Homeಮುಖಪುಟತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...