Homeಕರ್ನಾಟಕಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

- Advertisement -
- Advertisement -

ಕನ್ನಡದ ಮಹತ್ವದ ಸಾಹಿತಿ ರಾಷ್ಟ್ರಕವಿ ಕುವೆಂಪುರವರನ್ನು ಮತ್ತು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿರುವ ‘ಶ್ರೀರಾಮಾಯಣ ದರ್ಶನಂ’ ಕೃತಿಯ ಬಗ್ಗೆ ಅವಹೇಳಕಾರಿಯಾಗಿ ಹೀಯಾಳಿಸಿರುವ ಘಟನೆ ಸೋಮವಾರದಂದು ನಡೆದಿದೆ.

ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ನಲ್ಲಿ ‘ನಾಲೆಡ್ಜ್ ಹೌಸ್ ಕನ್ನಡ’ ಎಂಬ ಗ್ರೂಪಿನಲ್ಲಿ ನಡೆದ ಚರ್ಚೆಯೊಂದರಲ್ಲಿ ದಿವ್ಯ ನಾಯಕ್ ಎಂಬ ಬಿಜೆಪಿ ಬೆಂಬಲಿಗ ಯುವತಿಯೊಬ್ಬರು, “ಕುವೆಂಪು ಅವರಿಗೆ ಗೌರವ ಯಾಕೆ ಕೊಡಬೇಕು? ಯಾರಿಗಾದರೂ ಗೌರವ ಕೊಡುವುದು ಅಥವಾ ಕೊಡದೇ ಇರುವುದು ನನ್ನ ವೈಯಕ್ತಿಕ ಆಯ್ಕೆ. ಕುವೆಂಪು ರಾಮಾಯಣ is something fuck all shit” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

“ಅದನ್ನು ಫಾಲೋ ಮಾಡುವುದಾಗಲಿ, ರೆಫರ್‌ ಮಾಡುವುದಾಗಲಿ ಮಾಡಬೇಡಿ. ಮೂಲ ಕೃತಿಗಳನ್ನು ಓದಿ. ಕುವೆಂಪು ಆಗಲಿ, ಕುವೆಂಪು ಅಪ್ಪ ಆಗಲಿ, ಯಾರೇ ಆಗಲಿ, ಹಿಂದೂಗಳಾಗಿ ಮೂಲ ಕೃತಿಗಳನ್ನು ಓದಿ. ಪುರಸ್ಕಾರ ಬಂದರೆ ಅವರೇನು ದೊಡ್ಡವರಲ್ಲ, ಪುರಸ್ಕಾರ ಎಷ್ಟೋ ಜನರಿಗೆ ಬಂದಿದೆ. ಅವರ (ಬಿಜೆಪಿಯೇತರ) ಸರ್ಕಾರ ಇದ್ದಾಗ ದೇಶ ವಿರೋಧಿಗಳಿಗೆ ಕೂಡಾ ಪುರಸ್ಕಾರ ಬಂದಿದೆ” ಎಂದು ವಿವಾದ ಸೃಷ್ಟಿಸಿದ್ದಾರೆ.

ಅವರ ಹೇಳಿಕೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಯುವತಿಯು ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ಆಪ್ತೆ ಎಂದು ಆರೋಪಿಸಲಾಗಿದೆ. “ಕ್ಲಬ್-ಹೌಸಿನಲ್ಲಿರುವ ಚಕ್ರತೀರ್ಥನ ಸಂಬಂಧಿಗಳಿಗೇಕೆ ಕುವೆಂಪುರವರ ಮೇಲೆ ದ್ವೇಷ ?” ಎಂದು ಪ್ರಶ್ನಿಸಲಾಗಿದೆ.

