Homeಕರ್ನಾಟಕಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

- Advertisement -
- Advertisement -

ಕನ್ನಡದ ಮಹತ್ವದ ಸಾಹಿತಿ ರಾಷ್ಟ್ರಕವಿ ಕುವೆಂಪುರವರನ್ನು ಮತ್ತು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಿರುವ ‘ಶ್ರೀರಾಮಾಯಣ ದರ್ಶನಂ’ ಕೃತಿಯ ಬಗ್ಗೆ ಅವಹೇಳಕಾರಿಯಾಗಿ ಹೀಯಾಳಿಸಿರುವ ಘಟನೆ ಸೋಮವಾರದಂದು ನಡೆದಿದೆ.

ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ನಲ್ಲಿ ‘ನಾಲೆಡ್ಜ್ ಹೌಸ್ ಕನ್ನಡ’ ಎಂಬ ಗ್ರೂಪಿನಲ್ಲಿ ನಡೆದ ಚರ್ಚೆಯೊಂದರಲ್ಲಿ ದಿವ್ಯ ನಾಯಕ್ ಎಂಬ ಬಿಜೆಪಿ ಬೆಂಬಲಿಗ ಯುವತಿಯೊಬ್ಬರು, “ಕುವೆಂಪು ಅವರಿಗೆ ಗೌರವ ಯಾಕೆ ಕೊಡಬೇಕು? ಯಾರಿಗಾದರೂ ಗೌರವ ಕೊಡುವುದು ಅಥವಾ ಕೊಡದೇ ಇರುವುದು ನನ್ನ ವೈಯಕ್ತಿಕ ಆಯ್ಕೆ. ಕುವೆಂಪು ರಾಮಾಯಣ is something fuck all shit” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

“ಅದನ್ನು ಫಾಲೋ ಮಾಡುವುದಾಗಲಿ, ರೆಫರ್‌ ಮಾಡುವುದಾಗಲಿ ಮಾಡಬೇಡಿ. ಮೂಲ ಕೃತಿಗಳನ್ನು ಓದಿ. ಕುವೆಂಪು ಆಗಲಿ, ಕುವೆಂಪು ಅಪ್ಪ ಆಗಲಿ, ಯಾರೇ ಆಗಲಿ, ಹಿಂದೂಗಳಾಗಿ ಮೂಲ ಕೃತಿಗಳನ್ನು ಓದಿ. ಪುರಸ್ಕಾರ ಬಂದರೆ ಅವರೇನು ದೊಡ್ಡವರಲ್ಲ, ಪುರಸ್ಕಾರ ಎಷ್ಟೋ ಜನರಿಗೆ ಬಂದಿದೆ. ಅವರ (ಬಿಜೆಪಿಯೇತರ) ಸರ್ಕಾರ ಇದ್ದಾಗ ದೇಶ ವಿರೋಧಿಗಳಿಗೆ ಕೂಡಾ ಪುರಸ್ಕಾರ ಬಂದಿದೆ” ಎಂದು ವಿವಾದ ಸೃಷ್ಟಿಸಿದ್ದಾರೆ.

ಅವರ ಹೇಳಿಕೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಯುವತಿಯು ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ಆಪ್ತೆ ಎಂದು ಆರೋಪಿಸಲಾಗಿದೆ. “ಕ್ಲಬ್-ಹೌಸಿನಲ್ಲಿರುವ ಚಕ್ರತೀರ್ಥನ ಸಂಬಂಧಿಗಳಿಗೇಕೆ ಕುವೆಂಪುರವರ ಮೇಲೆ ದ್ವೇಷ ?” ಎಂದು ಪ್ರಶ್ನಿಸಲಾಗಿದೆ.

