Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...