 

ರಾಷ್ಟ್ರಕವಿ ಕುವೆಂಪು ಅವರನ್ನು ಬಲಪಂಥಿಯರು ನಿರಂತರವಾಗಿ ಗುರಿಯಾಗಿಸುತ್ತಲೇ ಬರುತ್ತಿದ್ದಾರೆ. ಸ್ವತಃ ರೋಹಿತ್‌ ಚಕ್ರತೀರ್ಥ ಅವರು ಕೂಡಾ ನಾಡಗೀತೆಯನ್ನು ಅವಹೇಳನ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಕುವೆಂಪು ಮೇಲಿನ ದಾಳಿಗಳು ಕೂಡಾ ಹೆಚ್ಚಾಗುತ್ತಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ದಿವ್ಯ ನಾಯಕ್ ಅವರ ಹೇಳಿಕೆಯನ್ನು ಹಲವಾರು ಜನರು ಖಂಡಿಸಿದ್ದು, ಬಲಪಂಥೀಯರಿಗೆ ಕುವೆಂಪು ಮತ್ತು ಅವರು ಬರೆದಿರುವ ಕೃತಿಗಳ ಮೇಲೆ ಅಷ್ಟೊಂದು ದ್ವೇಷ ಯಾಕೆ? ಇದಕ್ಕೆ ಅವರ ಪುರೋಹಿತಶಾಹಿ ಮನಸ್ಥಿತಿ ಕಾರಣವಲ್ಲವೇ ಎಂಬ ವಿಷಯದಲ್ಲಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದಾರೆ.

ಜೆಎನ್‌ಯು ಕನ್ನಡ ಅಧ್ಯಯನಪೀಠದ ಮುಖ್ಯಸ್ಥರಾಗಿದ್ದ ಪ್ರೊ. ಪುರುಷೋತ್ತಮ್ ಬಿಳಿಮಲೆಯವರು ಮಾತನಾಡಿ, “ಬಲಪಂಥೀಯರ ಜೊತೆಗೆ ಚರ್ಚೆಯೆ ಸಾಧ್ಯವಿಲ್ಲ. ಎ.ಕೆ ರಾಮಾನುಜ ಅವರು ಸುಮಾರು ಮುನ್ನೂರು ರಾಮಾಯಣಗಳ ಬಗ್ಗೆ ಬರೆದಿದ್ದಾರೆ. ಈ ದೇಶದ ಸಾವಿರಾರು ರಾಮಾಯಣಗಳಲ್ಲಿ ವಾಲ್ಮಿಕಿ ರಾಮಾಯಣ ಕೂಡಾ ಒಂದು. ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಯಾವುದೆ ಸಂಶೋಧಕರು ಒಪ್ಪಿಕೊಂಡಿಲ್ಲ ಹಾಗೂ ಐತಿಹಾಸಿಕವಾಗಿಯು ಅದು ದೃಡಪಟ್ಟಿಲ್ಲ. ಇದು ಕೋಳಿ ಮೊದಲೋ ಮೊಟ್ಟೆ ಮೊದಲೋ ಎಂಬಂತೆ” ಎಂದು ತಿಳಿಸಿದರು.

