವ ಚಕ್ರತೀರ್ಥನ ಸಂಬಂಧಿಗಳಿಗೇಕೆ ಕುವೆಂಪುರವರ ಮೇಲೆ ದ್ವೇಷ ?” ಎಂದು ಪ್ರಶ್ನಿಸಲಾಗಿದೆ.

 

ರಾಷ್ಟ್ರಕವಿ ಕುವೆಂಪು ಅವರನ್ನು ಬಲಪಂಥಿಯರು ನಿರಂತರವಾಗಿ ಗುರಿಯಾಗಿಸುತ್ತಲೇ ಬರುತ್ತಿದ್ದಾರೆ. ಸ್ವತಃ ರೋಹಿತ್‌ ಚಕ್ರತೀರ್ಥ ಅವರು ಕೂಡಾ ನಾಡಗೀತೆಯನ್ನು ಅವಹೇಳನ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಕುವೆಂಪು ಮೇಲಿನ ದಾಳಿಗಳು ಕೂಡಾ ಹೆಚ್ಚಾಗುತ್ತಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ದಿವ್ಯ ನಾಯಕ್ ಅವರ ಹೇಳಿಕೆಯನ್ನು ಹಲವಾರು ಜನರು ಖಂಡಿಸಿದ್ದು, ಬಲಪಂಥೀಯರಿಗೆ ಕುವೆಂಪು ಮತ್ತು ಅವರು ಬರೆದಿರುವ ಕೃತಿಗಳ ಮೇಲೆ ಅಷ್ಟೊಂದು ದ್ವೇಷ ಯಾಕೆ? ಇದಕ್ಕೆ ಅವರ ಪುರೋಹಿತಶಾಹಿ ಮನಸ್ಥಿತಿ ಕಾರಣವಲ್ಲವೇ ಎಂಬ ವಿಷಯದಲ್ಲಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದಾರೆ.

ಜೆಎನ್‌ಯು ಕನ್ನಡ ಅಧ್ಯಯನಪೀಠದ ಮುಖ್ಯಸ್ಥರಾಗಿದ್ದ ಪ್ರೊ. ಪುರುಷೋತ್ತಮ್ ಬಿಳಿಮಲೆಯವರು ಮಾತನಾಡಿ, “ಬಲಪಂಥೀಯರ ಜೊತೆಗೆ ಚರ್ಚೆಯೆ ಸಾಧ್ಯವಿಲ್ಲ. ಎ.ಕೆ ರಾಮಾನುಜ ಅವರು ಸುಮಾರು ಮುನ್ನೂರು ರಾಮಾಯಣಗಳ ಬಗ್ಗೆ ಬರೆದಿದ್ದಾರೆ. ಈ ದೇಶದ ಸಾವಿರಾರು ರಾಮಾಯಣಗಳಲ್ಲಿ ವಾಲ್ಮಿಕಿ ರಾಮಾಯಣ ಕೂಡಾ ಒಂದು. ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಯಾವುದೆ ಸಂಶೋಧಕರು ಒಪ್ಪಿಕೊಂಡಿಲ್ಲ ಹಾಗೂ ಐತಿಹಾಸಿಕವಾಗಿಯು ಅದು ದೃಡಪಟ್ಟಿಲ್ಲ. ಇದು ಕೋಳಿ ಮೊದಲೋ ಮೊಟ್ಟೆ ಮೊದಲೋ ಎಂಬಂತೆ” ಎಂದು ತಿಳಿಸಿದರು.

