Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...