“ಬಲಪಂಥೀಯರು ಕುವೆಂಪು ಅವರನ್ನು ವಿರೋಧಿಸಲು ಬೇಕಾಗಿ ವಾಲ್ಮಿಕಿ ರಾಮಾಯಣವನ್ನು ತರುತ್ತಾರೆ. ರಾಮಾಯಣದ ಬಹುತ್ವದ ಬಗ್ಗೆ ಕುಮಾರವ್ಯಾಸನೇ ಆ ಕಾಲದಲ್ಲಿ ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂದು ಬರೆದಿದ್ದಾನೆ. ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತಾ ಆರೋಪಗಳು ರಾಜಕೀಯ ಪ್ರೇರೇಪಿತವಾಗಿದ್ದು, ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಪ್ರಾಧ್ಯಾಪಕ ಕೀಲಾರ ನಾಗೇಗೌಡ ಅವರು ಮಾತನಾಡಿ, “ಕುವೆಂಪು ಬದುಕಿದ್ದಾಗಲೂ ಅವರ ಮೇಲೆ ದಾಳಿ ನಡೆಸಲಾಗುತ್ತಿತ್ತು, ಈ ದಾಳಿ ಈಗಲೂ ಮುಂದುವರೆದಿದೆ. ಕುವೆಂಪು ಅವರು ವೈದಿಕ ಮೌಲ್ಯವನ್ನು ಮುರಿದು, ಸರ್ವೋದಯ ಕಾಣಬೇಕೆಂಬ ಪೂರ್ಣದೃಷ್ಟಿಯಲ್ಲಿ ರಾಮಾಯಣ ಬರೆದವರು. ಸರ್ವೋದಯ ಮತ್ತು ಪೂರ್ಣದೃಷ್ಟಿ ಇತರ ರಾಮಾಯಣದಲ್ಲಿ ಇರಲಿಲ್ಲ. ಅವರು ರಾಮಾಯಣಕ್ಕೆ ಹೊಸ ಮೌಲ್ಯ ಕಟ್ಟಿದರು. ಇದು ಕೆಲವು ಜನರಿಗೆ ಆಗಿಬರುವುದಿಲ್ಲ. ಆದ್ದರಿಂದ ಅವರಿಗೆ ಕುವೆಂಪು ಮೇಲೆ ದ್ವೇಷವಿದೆ. ಇವರಿಗೆ ವೈದಿಕತೆ ಮತ್ತು ಗಂಡಾಳ್ವಿಕೆ ಉಳಿಯಬೇಕು. ಹಾಗಾಗಿ ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಪ್ರತಿಪಾದಿಸುತ್ತಾರೆ” ಎಂದು ಹೇಳಿದ್ದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರು, “ಕುವೆಂಪು ಅವರು ಮಾನವತಾವಾದವನ್ನು ಪ್ರತಿಪಾದಿಸಿದವರು. ಜಾತಿ ಮತದ ಸಂಕೋಲೆ ಕಳಚಿ ಪ್ರತಿಯೊಬ್ಬರೂ ವಿಶ್ವ ಮಾನವರಾಗಬೇಕು ಎಂದು ಆಶಿಸಿದವರು. ಕ್ಲಬ್‌ಹೌಸ್‌ನಲ್ಲಿ ಅವರ ಬಗ್ಗೆ ಅವಾಚ್ಯ ಶಬ್ದ ಬಳಸಿದ ದಿವ್ಯಾ ನಾಯಕ್‌ ನಡೆ ಖಂಡನೀಯ” ಎಂದು ಹೇಳಿದರು.

ಕನ್ನಡ ಪರ ಹೋರಾಟಗಾರ, ರಣಧೀರ ಪಡೆಯ ಮುಖಂಡ ಹರೀಶ್ ಬೈರಪ್ಪ ಅವರು ದಿವ್ಯಾ ಅವರ ಹೇಳಿಕೆಯನ್ನು ಖಂಡಿಸಿದ್ದು, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಕುವೆಂಪು ಅವರ ವಿರುದ್ದ ಹಿಂದಿನಿಂದಲೂ ದಾಳಿಯಾಗುತ್ತಲೆ ಬಂದಿದೆ. ಈ ದಾಳಿ ಹೆಚ್ಚಾದಷ್ಟೂ ಅವರ ವಿಚಾರಧಾರೆಗಳು ಗಟ್ಟಿಯಾಗುತ್ತಲೆ ಬರುತ್ತಿದೆ, ಜೊತೆಗೆ ಪ್ರಸ್ತುತಗೊಳ್ಳುತ್ತಲೆ ಹೋಗುತ್ತಿದೆ. ಕುವೆಂಪು ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ, ರಾಜ್ಯ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ದಿ ಪ್ರಾಧಿಕಾರ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕಿತ್ತು. ಆದರೆ ಈ ಯಾರಿಗೂ ಅವು ಬೇಕಿಲ್ಲ, ಕುವೆಂಪು ಬೈಯ್ಯುವುದಕ್ಕೋಸ್ಕರವೇ ಈ ಇಲಾಖೆ ಪ್ರಾಧಿಕಾರವನ್ನು ನೇಮಕ ಮಾಡಿದಂತಿದೆ” ಎಂದು ಹರೀಶ್ ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ವಿಷಯ ಜ್ಞಾನ, ಬೌದ್ಧಿಕ ಸೂಕ್ಷ್ಮತೆ ಮತ್ತು ಗ್ರಹಿಕೆಯ ವಿಸ್ತಾರಗಳಿದ್ದವರು, ಪ್ರಸ್ತುತವೆನಿಸುತ್ತಿದ್ದ ಪ್ರತಿಯೊಂದು ವಿಷಯವನ್ನೂ ತರ್ಕಬದ್ಧವಾಗಿ, ಸರಳವಾಗಿ ಮತ್ತು ನಿಷ್ಠುರವಾಗಿ ವಿಮರ್ಶಿಸುತ್ತಿದ್ದವರು, ಕನ್ನಡದಲ್ಲಿ ಕುವೆಂಪು ಮಾತ್ರ! ಕುವೆಂಪು ಅವರನ್ನು ನಾನು ನೋಡಿಲ್ಲ; ಆದರೆ, ಅವರ ಪ್ರತಿಯೊಂದು ಕೃತಿಯಲ್ಲೂ ಅವರ ವ್ಯಕ್ತಿತ್ವ ಪ್ರಕಟಗೊಳ್ಳುತ್ತದೆ. ಅವರ ದಿವ್ಯ ಚೇತನ ಪ್ರಭಾವಿತಗೊಂಡ ಬಗೆಯನ್ನು ಕುಪ್ಪಳ್ಳಿಯಲ್ಲಿ ನೋಡಬಹುದು.