 

ರಾಷ್ಟ್ರಕವಿ ಕುವೆಂಪು ಅವರನ್ನು ಬಲಪಂಥಿಯರು ನಿರಂತರವಾಗಿ ಗುರಿಯಾಗಿಸುತ್ತಲೇ ಬರುತ್ತಿದ್ದಾರೆ. ಸ್ವತಃ ರೋಹಿತ್‌ ಚಕ್ರತೀರ್ಥ ಅವರು ಕೂಡಾ ನಾಡಗೀತೆಯನ್ನು ಅವಹೇಳನ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಕುವೆಂಪು ಮೇಲಿನ ದಾಳಿಗಳು ಕೂಡಾ ಹೆಚ್ಚಾಗುತ್ತಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ದಿವ್ಯ ನಾಯಕ್ ಅವರ ಹೇಳಿಕೆಯನ್ನು ಹಲವಾರು ಜನರು ಖಂಡಿಸಿದ್ದು, ಬಲಪಂಥೀಯರಿಗೆ ಕುವೆಂಪು ಮತ್ತು ಅವರು ಬರೆದಿರುವ ಕೃತಿಗಳ ಮೇಲೆ ಅಷ್ಟೊಂದು ದ್ವೇಷ ಯಾಕೆ? ಇದಕ್ಕೆ ಅವರ ಪುರೋಹಿತಶಾಹಿ ಮನಸ್ಥಿತಿ ಕಾರಣವಲ್ಲವೇ ಎಂಬ ವಿಷಯದಲ್ಲಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದಾರೆ.

ಜೆಎನ್‌ಯು ಕನ್ನಡ ಅಧ್ಯಯನಪೀಠದ ಮುಖ್ಯಸ್ಥರಾಗಿದ್ದ ಪ್ರೊ. ಪುರುಷೋತ್ತಮ್ ಬಿಳಿಮಲೆಯವರು ಮಾತನಾಡಿ, “ಬಲಪಂಥೀಯರ ಜೊತೆಗೆ ಚರ್ಚೆಯೆ ಸಾಧ್ಯವಿಲ್ಲ. ಎ.ಕೆ ರಾಮಾನುಜ ಅವರು ಸುಮಾರು ಮುನ್ನೂರು ರಾಮಾಯಣಗಳ ಬಗ್ಗೆ ಬರೆದಿದ್ದಾರೆ. ಈ ದೇಶದ ಸಾವಿರಾರು ರಾಮಾಯಣಗಳಲ್ಲಿ ವಾಲ್ಮಿಕಿ ರಾಮಾಯಣ ಕೂಡಾ ಒಂದು. ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಯಾವುದೆ ಸಂಶೋಧಕರು ಒಪ್ಪಿಕೊಂಡಿಲ್ಲ ಹಾಗೂ ಐತಿಹಾಸಿಕವಾಗಿಯು ಅದು ದೃಡಪಟ್ಟಿಲ್ಲ. ಇದು ಕೋಳಿ ಮೊದಲೋ ಮೊಟ್ಟೆ ಮೊದಲೋ ಎಂಬಂತೆ” ಎಂದು ತಿಳಿಸಿದರು.