“ಬಲಪಂಥೀಯರು ಕುವೆಂಪು ಅವರನ್ನು ವಿರೋಧಿಸಲು ಬೇಕಾಗಿ ವಾಲ್ಮಿಕಿ ರಾಮಾಯಣವನ್ನು ತರುತ್ತಾರೆ. ರಾಮಾಯಣದ ಬಹುತ್ವದ ಬಗ್ಗೆ ಕುಮಾರವ್ಯಾಸನೇ ಆ ಕಾಲದಲ್ಲಿ ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂದು ಬರೆದಿದ್ದಾನೆ. ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತಾ ಆರೋಪಗಳು ರಾಜಕೀಯ ಪ್ರೇರೇಪಿತವಾಗಿದ್ದು, ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಪ್ರಾಧ್ಯಾಪಕ ಕೀಲಾರ ನಾಗೇಗೌಡ ಅವರು ಮಾತನಾಡಿ, “ಕುವೆಂಪು ಬದುಕಿದ್ದಾಗಲೂ ಅವರ ಮೇಲೆ ದಾಳಿ ನಡೆಸಲಾಗುತ್ತಿತ್ತು, ಈ ದಾಳಿ ಈಗಲೂ ಮುಂದುವರೆದಿದೆ. ಕುವೆಂಪು ಅವರು ವೈದಿಕ ಮೌಲ್ಯವನ್ನು ಮುರಿದು, ಸರ್ವೋದಯ ಕಾಣಬೇಕೆಂಬ ಪೂರ್ಣದೃಷ್ಟಿಯಲ್ಲಿ ರಾಮಾಯಣ ಬರೆದವರು. ಸರ್ವೋದಯ ಮತ್ತು ಪೂರ್ಣದೃಷ್ಟಿ ಇತರ ರಾಮಾಯಣದಲ್ಲಿ ಇರಲಿಲ್ಲ. ಅವರು ರಾಮಾಯಣಕ್ಕೆ ಹೊಸ ಮೌಲ್ಯ ಕಟ್ಟಿದರು. ಇದು ಕೆಲವು ಜನರಿಗೆ ಆಗಿಬರುವುದಿಲ್ಲ. ಆದ್ದರಿಂದ ಅವರಿಗೆ ಕುವೆಂಪು ಮೇಲೆ ದ್ವೇಷವಿದೆ. ಇವರಿಗೆ ವೈದಿಕತೆ ಮತ್ತು ಗಂಡಾಳ್ವಿಕೆ ಉಳಿಯಬೇಕು. ಹಾಗಾಗಿ ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಪ್ರತಿಪಾದಿಸುತ್ತಾರೆ” ಎಂದು ಹೇಳಿದ್ದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರು, “ಕುವೆಂಪು ಅವರು ಮಾನವತಾವಾದವನ್ನು ಪ್ರತಿಪಾದಿಸಿದವರು. ಜಾತಿ ಮತದ ಸಂಕೋಲೆ ಕಳಚಿ ಪ್ರತಿಯೊಬ್ಬರೂ ವಿಶ್ವ ಮಾನವರಾಗಬೇಕು ಎಂದು ಆಶಿಸಿದವರು. ಕ್ಲಬ್‌ಹೌಸ್‌ನಲ್ಲಿ ಅವರ ಬಗ್ಗೆ ಅವಾಚ್ಯ ಶಬ್ದ ಬಳಸಿದ ದಿವ್ಯಾ ನಾಯಕ್‌ ನಡೆ ಖಂಡನೀಯ” ಎಂದು ಹೇಳಿದರು.

ಕನ್ನಡ ಪರ ಹೋರಾಟಗಾರ, ರಣಧೀರ ಪಡೆಯ ಮುಖಂಡ ಹರೀಶ್ ಬೈರಪ್ಪ ಅವರು ದಿವ್ಯಾ ಅವರ ಹೇಳಿಕೆಯನ್ನು ಖಂಡಿಸಿದ್ದು, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಕುವೆಂಪು ಅವರ ವಿರುದ್ದ ಹಿಂದಿನಿಂದಲೂ ದಾಳಿಯಾಗುತ್ತಲೆ ಬಂದಿದೆ. ಈ ದಾಳಿ ಹೆಚ್ಚಾದಷ್ಟೂ ಅವರ ವಿಚಾರಧಾರೆಗಳು ಗಟ್ಟಿಯಾಗುತ್ತಲೆ ಬರುತ್ತಿದೆ, ಜೊತೆಗೆ ಪ್ರಸ್ತುತಗೊಳ್ಳುತ್ತಲೆ ಹೋಗುತ್ತಿದೆ. ಕುವೆಂಪು ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ, ರಾಜ್ಯ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ದಿ ಪ್ರಾಧಿಕಾರ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕಿತ್ತು. ಆದರೆ ಈ ಯಾರಿಗೂ ಅವು ಬೇಕಿಲ್ಲ, ಕುವೆಂಪು ಬೈಯ್ಯುವುದಕ್ಕೋಸ್ಕರವೇ ಈ ಇಲಾಖೆ ಪ್ರಾಧಿಕಾರವನ್ನು ನೇಮಕ ಮಾಡಿದಂತಿದೆ” ಎಂದು ಹರೀಶ್ ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ವಿಷಯ ಜ್ಞಾನ, ಬೌದ್ಧಿಕ ಸೂಕ್ಷ್ಮತೆ ಮತ್ತು ಗ್ರಹಿಕೆಯ ವಿಸ್ತಾರಗಳಿದ್ದವರು, ಪ್ರಸ್ತುತವೆನಿಸುತ್ತಿದ್ದ ಪ್ರತಿಯೊಂದು ವಿಷಯವನ್ನೂ ತರ್ಕಬದ್ಧವಾಗಿ, ಸರಳವಾಗಿ ಮತ್ತು ನಿಷ್ಠುರವಾಗಿ ವಿಮರ್ಶಿಸುತ್ತಿದ್ದವರು, ಕನ್ನಡದಲ್ಲಿ ಕುವೆಂಪು ಮಾತ್ರ! ಕುವೆಂಪು ಅವರನ್ನು ನಾನು ನೋಡಿಲ್ಲ; ಆದರೆ, ಅವರ ಪ್ರತಿಯೊಂದು ಕೃತಿಯಲ್ಲೂ ಅವರ ವ್ಯಕ್ತಿತ್ವ ಪ್ರಕಟಗೊಳ್ಳುತ್ತದೆ. ಅವರ ದಿವ್ಯ ಚೇತನ ಪ್ರಭಾವಿತಗೊಂಡ ಬಗೆಯನ್ನು ಕುಪ್ಪಳ್ಳಿಯಲ್ಲಿ ನೋಡಬಹುದು.