    ಅವರನ್ನು ಮತ್ತು, ಅವರ ಕೃತಿಗಳ ಆಳ ಮತ್ತು ವಿಸ್ತಾರವನ್ನು, ಪೂರ್ಣವಾಗಿ ಅರಿಯುವಷ್ಟು ನಮ್ಮಲ್ಲಿ ಹೆಚ್ಚಿನವರು ಬೆಳೆದಿಲ್ಲ ಎಂಬುದು ನನ್ನ ನಮ್ರ ತಿಳಿವಳಿಕೆ.

    ಸಾರ್ವಜನಿಕ ವೇದಿಕೆಗಳಲ್ಲಿ ಹೆಸರು ಮಾಡಲು, ಈ ಮಟ್ಟದ ಕೀಳು ಮಟ್ಟದ ಟೀಕೆ ಮಾಡಿದ ಈ ದೀವ್ಯಾ ನಾಯಕ್ ಗೆ ಮನೋವೈದ್ಯಕೀಯ ಚಿಕಿತ್ಸೆ ಅವಶ್ಯಕ ಎನ್ನಿಸುತ್ತದೆ.

  2. ಕುರುಡನೊಬ್ಬ ಆನೆಯನ್ನು ಮುಟ್ಟಿ ವರ್ಣಿಸಿದಂತಿದೆ. ಕುವೆಂಪು ಅವರ ವಿಚಾರಗಳು ಅನೇಕರನ್ನು ಜಾಗೃತ ಗೊಳಿಸಿದ ಸತ್ಯ ಎಲ್ಲೆಡೆ ಕಾಣುತ್ತಿದ್ದೇವೆ. ಶೂದ್ರ ಯುವಕರಿಗೆ ಧರ್ಮದ ಅಫೀಮು ಬಣ್ಣದ ಮಾತುಗಳಲ್ಲಿ ಬಿತ್ತಿ ಬೆಳೆ ತೆಗೆಯುವ ಮಂದಿಯ ಹುನ್ನಾರ ಬಯಲಾಗಿದೆ.
    ಗುಡಿ ಚರ್ಚು, ಮಸೀದಿಗಳು ಮೌಢ್ಯ ಬಿತ್ತುವ ಕೇಂದ್ರ ಗಳೆಂದು ಹೇಳಿದ ಮಾತು ಮಹಾ ಪೋಷಕರಾದ ಇವರಿಗೆ ಅರಗಿಸಿ ಕೊಳ್ಳಲು ಆಗಲಿಲ್ಲ ಎನ್ನುವುದು ಸತ್ಯ.

  3. ಕುವೆಂಪು ಮತ್ತು ಅವರ ಕೃತಿಗಳ ಬಗ್ಗೆ ಅವಹೇಳನವಾಗಿ ಮಾತನಾಡಿರುವುದು ಕಂಡನಾರ್ಹ.

  4. ಕುವೆಂಪು ರವರ ಪುಸ್ತಕಗಳ ಬಗ್ಗೆ ಅವಹೇಳನ ಮಾಡಿರುವ ದಿವ್ಯ ನಾಯಕ್ ರವರ ನಡವಳಿಕೆಯನ್ನು ಖಂಡಿಸುತ್ತೇನೆ

  5. ಮಹಾಚೇತನ ಕುವೆಂಪು ಅವರ ಬಗ್ಗೆ ಟೀಕಿಸಿರುವ ಮಹಾತಾಯಿ ನಿಮಗೆ ದೊಡ್ಡ ನಮಸ್ಕಾರ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...