Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...