“ಬಲಪಂಥೀಯರು ಕುವೆಂಪು ಅವರನ್ನು ವಿರೋಧಿಸಲು ಬೇಕಾಗಿ ವಾಲ್ಮಿಕಿ ರಾಮಾಯಣವನ್ನು ತರುತ್ತಾರೆ. ರಾಮಾಯಣದ ಬಹುತ್ವದ ಬಗ್ಗೆ ಕುಮಾರವ್ಯಾಸನೇ ಆ ಕಾಲದಲ್ಲಿ ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂದು ಬರೆದಿದ್ದಾನೆ. ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತಾ ಆರೋಪಗಳು ರಾಜಕೀಯ ಪ್ರೇರೇಪಿತವಾಗಿದ್ದು, ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಪ್ರಾಧ್ಯಾಪಕ ಕೀಲಾರ ನಾಗೇಗೌಡ ಅವರು ಮಾತನಾಡಿ, “ಕುವೆಂಪು ಬದುಕಿದ್ದಾಗಲೂ ಅವರ ಮೇಲೆ ದಾಳಿ ನಡೆಸಲಾಗುತ್ತಿತ್ತು, ಈ ದಾಳಿ ಈಗಲೂ ಮುಂದುವರೆದಿದೆ. ಕುವೆಂಪು ಅವರು ವೈದಿಕ ಮೌಲ್ಯವನ್ನು ಮುರಿದು, ಸರ್ವೋದಯ ಕಾಣಬೇಕೆಂಬ ಪೂರ್ಣದೃಷ್ಟಿಯಲ್ಲಿ ರಾಮಾಯಣ ಬರೆದವರು. ಸರ್ವೋದಯ ಮತ್ತು ಪೂರ್ಣದೃಷ್ಟಿ ಇತರ ರಾಮಾಯಣದಲ್ಲಿ ಇರಲಿಲ್ಲ. ಅವರು ರಾಮಾಯಣಕ್ಕೆ ಹೊಸ ಮೌಲ್ಯ ಕಟ್ಟಿದರು. ಇದು ಕೆಲವು ಜನರಿಗೆ ಆಗಿಬರುವುದಿಲ್ಲ. ಆದ್ದರಿಂದ ಅವರಿಗೆ ಕುವೆಂಪು ಮೇಲೆ ದ್ವೇಷವಿದೆ. ಇವರಿಗೆ ವೈದಿಕತೆ ಮತ್ತು ಗಂಡಾಳ್ವಿಕೆ ಉಳಿಯಬೇಕು. ಹಾಗಾಗಿ ವಾಲ್ಮಿಕಿ ರಾಮಾಯಣವೇ ಮೂಲ ರಾಮಾಯಣ ಎಂದು ಪ್ರತಿಪಾದಿಸುತ್ತಾರೆ” ಎಂದು ಹೇಳಿದ್ದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರು, “ಕುವೆಂಪು ಅವರು ಮಾನವತಾವಾದವನ್ನು ಪ್ರತಿಪಾದಿಸಿದವರು. ಜಾತಿ ಮತದ ಸಂಕೋಲೆ ಕಳಚಿ ಪ್ರತಿಯೊಬ್ಬರೂ ವಿಶ್ವ ಮಾನವರಾಗಬೇಕು ಎಂದು ಆಶಿಸಿದವರು. ಕ್ಲಬ್‌ಹೌಸ್‌ನಲ್ಲಿ ಅವರ ಬಗ್ಗೆ ಅವಾಚ್ಯ ಶಬ್ದ ಬಳಸಿದ ದಿವ್ಯಾ ನಾಯಕ್‌ ನಡೆ ಖಂಡನೀಯ” ಎಂದು ಹೇಳಿದರು.

ಕನ್ನಡ ಪರ ಹೋರಾಟಗಾರ, ರಣಧೀರ ಪಡೆಯ ಮುಖಂಡ ಹರೀಶ್ ಬೈರಪ್ಪ ಅವರು ದಿವ್ಯಾ ಅವರ ಹೇಳಿಕೆಯನ್ನು ಖಂಡಿಸಿದ್ದು, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಕುವೆಂಪು ಅವರ ವಿರುದ್ದ ಹಿಂದಿನಿಂದಲೂ ದಾಳಿಯಾಗುತ್ತಲೆ ಬಂದಿದೆ. ಈ ದಾಳಿ ಹೆಚ್ಚಾದಷ್ಟೂ ಅವರ ವಿಚಾರಧಾರೆಗಳು ಗಟ್ಟಿಯಾಗುತ್ತಲೆ ಬರುತ್ತಿದೆ, ಜೊತೆಗೆ ಪ್ರಸ್ತುತಗೊಳ್ಳುತ್ತಲೆ ಹೋಗುತ್ತಿದೆ. ಕುವೆಂಪು ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ, ರಾಜ್ಯ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ದಿ ಪ್ರಾಧಿಕಾರ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕಿತ್ತು. ಆದರೆ ಈ ಯಾರಿಗೂ ಅವು ಬೇಕಿಲ್ಲ, ಕುವೆಂಪು ಬೈಯ್ಯುವುದಕ್ಕೋಸ್ಕರವೇ ಈ ಇಲಾಖೆ ಪ್ರಾಧಿಕಾರವನ್ನು ನೇಮಕ ಮಾಡಿದಂತಿದೆ” ಎಂದು ಹರೀಶ್ ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ವಿಷಯ ಜ್ಞಾನ, ಬೌದ್ಧಿಕ ಸೂಕ್ಷ್ಮತೆ ಮತ್ತು ಗ್ರಹಿಕೆಯ ವಿಸ್ತಾರಗಳಿದ್ದವರು, ಪ್ರಸ್ತುತವೆನಿಸುತ್ತಿದ್ದ ಪ್ರತಿಯೊಂದು ವಿಷಯವನ್ನೂ ತರ್ಕಬದ್ಧವಾಗಿ, ಸರಳವಾಗಿ ಮತ್ತು ನಿಷ್ಠುರವಾಗಿ ವಿಮರ್ಶಿಸುತ್ತಿದ್ದವರು, ಕನ್ನಡದಲ್ಲಿ ಕುವೆಂಪು ಮಾತ್ರ! ಕುವೆಂಪು ಅವರನ್ನು ನಾನು ನೋಡಿಲ್ಲ; ಆದರೆ, ಅವರ ಪ್ರತಿಯೊಂದು ಕೃತಿಯಲ್ಲೂ ಅವರ ವ್ಯಕ್ತಿತ್ವ ಪ್ರಕಟಗೊಳ್ಳುತ್ತದೆ. ಅವರ ದಿವ್ಯ ಚೇತನ ಪ್ರಭಾವಿತಗೊಂಡ ಬಗೆಯನ್ನು ಕುಪ್ಪಳ್ಳಿಯಲ್ಲಿ ನೋಡಬಹುದು.

