Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...