    ಅವರನ್ನು ಮತ್ತು, ಅವರ ಕೃತಿಗಳ ಆಳ ಮತ್ತು ವಿಸ್ತಾರವನ್ನು, ಪೂರ್ಣವಾಗಿ ಅರಿಯುವಷ್ಟು ನಮ್ಮಲ್ಲಿ ಹೆಚ್ಚಿನವರು ಬೆಳೆದಿಲ್ಲ ಎಂಬುದು ನನ್ನ ನಮ್ರ ತಿಳಿವಳಿಕೆ.

    ಸಾರ್ವಜನಿಕ ವೇದಿಕೆಗಳಲ್ಲಿ ಹೆಸರು ಮಾಡಲು, ಈ ಮಟ್ಟದ ಕೀಳು ಮಟ್ಟದ ಟೀಕೆ ಮಾಡಿದ ಈ ದೀವ್ಯಾ ನಾಯಕ್ ಗೆ ಮನೋವೈದ್ಯಕೀಯ ಚಿಕಿತ್ಸೆ ಅವಶ್ಯಕ ಎನ್ನಿಸುತ್ತದೆ.

  2. ಕುರುಡನೊಬ್ಬ ಆನೆಯನ್ನು ಮುಟ್ಟಿ ವರ್ಣಿಸಿದಂತಿದೆ. ಕುವೆಂಪು ಅವರ ವಿಚಾರಗಳು ಅನೇಕರನ್ನು ಜಾಗೃತ ಗೊಳಿಸಿದ ಸತ್ಯ ಎಲ್ಲೆಡೆ ಕಾಣುತ್ತಿದ್ದೇವೆ. ಶೂದ್ರ ಯುವಕರಿಗೆ ಧರ್ಮದ ಅಫೀಮು ಬಣ್ಣದ ಮಾತುಗಳಲ್ಲಿ ಬಿತ್ತಿ ಬೆಳೆ ತೆಗೆಯುವ ಮಂದಿಯ ಹುನ್ನಾರ ಬಯಲಾಗಿದೆ.
    ಗುಡಿ ಚರ್ಚು, ಮಸೀದಿಗಳು ಮೌಢ್ಯ ಬಿತ್ತುವ ಕೇಂದ್ರ ಗಳೆಂದು ಹೇಳಿದ ಮಾತು ಮಹಾ ಪೋಷಕರಾದ ಇವರಿಗೆ ಅರಗಿಸಿ ಕೊಳ್ಳಲು ಆಗಲಿಲ್ಲ ಎನ್ನುವುದು ಸತ್ಯ.

  3. ಕುವೆಂಪು ಮತ್ತು ಅವರ ಕೃತಿಗಳ ಬಗ್ಗೆ ಅವಹೇಳನವಾಗಿ ಮಾತನಾಡಿರುವುದು ಕಂಡನಾರ್ಹ.

  4. ಕುವೆಂಪು ರವರ ಪುಸ್ತಕಗಳ ಬಗ್ಗೆ ಅವಹೇಳನ ಮಾಡಿರುವ ದಿವ್ಯ ನಾಯಕ್ ರವರ ನಡವಳಿಕೆಯನ್ನು ಖಂಡಿಸುತ್ತೇನೆ

  5. ಮಹಾಚೇತನ ಕುವೆಂಪು ಅವರ ಬಗ್ಗೆ ಟೀಕಿಸಿರುವ ಮಹಾತಾಯಿ ನಿಮಗೆ ದೊಡ್ಡ ನಮಸ್ಕಾರ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...