    ಅವರನ್ನು ಮತ್ತು, ಅವರ ಕೃತಿಗಳ ಆಳ ಮತ್ತು ವಿಸ್ತಾರವನ್ನು, ಪೂರ್ಣವಾಗಿ ಅರಿಯುವಷ್ಟು ನಮ್ಮಲ್ಲಿ ಹೆಚ್ಚಿನವರು ಬೆಳೆದಿಲ್ಲ ಎಂಬುದು ನನ್ನ ನಮ್ರ ತಿಳಿವಳಿಕೆ.

    ಸಾರ್ವಜನಿಕ ವೇದಿಕೆಗಳಲ್ಲಿ ಹೆಸರು ಮಾಡಲು, ಈ ಮಟ್ಟದ ಕೀಳು ಮಟ್ಟದ ಟೀಕೆ ಮಾಡಿದ ಈ ದೀವ್ಯಾ ನಾಯಕ್ ಗೆ ಮನೋವೈದ್ಯಕೀಯ ಚಿಕಿತ್ಸೆ ಅವಶ್ಯಕ ಎನ್ನಿಸುತ್ತದೆ.

  2. ಕುರುಡನೊಬ್ಬ ಆನೆಯನ್ನು ಮುಟ್ಟಿ ವರ್ಣಿಸಿದಂತಿದೆ. ಕುವೆಂಪು ಅವರ ವಿಚಾರಗಳು ಅನೇಕರನ್ನು ಜಾಗೃತ ಗೊಳಿಸಿದ ಸತ್ಯ ಎಲ್ಲೆಡೆ ಕಾಣುತ್ತಿದ್ದೇವೆ. ಶೂದ್ರ ಯುವಕರಿಗೆ ಧರ್ಮದ ಅಫೀಮು ಬಣ್ಣದ ಮಾತುಗಳಲ್ಲಿ ಬಿತ್ತಿ ಬೆಳೆ ತೆಗೆಯುವ ಮಂದಿಯ ಹುನ್ನಾರ ಬಯಲಾಗಿದೆ.
    ಗುಡಿ ಚರ್ಚು, ಮಸೀದಿಗಳು ಮೌಢ್ಯ ಬಿತ್ತುವ ಕೇಂದ್ರ ಗಳೆಂದು ಹೇಳಿದ ಮಾತು ಮಹಾ ಪೋಷಕರಾದ ಇವರಿಗೆ ಅರಗಿಸಿ ಕೊಳ್ಳಲು ಆಗಲಿಲ್ಲ ಎನ್ನುವುದು ಸತ್ಯ.

  3. ಕುವೆಂಪು ಮತ್ತು ಅವರ ಕೃತಿಗಳ ಬಗ್ಗೆ ಅವಹೇಳನವಾಗಿ ಮಾತನಾಡಿರುವುದು ಕಂಡನಾರ್ಹ.

  4. ಕುವೆಂಪು ರವರ ಪುಸ್ತಕಗಳ ಬಗ್ಗೆ ಅವಹೇಳನ ಮಾಡಿರುವ ದಿವ್ಯ ನಾಯಕ್ ರವರ ನಡವಳಿಕೆಯನ್ನು ಖಂಡಿಸುತ್ತೇನೆ

  5. ಮಹಾಚೇತನ ಕುವೆಂಪು ಅವರ ಬಗ್ಗೆ ಟೀಕಿಸಿರುವ ಮಹಾತಾಯಿ ನಿಮಗೆ ದೊಡ್ಡ ನಮಸ್ಕಾರ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...